Homeಚಳವಳಿಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

- Advertisement -
- Advertisement -

ದಟ್ಟ ಕವಿದ ಮೋಡ, ಮಳೆಗಾಳಿ. ಬದಲಾವಣೆಗೆ ಮುನ್ಸೂಚನೆ ನೀಡುವಂತಹ ವಾತಾವರಣ. ಹೋರಾಟದ ಕಿಚ್ಚನ್ನು ಹೊತ್ತು ತಂದ ಹೋರಾಟಗಾರರು… ಇಂತಹ ಪರಿಸರದಲ್ಲಿ ಹಾರಾಡಿದ್ದು ಹಸಿರುಶಾಲು, ಕೇಳಿಸಿದ್ದು ಉಳುವ ಯೋಗಿ ನೋಡಲ್ಲಿ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆ..

ಬಂಡಾಯದ ನೆಲ ನರಗುಂದದಲ್ಲಿ ಬುಧವಾರ ಬೆಳಗಿನಿಂದಲೇ ಹಸಿರು ಶಾಲುಗಳ ಸಂಚಲನ. 41 ವರ್ಷಗಳ ಹಿಂದೆ ತಮ್ಮ ಹಕ್ಕುಗಳಿಗೆ, ಸರ್ಕಾರದ ದಬ್ಬಾಳಿಕೆಯ ವಿರುದ್ಧ ಸಿಡಿದು ಜೀವ ತ್ಯಾಗ ಮಾಡಿದ ರೈತರ ನೆನಪಿನಲ್ಲಿ ಹುತಾತ್ಮರ ದಿನಾಚರಣೆಗೆ ಇಡೀ ಊರು ಹುರುಪಿನಲ್ಲಿತ್ತು.

ಮಹದಾಯಿ ನೀರಿಗಾಗಿ ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ಹೋರಾಟ, ರಾಜ್ಯದ ರೈತರನ್ನು ಕಂಗೆಡಿಸಿರುವ ಭೂಸುಧಾರಣೆ ಕಾಯ್ದೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಣ ಕಹಳೆ ಮೊಳಗಿಸುವ ಉತ್ಸಾಹವೂ ಸೇರಿತ್ತು. ಈ ದಿನವನ್ನು ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಸಂಕಲ್ಪ ದಿನವನ್ನಾಗಿ ಆಚರಿಸಲು ನಾಡಿನ ಎಲ್ಲ ಭಾಗದಿಂದ ರೈತರು ಆಗಮಿಸಿದ್ದರು.

ಗದಗ ಜಿಲ್ಲೆಯ ರೋಣ ಪಟ್ಟಣದಿಂದ ನರಗುಂದಕ್ಕೆ ಆಗಮಿಸಿದ ನೂರಾರು ರೈತರ ಪಾದಯಾತ್ರೆ ಮೂಲಕ ಗಮಿಸಿದ್ದು, ಪಾದಯಾತ್ರೆಯಲ್ಲಿ ಹಲವು ರಾಜ್ಯಗಳ ರೈತ ಮುಖಂಡರು ಭಾಗಿಯಾಗಿದ್ದಾರೆ. ನರಗುಂದ ಹುತಾತ್ಮರ ಸ್ಮಾರಕಕ್ಕೆ ಮಾಲಾಪರ್ಣೆ ಮಾಡಿದ ಬಳಿಕ ವೇದಿಕೆಗೆ ಆಗಮಿಸಿದರು.

ಕುವೆಂಪು ವಿರಚಿತ ಉಳುವ ಯೋಗಿಯ ನೋಡಲ್ಲಿ ರೈತ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೆಹಲಿಯ ಗಡಿಗಳಲ್ಲಿ ಎಂಟು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿರುವ ಮುಖಂಡರುಗಳಾದ ಭಾರತೀಯ ಕಿಸಾನ್‌ ಯೂನಿಯನ್‌ನ ಹರ್ನೇಕ್‌ ಸಿಂಗ್, ಜೈ ಕಿಸಾನ್‌ ಸಂಘಟನೆಯ ದೀಪಕ್‌ ಲಾಂಬ ಅವರು ಮೂರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಚಿತ್ರ: ರಾಜಶೇಖರ್‌ ಅಕ್ಕಿ

