Homeಕರೋನಾ ತಲ್ಲಣಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಮೇ 2 ರಂದು ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ. ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ನಿರ್ದಿಷ್ಟವಾದ ವರದಿಯನ್ನೂ ಮಾಡಿಲ್ಲ ಎಂದು ಮಂಗಳವಾರ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಹೇಳಿದೆ.

ಆರೋಗ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು, ಆರೋಗ್ಯವು ರಾಜ್ಯ ಪಟ್ಟಿಯಲ್ಲಿರುವ ವಿಷಯವಾಗಿದೆ. ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರಗಳು ಕಾಳಜಿವಹಿಸಬೇಕು ಎಂದು ಹೇಳಿದ್ದಾರೆ.

“2ನೇ ಅಲೆಯಲ್ಲಿ ಸಾವುಗಳ ಬಗ್ಗೆ ವರದಿ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸಚಿವಾಲಯಕ್ಕೆ ಸಾವುಗಳ ಬಗ್ಗೆ ವರದಿಯನ್ನು ನೀಡಿವೆ. ಆದರೆ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ನಿರ್ದಿಷ್ಟ ವರದಿಯಿಲ್ಲ. ಹಾಗಾಗಿ ಆಮ್ಲಜನಕ ಕೊರತೆಯಿಂದ ಸಾವುಗಳು ಸಂಭವಿಸಿಲ್ಲ” ಎಂದು ಅವರು ಹೇಳಿದ್ದಾರೆ.

ಇದರೊಂದಿಗೆ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಬೇಡಿಕೆಯಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯ ಒಪ್ಪಿಕೊಂಡಿದೆ. ಹಾಗಿದ್ದ ಮೇಲೆ, ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಲಿಲ್ಲವೇ..? ಎಂಬ ಪ್ರಶ್ನೆಗಳು ಮತ್ತಷ್ಟು ಹುಟ್ಟಿಕೊಂಡಿವೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ಕೊರೊನಾ ರೋಗಿಗಳ ಸಾವಿಗೆ ಆಮ್ಲಜನಕ ಕೊರತೆ ಒಂದು ಕಾರಣ ಎಂದು ಉಲ್ಲೇಖಿಸಿದ ಕೆಲವು ಆಸ್ಪತ್ರೆಗಳ ಪಟ್ಟಿ ಹೀಗಿವೆ.

ಚಾಮರಾಜನಗರ ಜಿಲ್ಲಾಸ್ಪತ್ರೆ, ಕರ್ನಾಟಕ: ಮೇ 2 ರಂದು ರಾತ್ರಿ 10.30 ರಿಂದ ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕರ ಸಮಿತಿಯನ್ನು ರಚಿಸಿತ್ತು. ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎ.ಎಸ್.ವೇಣುಗೋಪಾಲ್ ಗೌಡ ನೇತೃತ್ವದ ಸಮಿತಿಯು, ಆಕ್ಸಿಜನ್‌ ಕೊರತೆಯಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಪ್ರಾಥಮಿಕ ವರದಿಯಲ್ಲಿ ದೃಢಪಡಿಸಿತ್ತು.

ಬಾತ್ರಾ ಆಸ್ಪತ್ರೆ, ದೆಹಲಿ: ಆಮ್ಲಜನಕದ ಕೊರತೆಯಿಂದಾಗಿ ತಮ್ಮ ಆಸ್ಪತ್ರೆಯಲ್ಲಿ 11 ರೋಗಿಗಳು ಮತ್ತು ವೈದ್ಯರು ಸಾವನ್ನಪ್ಪಿದ್ದಾರೆ ಎಂದು ದೆಹಲಿಯ ಬಾತ್ರಾ ಆಸ್ಪತ್ರೆ ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಸ್ಪತ್ರೆಯಲ್ಲಿ ಭಾರಿ ಪ್ರಮಾಣದ ಆಮ್ಲಜನಕ ಕೊರತೆಯಿದೆ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಂಶು ಬಂಕಟಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಜೈಪುರ ಗೋಲ್ಡನ್ ಆಸ್ಪತ್ರೆ, ದೆಹಲಿ: ಆಕ್ಸಿಜನ್ ಕೊರತೆಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಕೂಡ ಏಪ್ರಿಲ್ 24 ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಮ್ಲಜನಕದ ಕೊರತೆಯಿಂದಾಗಿ ಸಂಭವಿಸಿದ ಸಾವುಗಳ ಬಗ್ಗೆ ತನಿಖೆ ನಡೆಸಲು ದೆಹಲಿ ಸರ್ಕಾರ ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಜೂನ್ 4 ರಂದು ವರದಿ ಮಾಡಿದೆ.

