Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

ಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

- Advertisement -
- Advertisement -

ಒಲಿಂಪಿಕ್ ಶುರು ಆಗಲಿಕ್ಕೆ ಬಂದವು. ಅದಕ್ಕ ಸಂಬಂಧಪಟ್ಟ ಒಂದು ಕತಿ ಕೇಳೋಣ. ಒಂದಾನೊಂದು ಕಾಲದಾಗ, ಏಟೊಂದು ಮುದ ಇದ್ದ ಕಾಲದಾಗ ಗ್ರೀಕ್ ದೇಶದೊಳಗ ಒಬ್ಬವ ರಾಜಾ ಇದ್ದ. ಅವನ ಹೆಸರು ಪೊಸಯಿಡೋನ. ಆತ ಸಮುದ್ರ, ಭೂಕಂಪನ ಹಾಗೂ ಕುದುರೆಗಳ ದೇವರು. ಅವನ ಕೈಯಾಗ ಒಂದು ತ್ರಿಶೂಲ ಇತ್ತು. ತನ್ನ ತ್ರಿಶೂಲದಿಂದ ಭೂಮಿಮ್ಯಾಲೆ ಗೆರೆ ಹೊಡದು ನೀರಿನ ಝರಿಗಳನ್ನು ಆತ ಸೃಷ್ಟಿ ಮಾಡುತ್ತಿದ್ದ. ಇಡೀ ವಿಶ್ವವನ್ನೇ ಅಲುಗಾಡಿಸಬಲ್ಲ ಶಕ್ತಿ ಉಳ್ಳವನು ಅಂತ ಅವನಿಗೆ ‘ಭೂಕಂಪನಾಧೀಶ’ ಅಂತ ಹೆಸರು ಇತ್ತು. ಆತ ಹುಚ್ಚು ಕುದುರೆಗಳನ್ನು ಹತೋಟಿಗೆ ತರುವ ಕುಶಲತೆ ಇದ್ದವನು ಅನ್ನುವುದು ಅವನ ಹೆಗ್ಗಳಿಕೆ. ಎಲ್ಲಕ್ಕಿಂತ ಮುಖ್ಯವಾಗಿ ಆತ ಒಲಿಂಪಿಕ್ ಆಟಗಾರ.

ಅಣ್ಣಾ ತಮ್ಮಂದಿರ ನಡುವೆ ಆಸ್ತಿ ಬಟವಾಡೆ ಆದ ನಂತರ ತನ್ನ ಪಾಲಿಗೆ ಬಂದ ಸಮುದ್ರವನ್ನ ಇಟಗೊಂಡು ತಮ್ಮ ಪೊಸಯಿಡೋನ ತಣ್ಣಗೆ ಕೂತವನು. ದೇವ ಸಹಜ ಆಸೆ-ಆಕಾಂಕ್ಷೆಗಳಿಂದ ಬಳಲಿದವನು. ಒಂದುನೂರಕ್ಕಿಂತ ಹೆಚ್ಚು ಪತ್ನಿ-ಉಪ ಪತ್ನಿಯರ ಕಟ್ಟಿಕೊಂಡು ಸುಮಾರು ಮೂರುನೂರು ಜನ ಮಕ್ಕಳಿಗೆ ಜನ್ಮ ಕೊಟ್ಟವನು.

ಅವನ ಹೆಂಡತಿ ಮೆಡುಸ್ಸಾ. ಅಕಿನ್ನ ಯಾರಾದರೂ ಕಣ್ಣಿನೊಳಗ ಕಣ್ಣು ಇಟ್ಟು ನೋಡಿದರ ಅವರು ಕಲ್ಲಾಗಿಬಿಡತಿದ್ದರು. ಅಕಿ ತಲಿಮ್ಯಾಲೆ ಕೂದಲು ಇರಲಿಲ್ಲ. ಅದರ ಬದಲಿಗೆ ಸಣ್ಣ ಸಣ್ಣ ಹಾವು ಇದ್ದವು. ಆ ಹಾವುಗಳನ್ನ ಅಕಿ ತನ್ನ ಸೇವಕರ ತರಹ ಉಪಯೋಗ ಮಾಡತಿದ್ದಳು. ಅಕಿಗೆ ಅಣಿಮಾ-ಗರಿಮಾ ಶಕ್ತಿಗಳು ಸಿದ್ಧಿಸಿಬಿಟ್ಟಿದ್ದವು. ತಾನು ಬಯಸಿದಲ್ಲಿ ಪ್ರವಾಸ ಮಾಡುವ ಶಕ್ತಿ ಇತ್ತು.