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ದೀಪಕ್‌ ಲಾಂಬ ಅವರು, ‘ಒಕ್ಕೂಟ ಸರ್ಕಾರದ ಕೃಷಿ ಮಂತ್ರಿಗೆ ಅವರೇ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಯಾವುವು ಎಂಬುದು ಗೊತ್ತಿಲ್ಲ. ಆದರೂ ಸರ್ಕಾರ ಒಂದು ಹೆಸರಿಟ್ಟಿದೆ. ನಾವು ಅದಕ್ಕೊಂದು ಹೆಸರಿಟ್ಟಿದ್ದೇವೆ. ಅಗತ್ಯವಸ್ತುಗಳ ಕಾಯ್ದೆ ಎಂದು ಅವರು ಕರೆದಿದ್ದಾರೆ, ನಾವು ಕಾನೂನು ಮುಕ್ತಗೊಳಿಸುವ ಕಾಯ್ದೆ, ಎರಡನೆಯದು, ಎಪಿಎಂಸಿ ಕೊನೆಗೊಳಿಸುವ ಮಾತಾಡುವ ಕಾಯ್ದೆ, ಅದನ್ನು ನಾವು ಮಾರುಕಟ್ಟೆ ಕೊಲೆ ಮಾಡುವ ಕಾಯ್ದೆ, ಮೂರನೆಯದು, ಕಾಂಟ್ರ್ಯಾಕ್ಟ್‌ ಫಾರ್ಮಿಂಗ್‌ ಬಗ್ಗೆ ಹೇಳುತ್ತದೆ, ಅದನ್ನು ಕೃಷಿ ಬಂದ್‌ ಮಾಡಿದ ಕಾನೂನು ಎಂದು ಕರೆದಿದ್ದೇವೆ. ಇವೇ ಕೃಷಿ ಕಾಯ್ದೆಗಳ ಉದ್ದೇಶವನ್ನು ತಿಳಿಸುತ್ತವೆ ಭಾವಿಸುತ್ತೇನೆ’ ಎಂದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿಶ್ಲೇಷಿಸಿದರು.

ಕಪ್ಪು, ತೆರಿಗೆ ವಿನಾಯಿತಿ ವಿಷಯದಲ್ಲಿ ಸುಳ್ಳು ಭರವಸೆ ನೀಡಿದ ಈ ಸರ್ಕಾರ, ರೈತರ ವಿಷಯದಲ್ಲೂ ಭರವಸೆಯ ನೀಡಿತ್ತು. ಈಗ ಅದನ್ನು ಮರೆತು ಅಹಂಕಾರದಿಂದ ಕಾಯ್ದೆಗಳನ್ನು ಜಾರಿಗೆ ತಂದಿದೆ. ಮಾಧ್ಯಮದವರು ಈ ಕಾಯ್ದೆಗಳನ್ನು ಸರ್ಕಾರ ಯಾವಾಗ ಹಿಂಪಡೆಯುತ್ತದೆ ಎಂದು ನಮಗೆ ಕೇಳುತ್ತಾರೆ. ಮೋದಿ ಎಷ್ಟು ತಡ ಮಾಡುತ್ತಾರೆ ಅಷ್ಟು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು.

“ಸರ್ಕಾರವನ್ನು ಪ್ರಶ್ನಿಸುವುದು ದೇಶದ ಪ್ರತಿ ನಾಗರಿಕನ ಹಕ್ಕು. ಸಂಯುಕ್ತ ಕಿಸಾನ್‌ ಮೋರ್ಚಾ ಇದನ್ನೇ ಮಾಡುತ್ತಾ ಬಂದಿದೆ. ಇಷ್ಟು ದಿನ ಬಿಜೆಪಿಯ ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಾ ಬಂದಿದ್ದೇವೆ. ಈಗ ಇದರ ಮುಂದಿನ ಹಂತ ಆದೇಶ ಕೊಡುವುದು. ಈ ಹಿನ್ನೆಲೆಯಲ್ಲಿ ಕಳೆದ 17ನೇ ತಾರೀಖು ಜನರ ವಿಪ್‌ ಜಾರಿ ಮಾಡಿದ್ದೇವೆ” ಎಂದು ದೀಪಕ್‌ ಲಾಂಬ ಹೋರಾಟದ ಸ್ವರೂಪವನ್ನು ವಿವರಿಸಿದರು.

ದೆಹಲಿಯಲ್ಲಿ ಚಳಿಗಾಲದ ಅಧಿವೇಶನದ ಉದ್ದಕ್ಕೂ ಸಂಸತ್‌ ಎದುರು ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ಅಧಿವೇಶನ ಸಂಸತ್ತಿನ ಒಳಗೆ, ರೈತರ ಸಂಸತ್ತು ಸಂಸತ್‌ ಭವನದ ಹೊರಗೆ ನಡೆಯಲಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಹೋರಾಡೋಣ, ಗೆಲ್ಲೋಣ ಇದೇ ನಮ್ಮ ಘೋಷವಾಕ್ಯ ಎಂದು ಹೇಳಿದರು.

