Homeಚಳವಳಿನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ.

- Advertisement -
- Advertisement -

ಮಾನ್ಸೂನ್ ಸಂಸತ್ ಅಧಿವೇಶನ ಆರಂಭವಾಗಿದ್ದು ಸದನದ ಒಳಗೆ ಪೆಗಾಸಸ್ ಕಣ್ಗಾವಲು ಮತ್ತು ಕೋವಿಡ್ ನಿರ್ವಹಣೆಯಲ್ಲಿನ ವೈಫಲ್ಯದ ಕುರಿತು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಸದನದ ಹೊರಗಿನಿಂದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು ಜುಲೈ 22 ರಿಂದ ಜಂತರ್‌ಮಂತರ್‌ನಲ್ಲಿ ಕಿಸಾನ್ ಪಂಚಾಯತ್ ಹೋರಾಟ ನಡೆಸಲು ತೀರ್ಮಾನಿಸಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 8 ತಿಂಗಳಿನಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ, 200 ಮಂದಿ ರೈತರು ಜುಲೈ 22 ರಿಂದ ಜಂತರ್‌ ಮಂತರ್‌ನಲ್ಲಿ ಸದನ ಮುಗಿಯುವವರೆಗೂ ಪ್ರತಿದಿನ ರೈತ ಅಧಿವೇಶನ ನಡೆಸಲಿದ್ದಾರೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ‌ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನುಗಳ ಕುರಿತು ಚರ್ಚೆ ನಡೆಸಲು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ ಮಾತುಕತೆ ನಡೆಯದಿದ್ದರೆ, ರೈತರ ಪರವಾಗಿ ನಿರ್ಧಾರ ಬರದಿದ್ದರೆ, ಜುಲೈ 22 ರಿಂದ 200 ಮಂದಿ ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಾರೆ” ಎಂದು ಈ ಮುಂಚೆ ರಾಕೇಶ್ ಟಿಕಾಯತ್ ಹೇಳಿದ್ದರು. ನಂತರ ರೈತರು ಮತ್ತು ಪೊಲೀಸರ ನಡುವೆ ಹಲವಾರು ಸಂದಾನ ಸಭೆಗಳು ನಡೆದು ಪ್ರತಿಭಟನೆ ಜಾಗ ಜಂತರ್‌ ಮಂತರ್‌ಗೆ ಬದಲಾಗಿದೆ.

ಕಿಸಾನ್ ಪಾರ್ಲಿಮೆಂಟ್ ಪ್ರತಿ ದಿನವೂ ನಡೆಯಲಿದೆ. ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ. ನಂತರ ಉಳಿದ ಕಾಯ್ದೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ರೈತರು ತಿಳಿಸಿದ್ದಾರೆ.

“ಕೃಷಿ ಕಾನೂನುಗಳನ್ನು ಹಿಂಪಡೆಯದ ಸರ್ಕಾರ, ರೈತ ಪ್ರತಿಭಟನೆಯನ್ನು ಕೊನೆಗೊಳಿಸಲು ಹೇಳುತ್ತಿದ್ದಾರೆ. ರೈತರು 8 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸರ್ಕಾರದ ಆದೇಶಗಳನ್ನು ಪಾಲಿಸಲು ಅಲ್ಲ. ಸರ್ಕಾರ ಮಾತನಾಡಲು ಬಯಸಿದರೆ, ರೈತರ ಜೊತೆಗೆ ಮಾತನಾಡಬಹುದು, ಆದರೆ ಯಾವುದೇ ಷರತ್ತು ವಿಧಿಸಬಾರದು” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ.

ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದ್ದು, ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಯಿತು. ಸಾಮಾನ್ಯವಾಗಿ ಜುಲೈನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನವು ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‌‌ನಲ್ಲಿ ಪ್ರಾರಂಭವಾಗಿತ್ತು.


ಇದನ್ನೂ ಓದಿ; ರೈತರ ಪರ ಮಾತನಾಡಿದ್ದಕ್ಕೆ ಮಾಜಿ ಸಚಿವನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...