ಕೊನೆಗೆ ಅವಳ ಸಂಹಾರ ಮಾಡಿದವ ಯಾರು ಅಂದರ ಗ್ರೀಕ್ ದೇವತೆ ಪರ್ಸಿಯಸ್. ಆತ ತನ್ನ ಕಣ್ಣು ಕಟ್ಟಿಕೊಂಡು ಅವಳ ರುಂಡ ಕತ್ತರಿಸಿಬಿಟ್ಟ. ಆ ರುಂಡವನ್ನು ತನ್ನ ಈಟಿಗೆ ಚುಚ್ಚಿಕೊಂಡು ತಿರುಗಾಡುತ್ತಿದ್ದ. ಮೆಡುಸ್ಸಾ ಸತ್ತ ಮೇಲೆ ಸಹಿತ ಅವಳ ಶಾಪ ಕೊಡುವ ಶಕ್ತಿ ಹೋಗಲಿಲ್ಲ. ಇದನ್ನು ಅರಿತ ಪರ್ಸಿಯಸ್ ಅವಳ ತಲೆಯನ್ನ ಒಂದು ಆಯುಧದ ರೀತಿ ಬಳಸಿ ತನ್ನ ವೈರಿಗಳನ್ನು ಕೊಂದ.

ಇಷ್ಟೆಲ್ಲಾ ಆತಲ್ಲಾ, ಈಗ ನೋಡ್ರಿ. ಇಲ್ಲೇ ಐತಿ ಮಜಾ. ಮೆಡುಸ್ಸಾನ ಹತ್ಯೆ ಮಾಡುವಾಗ ಪರ್ಸಿಯಸ್ ಒಂದು ಚಮತ್ಕಾರಿ ವಾಹನ ಬಳಸಿದ್ದ. ಅದು ಯಾವುದು ಅಂದರ ಆಕಾಶದಲ್ಲಿ ಹಾರಾಡಬಲ್ಲ ಬಿಳಿಯ ಕುದುರೆ. ತನ್ನ ಎರಡೂ ಕಡೆಗಳಲ್ಲಿ ಇದ್ದ ರೆಕ್ಕೆಗಳನ್ನು ಬಳಸಿ ಅದು ಹಾರಬಹುದಿತ್ತು. ಮೂರುಲೋಕ ಸಂಚಾರ ಮಾಡಬಹುದಿತ್ತು.

ಆ ಶ್ವೇತಾಶ್ವದ ಹೆಸರು ಪೆಗಸಸ್. ಈ ದೈವಿ ಕುದುರೆಯ ತಾಯಿ ತಂದೆಗಳು ಯಾರು ಅಂದರ ಮೆಡುಸ್ಸಾ ಮತ್ತು ಪೊಸಯಿಡೋನ. ತನ್ನ ತಾಯಿಯ ಕೊಲೆಗಾರ ತನ್ನನ್ನು ವಾಹನವನ್ನಾಗಿ ಬಳಸಲಿಕ್ಕೆ ಹತ್ತಿಬಿಟ್ಟಾನು ಅಂತ ಅದಕ್ಕ ಗೊತ್ತಿತ್ತೋ ಇಲ್ಲೋ, ಒಟ್ಟಿನಲ್ಲಿ ತನ್ನ ಹೆತ್ತ ತಾಯಿಯ ಕೊಲೆಗೆ ಅದು ಭಾಗಿ ಆತು. ಹಿಂಗ ಮಾತೃ ಹತ್ಯೆ ಪಾಪದ ಲೇಪ ಅಂಟಿದ ಈ ಕುದುರೆ ಒಂದು ದಿನ ತನ್ನ ಮೇಲೆ ಏರಿದ ಸವಾರನನ್ನು ಕೆಳಗೆ ಕೆಡವಿ ಕೊಂದುಬಿಟ್ಟಿತು.

ಈ ಪೆಗಸಸ್ ಬುದ್ಧಿವಂತರ ದೇಶ ಅಂತ ಹೆಸರು ಪಡೆದ ಇಸ್ರೇಲ್‌ನ ಅತಿ ಬುದ್ಧಿವಂತರು ಸೃಷ್ಟಿಸಿದ ತಂತ್ರಾಂಶ. ಇದನ್ನು ಎನ್‌ಎಸ್‌ಒ ಅನ್ನೋ ಕಂಪನಿಯವರು ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಮಾರಾಟ ಮಾಡತಾರೆ. ಅದನ್ನು ಭಯೋತ್ಪಾದಕರು, ರಾಷ್ಟ್ರ ವಿರೋಧಿ ಶಕ್ತಿಗಳು ಮುಂತಾದವರ ವಿರುದ್ಧ ಗೂಢಚಾರಿಕೆ ಮಾಡಲಿಕ್ಕೆ ಉಪಯೋಗ ಮಾಡತಾರ.