ಆದರೆ, ಸಮಿತಿಯನ್ನು ಸ್ಥಾಪಿಸಲು ಒಕ್ಕೂಟ ಸರ್ಕಾರ ಅನುಮೋದನೆ ನೀಡಲಿಲ್ಲ ಎಂದು ಸಿಸೋಡಿಯಾ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ದೆಹಲಿ ಘಟಕವು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಇದೇ ರೀತಿಯ ಸಮಿತಿಯನ್ನು ರಚಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೇಖನವೊಂದು ಉಲ್ಲೇಖಿಸಿದೆ.

ಆನಂದ್ ಆಸ್ಪತ್ರೆ ಮತ್ತು ಉತ್ತರ ಪ್ರದೇಶದ ಕೆಎಂಸಿ ಆಸ್ಪತ್ರೆ: ಏಪ್ರಿಲ್ 27 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ಕನಿಷ್ಠ ಏಳು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಮೂವರು ಆನಂದ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಉಳಿದವರು ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಯ ಅಧಿಕಾರಿಗಳು ಆಕ್ಸಿಜನ್ ಕೊರತೆಯಿಂದ ಸಂಭವಿಸಿದ ಸಾವುಗಳನ್ನು ದೃಢಪಡಿಸಿದ್ದರು. ಆದರೆ ಮೀರತ್‌ನ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಅವರು ಆಮ್ಲಜನಕದ ಕೊರತೆಯಿಂದಾಗಿ ಉಂಟಾದ ಸಾವುಗಳ ಬಗ್ಗೆ ಆಸ್ಪತ್ರೆಗಳು ಯಾವುದೇ ವರದಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ನೀಲಕಂಠ ಆಸ್ಪತ್ರೆ, ಪಂಜಾಬ್: ವೈದ್ಯಕೀಯ ಆಮ್ಲಜನಕದ ಪೂರೈಕೆ ಕೊರತೆಯಿಂದಾಗಿ ಅಮೃತಸರದ ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಘಟನೆಗೆ ಆಸ್ಪತ್ರೆ ಅಧಿಕಾರಿಗಳು ಜಿಲ್ಲಾಡಳಿತವನ್ನು ಹೊಣೆಗಾರರನ್ನಾಗಿ ಮಾಡಿದ್ದರು. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಆದೇಶದ ಮೇರೆಗೆ ಇಬ್ಬರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿತ್ತು.

ರಾಜಸ್ಥಾನದ ಹೊಸ ವೈದ್ಯಕೀಯ ಕಾಲೇಜು ಆಸ್ಪತ್ರೆ: ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಜಸ್ಥಾನದ ಕೋಟಾದ ಹೊಸ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀಕ್ಷಕ ನಿಲೇಶ್ ಜೈನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಏಪ್ರಿಲ್ 21 ರಂದು ವರದಿ ಮಾಡಿದೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ಹರಿಯಾಣದ ಸೋನಿ ಬರ್ನ್ ಆಸ್ಪತ್ರೆ: ಹರಿಯಾಣದ ಹಿಸಾರ್‌ನ ಸೋನಿ ಬರ್ನ್ ಆಸ್ಪತ್ರೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಐದು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಸಾವುಗಳು ಆಕ್ಸಿಜನ್‌ ಕೊರತೆಯಿಂದಲೇ ಸಂಭವಿಸಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಆಮ್ಲಜನಕದ ಪೂರೈಕೆಯ ಕೊರತೆಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದೇನೆ, ಆದರೆ “ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ಆರೋಪಗಳನ್ನು ನಿರಾಕರಿಸಿದ್ದರು. ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಸಂಭವಿಸದ ಸಾವುಗಳ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ವರದಿ ಹೀಗಿದೆ.

ಆಮ್ಲಜನಕದ ಕೊರತೆ ಅಥವಾ ಆಮ್ಲಜನಕದ ದೊರೆಯದೇ ಇದ್ದಿದ್ದರಿಂದಾಗಿ ಸಂಭವಿಸಿದ ಸಾವುಗಳ ಸಂಖ್ಯೆಯ ಡೇಟಾಬೇಸ್ ಅನ್ನು ಸ್ವಯಂಸೇವಕರು, ಸಂಶೋಧಕರು, ವಕೀಲರು, ಜರ್ನಲಿಸ್ಟ್‌ಗಳು, ವಿದ್ಯಾರ್ಥಿಗಳು ಕಲೆಹಾಕಿದ್ದಾರೆ.  ಕೊನೆಯದಾಗಿ ಮೇ 27 ರಂದು ನವೀಕರಿಸಿದ ಡೇಟಾಬೇಸ್ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ದೇಶದಲ್ಲಿ 619 ಸಾವುಗಳು ದಾಖಲಾಗಿವೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...