Homeಮುಖಪುಟರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಈ ವ್ಯವಹಾರದಿಂದ ರಾಜ್‌ ಕುಂದ್ರಾ ಅವರು ಪ್ರತಿದಿನ 6 ರಿಂದ 8 ಲಕ್ಷ ರೂ. ಸಂಪಾದನೆ ಮಾಡುತ್ತಿದ್ದರು ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಮಿಲಿಂದ್ ಭರಂಬೆ ತಿಳಿಸಿದ್ದಾರೆ. ರಾಜ್‌ ಕುಂದ್ರಾ ಅವರು ಯುಕೆ ಮೂಲದ ಬ್ರದರ್-ಇನ್‌-ಲಾ ಪ್ರದೀಪ್ ಬಕ್ಷಿಯ ಕೆನ್ರಿನ್ ಲಿಮಿಟೆಡ್ ಜೊತೆ ಕೈಜೋಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ರಾಜ್ ಕುಂದ್ರಾ ಅವರು ಭಾರತದಿಂದ ವೀಡಿಯೊಗಳನ್ನು ಹಾಟ್‌ಶಾಟ್ ಎಂಬ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಲು ಸಾಧ್ಯವಾಗದ ಕಾರಣ, ಅವರು ಅವುಗಳನ್ನು ವೆಟ್ರಾನ್ಸ್‌ಫರ್ ಮೂಲಕ ವಿದೇಶಿ ಪ್ಲಾಟ್‌ಫಾರ್ಮ್‌ಗೆ ಕಳುಹಿಸುತ್ತಿದ್ದರು” ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದರು.

“ಮುಂಬೈ ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಹಾಟ್‌ಶಾಟ್ ಚಿತ್ರಗಳು, ವಿಡಿಯೋ ತುಣುಕುಗಳು ಮತ್ತು ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಉದ್ಯಮಿ ರಾಜ್ ಕುಂದ್ರಾ ಅವರು ಈ ವ್ಯವಹಾರದಿಂದ ಪ್ರತಿದಿನ ಸುಮಾರು 6 ರಿಂದ 8 ಲಕ್ಷಗಳನ್ನು ಗಳಿಸುತ್ತಿದ್ದರು. ಹಣಕಾಸಿನ ವಹಿವಾಟಿನ ದಾಖಲೆಗಳು ಸಾವಿರಾರು ಸಂಖ್ಯೆಯಲ್ಲಿವೆ. ನಿಖರವಾದ ಗಳಿಕೆಯನ್ನು ಪಡೆಯಲು ನಾವು ವಿವರಗಳನ್ನು ವಿಶ್ಲೇಷಿಸುತ್ತಿದ್ದೇವೆ. ಇದನ್ನು ಅಪರಾಧದ ಆದಾಯವೆಂದು ಪರಿಗಣಿಸಲಾಗುತ್ತದೆ. ಇಲ್ಲಿಯವರೆಗೆ ನಾವು ವಿವಿಧ ಖಾತೆಗಳಲ್ಲಿ 7.5 ಕೋಟಿ ರೂಗಳನ್ನು ಸ್ಥಗಿತಗೊಳಿಸಿದ್ದೇವೆ” ಎಂದು ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ಈಗ ಹೆಚ್ಚು ಪ್ರಚಲಿತದಲ್ಲಿರುವ ವೆಬ್ ಶೋಗಳಲ್ಲಿ ಅವಕಾಶ ನೀಡುವ ನೆಪದಲ್ಲಿ ಸಣ್ಣ ಸಣ್ಣ ನಟರನ್ನು ಆಮಿಷಕ್ಕೆ ಒಳಪಡಿಸಲಾಗಿದೆ. ಅವರನ್ನು ಬೋಲ್ಡ್‌ ಸೀನ್‌ಗಳಲ್ಲಿ ನಟಿಸುವಂತೆ ಕೇಳಲಾಗಿದೆ. ಅವರ ಇಚ್ಛೆಗೆ ವಿರುದ್ದವಾಗಿ ಅರೆ-ನಗ್ನ ಮತ್ತು ನಗ್ನ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗೆ ದೌರ್ಜನ್ಯಕ್ಕೆ ಒಳಗಾದವರಲ್ಲಿ ಕೆಲವರು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಈ ಹಿಂದೆ ಭರಂಬೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದರು.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...