ಭಾರತದ ಘನ ಸರಕಾರ ತೆರಿಗೆದಾರರು ಬೆವರು-ರಕ್ತ ಸುರಿಸಿ ಕಟ್ಟಿದ ಸುಂಕದ ಹಣವನ್ನು ತೊಗೊಂಡು ಈ ಬಿಳಿ ಕುದುರೆಯ ಬಲಕ್ಕೆ ಕಟ್ಟಿಬಿಟ್ಟೆದ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಇರೋ ದೇಶ ಸರ್ವಾಧಿಕಾರಿ ದೇಶಗಳು ಮತ್ತು ಅರೆ ಪ್ರಜಾಪ್ರಭುತ್ವವಾದಿ ದೇಶಗಳ ಸಾಲಿನಲ್ಲಿ ಸೇರಿಕೊಂಡುಬಿಟ್ಟದ.

ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ, ಮುಂತಾದ ದೇಶಗಳ ಜೊತೆಗೆ ಸ್ಪರ್ಧೆಗೆ ಬಿದ್ದಂಗ ಮಾಡಿ ಎರಡು ವರ್ಷದಲ್ಲಿ ಕನಿಷ್ಟ 600 ಕೋಟಿ ರೂಪಾಯಿ ಲಪಟಾಯಿಸಿಬಿಟ್ಟದ. ಸುಮಾರು ಮೂರು ನೂರು ಜನರ ಮ್ಯಾಲೆ ಎರಡು ವರ್ಷಗಟ್ಟಲೆ ಗೂಢಚಾರಿಕೆ ಮಾಡಿ ಅವರ ಖಾಸಗಿ ಮಾಹಿತಿ ಎಲ್ಲ ಸಂಗ್ರಹ ಮಾಡೆದ.

ಬರೆ ಇಷ್ಟ ಇದ್ದರ ಇದು ಸುದ್ದಿ ಆಗ್ತಾ ಇರಲಿಲ್ಲ. ಈ ಬಿಳಿ ರೆಕ್ಕೆಯ ಕುದುರೆಯಿಂದ ಯಾರದಾದರೂ ಫೋನುಗಳನ್ನು ಅದರ ಮಾಲೀಕರಿಗೆ ಗೊತ್ತಿಲ್ಲದೆ ಚಾಲೂ-ಬಂದ್ ಮಾಡಬಹುದು. ಅವರ ಫೋನು ಕ್ಯಾಮರಾದಿಂದ ಫೋಟೋ ತೆಗಿಬಹುದು, ವಿಡಿಯೋ ತೆಗಿಬಹುದು. ಅವರ ಮೆಸೇಜು, ವಾಟ್ಸಪ್ಪು, ಈಮೇಲೂ, ಇತ್ಯಾದಿಗಳ ಕಾಪಿ ಮಾಡಬಹುದು. ಅವರ ಬ್ಯಾಂಕ್ ವಹಿವಾಟಿನ ಮಾಹಿತಿ ಪಡೆಯಬಹುದು. ಅವರ ಆರೋಗ್ಯದ ಎಲ್ಲ ಮಾಹಿತಿ-ಉದಾಹರಣೆಗೆ ಅವರಿಗೆ ಇರುವ ಕಾಯಿಲೆ, ಅವರು ಆಪರೇಷನ್ ಮಾಡಿಸಿಕೊಂಡ ಮಾಹಿತಿ, ತೊಗೊಳ್ಳುವ ಔಷಧಿ, ಅವರ ವೈದ್ಯರ ನಂಬರ್ ಎಲ್ಲ ಸಂಗ್ರಹ ಮಾಡಬಹುದು.

ಇನ್ನೊಂದು ಖತರನಾಕ ವಿಚಾರ ಏನು ಅಂದರ ಎಲ್ಲೋ ದೂರ ಇಸ್ರೇಲ್-ಅಮೆರಿಕ ದೆಹಲಿಯೊಳಗ ಕುಳಿತುಕೊಂಡ ಇಂಜಿನಿಯರ್‌ಗಳು ಅಥವಾ ಪೊಲೀಸರು ನಿಮ್ಮ ಫೋನಿನ ಒಳಗ ನಿಮ್ಮನ್ನು ಕಾನೂನಿನ ಕುಣಿಕೆಗೆ ಸಿಕ್ಕಿಸುವಂತಹ ಮಾಹಿತಿ ಕಳಿಸಬಹುದು. ಅದು ನಿಮಗೆ ಗೊತ್ತಿರಲಾರದೆ ನಿಮ್ಮ ಫೋನಿನ ಒಳಗೆ ಬಂದು ಕೂತುಬಿಡುತ್ತದೆ. ನೀವು ಫೋನು ಬದಲು ಮಾಡಿದರೂ ಹೋಗೋದಿಲ್ಲ.