ಐವತ್ತಾರು ಇಂಚಿನ ಎದೆಯ ಮೋದಿಯವರಲ್ಲಿ ಭಯ ಕಾಣುತ್ತೇವೆ. ನಾವು ಹುತಾತ್ಮರ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇವೆ. ನಮ್ಮನ್ನು ನಾವು ಎಲ್ಲಿ ಹೋಗುತ್ತಿದ್ದೇವೆ, ಏನು ತಿಂದೆವು, ಏನು ಮಾಡುತ್ತಿದ್ದೇವೆ ಎಂದು ಹಿಂಬಾಲಿಸುತ್ತಿದ್ದಾರೆ. ಸಂತ ಹೆದರುವುದಿಲ್ಲ. ಕಳ್ಳನಿಗೆ ಭಯವಿರುತ್ತದೆ. ದೆಹಲಿಯಲ್ಲಿ ಅಷ್ಟೇ, ಕರ್ನಾಟಕಕ್ಕೂ ಬಂದು ಮೋದಿಯವರಲ್ಲಿ ಭಯವಿರುವುದು ನಮಗೆ ಗೊತ್ತಾಗುತ್ತಿದೆ’ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ನಾಯಕ ಹರ್ನೇಕ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ಚಿತ್ರ: ರಾಜಶೇಖರ್‌ ಅಕ್ಕಿ

ನಾವು ಒಂದು ಕಿಚ್ಚನ್ನು ಇಲ್ಲಿಗೆ ತಂದಿದ್ದೇವೆ. ನೀವು ಸ್ವರ್ಗದಷ್ಟು ಸಮೃದ್ಧವಾದ ಸ್ಥಳ. ಆದರೆ ಸ್ವರ್ಗವಾಗಿಲ್ಲ. ದೆಹಲಿಯ ಗಡಿಗಳಲ್ಲಿ ಉರಿಸುತ್ತಿರುವ ಈ ಕಿಚ್ಚನ್ನು ಇಲ್ಲಿಯೂ ನಿಮ್ಮ ಎದೆಗೆ ತಾಕಬೇಕೆಂದು ಬಯಸುತ್ತಿದ್ದೇವೆ. ಮೋದಿ ಮತ್ತು ಯೋಗಿಯಂತಹವರನ್ನು ಕುಕೃತ್ಯಗಳನ್ನು ಸುಡಲು ಈ ಕಿಚ್ಚು ಬೇಕು. ಅದನ್ನು ಕರ್ನಾಟಕಕ್ಕೆ ತಂದಿದ್ದೇವೆ. ಇಲ್ಲೂ ಜೀವಂತವಾಗಿ ಪ್ರಜ್ವಲಿಸುತ್ತದೆ ಎಂಬ ನಂಬಿಕೆ ಇದೆ. ಇದೇ ಬೆಂಕಿಯಿಂದ ಐವತ್ತಾರು ಎದೆಯೂ ನಡುಗಿ ಹೋಗಿದೆ ಎಂದು ಹರ್ನೇಕ್‌ ಸಿಂಗ್‌ ಹೇಳಿದರು.

ಕಾರ್ಯಕ್ರಮಕದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾದ ಚಾಮರಸ ಪಾಟೀಲ್‌, ಮಾಜಿ ಶಾಸಕ ಬಿ ಆರ್‌ ಪಾಟೀಲ್‌, ರೈತ ಮುಖಂಡರುಗಳಾದ, ಮಧುಸೂದನ್‌ ತಿವಾರಿ, ರೈತ ಮಹಿಳಾ ಮುಖಂಡರಾದ ಲಲಿತಾ ಮತ್ತು ಮಂಜುಳಾ, ಸಾಮಾಜಿಕ ಕಾರ್ಯಕರ್ತ ಎಸ್ ಆರ್ ಹಿರೇಮಠ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ, ಸಂಯುಕ್ತ ಹೋರಾಟ ಕರ್ನಾಟಕ, ಭಾರತೀಯ ಕೃಷಿಕ್‌ ಸಮಾಜ, ಮಹದಾಯಿ ನೀರಿಗಾಗಿ ಮಹಾವೇದಿಕೆ, ಕರ್ನಾಟಕ ರೈತ ಸೇನೆ, ಜನಾಂದೋಲನ ಮಹಾಮೈತ್ರಿ, ಉತ್ತರ ಕರ್ನಾಟಕ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೃಪೆ: ಅನ್ನದ ಋಣ


ಇದನ್ನೂ ಓದಿ:  ನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...