ನೀವು ನಿಮ್ಮ ಸ್ನೇಹಿತರಿಗೆ “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಮಂಡಕ್ಕಿ ಮಿರ್ಚಿ ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಹಾಲು, ಎರಡು ನೂರು ಗ್ರಾಂ ಚಹಾಪುಡಿ ತೊಗೊಂಡು ಬರ್ರಿ” ಅಂತ ಸಂದೇಶ ಕಳಿಸಿದರಿ ಅಂತ ತಿಳಕೋರಿ. ನಿಮ್ಮ ವಿರೋಧಿಗಳು “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಟೈಮ್ ಬಾಂಬ್ ತಯಾರು ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಸೋಡಿಯಂ ನೈಟ್ರೇಟ್ ದ್ರಾವಣ, ಎರಡು ನೂರು ಗ್ರಾ ಆರ್‌ಡಿ ಎಕ್ಸ್ ತೊಗೊಂಡು ಬರ್ರಿ” ಅಂತ ಬದಲು ಮಾಡಬಹುದು.

ಅದರ ಆಧಾರದ ಮೇಲೆ ನಿಮ್ಮನ್ನ ದೇಶದ್ರೋಹದ ಕಾನೂನು ಅಡಿಯಲ್ಲಿ ಒದ್ದು ಒಳಗಹಾಕಬಹುದು.

ಹಿಂದಿ ಪಿಕ್ಚರ್‌ದಾಗ ಪೊಲೀಸ್ ಇನ್ಸ್ಪೆಕ್ಟರ್ ಅಮರೀಷ ಪುರಿ ’ಅಬೇ ಸಾಲೇ, ನಿನ್ನ ಮನಿಯೊಳಗ ಗಾಂಜಾ ಪೊಟ್ಟಣ ಇಟ್ಟು ಬಿಡತೆನಿ. ನಿನ್ನನ್ನ ಜೈಲಿಗೆ ಹಾಕತೆನಿ’ ಅಂತ ಧಮಕಿ ಕೊಡತನಲ್ಲ, ಅದಕ್ಕೂ ಇದಕ್ಕೂ ಏನು ವ್ಯತ್ಯಾಸ ಇಲ್ಲ. ಹಿಂಗ ಆಗಬಹುದು ಅಂತ ಅಲ್ಲ. ಆಗಿ ಹೊಗೇದ.

“ಇದೇನು ಹೊಸದಲ್ಲ. ಹಿಂದಿನ ಎಲ್ಲ ಸರಕಾರಗಳು ಗೂಢಚಾರಿಕೆ ಮಾಡಿದವರೇ” ಅಂತ ಹೇಳಿ ನಮ್ಮ ಡೋಂಟ್ ಕೇರ್ ಕುಮಾರಣ್ಣ ಅವರು ಹೇಳಿಕೆ ಕೊಟ್ಟಾರ. ಹಿಂದಿನವರು ಗೂಢಚಾರಿಕೆ ಮಾಡಿರಬಹುದು. ಅದರ ಅಮರೀಷ ಪುರಿ ತಂತ್ರ ಉಪಯೋಗಿಸಿ ನಿಮ್ಮ ಫೋನ್‌ದಾಗ ಬಾಂಬ್ ತಯಾರಿಸುವ ಸಂದೇಶ ಕಳಿಸಿಲ್ಲ. ಹಂಗ ಮಾಡಲಿಕ್ಕೆ ಆವಾಗ ತಂತ್ರಜ್ಞಾನನೂ ಇರಲಿಲ್ಲ, ಅಂತ ತಿಳಿರಿ.

ಈಗ ಸದ್ಯ ಟಿವಿ ಎರಡು ದೊಡ್ಡ ಸುದ್ದಿ ತೋರಸಲಿಕ್ಕೆ ಹತ್ತಿದಾವು. ಒಂದು ಈ ಗ್ರೀಕ್ ಪುರಾಣದ ಕತಿ. ಇನ್ನೊಂದು ನಮ್ಮ ಕುಡ್ಲದ ಹುಡುಗಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ ಪುರಾಣದ ಕತಿ. ಸುಮ್ಮನೇ ಕುಂದರಲಾರದೆ ಕುಂದ್ರಾ ಅವರು ತಯಾರಿಸಿದರು ಎನ್ನಲಾದ ಅಶ್ಲೀಲ ಚಿತ್ರದ ಬಿಸಿ ಬಿಸಿ ಸುದ್ದಿ. ನೀವು ಯಾವುದನ್ನು ನೋಡತಿರಿ ಅನ್ನೋದರ ಮ್ಯಾಲೆ ನಿಮ್ಮ ಮತ್ತು ಈ ದೇಶದ ಭವಿಷ್ಯ ನಿರ್ಭರ ಆಗತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...