Homeಮುಖಪುಟರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಈ ವ್ಯವಹಾರದಿಂದ ರಾಜ್‌ ಕುಂದ್ರಾ ಅವರು ಪ್ರತಿದಿನ 6 ರಿಂದ 8 ಲಕ್ಷ ರೂ. ಸಂಪಾದನೆ ಮಾಡುತ್ತಿದ್ದರು ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಮಿಲಿಂದ್ ಭರಂಬೆ ತಿಳಿಸಿದ್ದಾರೆ. ರಾಜ್‌ ಕುಂದ್ರಾ ಅವರು ಯುಕೆ ಮೂಲದ ಬ್ರದರ್-ಇನ್‌-ಲಾ ಪ್ರದೀಪ್ ಬಕ್ಷಿಯ ಕೆನ್ರಿನ್ ಲಿಮಿಟೆಡ್ ಜೊತೆ ಕೈಜೋಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ರಾಜ್ ಕುಂದ್ರಾ ಅವರು ಭಾರತದಿಂದ ವೀಡಿಯೊಗಳನ್ನು ಹಾಟ್‌ಶಾಟ್ ಎಂಬ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಲು ಸಾಧ್ಯವಾಗದ ಕಾರಣ, ಅವರು ಅವುಗಳನ್ನು ವೆಟ್ರಾನ್ಸ್‌ಫರ್ ಮೂಲಕ ವಿದೇಶಿ ಪ್ಲಾಟ್‌ಫಾರ್ಮ್‌ಗೆ ಕಳುಹಿಸುತ್ತಿದ್ದರು” ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದರು.

“ಮುಂಬೈ ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಹಾಟ್‌ಶಾಟ್ ಚಿತ್ರಗಳು, ವಿಡಿಯೋ ತುಣುಕುಗಳು ಮತ್ತು ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಉದ್ಯಮಿ ರಾಜ್ ಕುಂದ್ರಾ ಅವರು ಈ ವ್ಯವಹಾರದಿಂದ ಪ್ರತಿದಿನ ಸುಮಾರು 6 ರಿಂದ 8 ಲಕ್ಷಗಳನ್ನು ಗಳಿಸುತ್ತಿದ್ದರು. ಹಣಕಾಸಿನ ವಹಿವಾಟಿನ ದಾಖಲೆಗಳು ಸಾವಿರಾರು ಸಂಖ್ಯೆಯಲ್ಲಿವೆ. ನಿಖರವಾದ ಗಳಿಕೆಯನ್ನು ಪಡೆಯಲು ನಾವು ವಿವರಗಳನ್ನು ವಿಶ್ಲೇಷಿಸುತ್ತಿದ್ದೇವೆ. ಇದನ್ನು ಅಪರಾಧದ ಆದಾಯವೆಂದು ಪರಿಗಣಿಸಲಾಗುತ್ತದೆ. ಇಲ್ಲಿಯವರೆಗೆ ನಾವು ವಿವಿಧ ಖಾತೆಗಳಲ್ಲಿ 7.5 ಕೋಟಿ ರೂಗಳನ್ನು ಸ್ಥಗಿತಗೊಳಿಸಿದ್ದೇವೆ” ಎಂದು ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ಈಗ ಹೆಚ್ಚು ಪ್ರಚಲಿತದಲ್ಲಿರುವ ವೆಬ್ ಶೋಗಳಲ್ಲಿ ಅವಕಾಶ ನೀಡುವ ನೆಪದಲ್ಲಿ ಸಣ್ಣ ಸಣ್ಣ ನಟರನ್ನು ಆಮಿಷಕ್ಕೆ ಒಳಪಡಿಸಲಾಗಿದೆ. ಅವರನ್ನು ಬೋಲ್ಡ್‌ ಸೀನ್‌ಗಳಲ್ಲಿ ನಟಿಸುವಂತೆ ಕೇಳಲಾಗಿದೆ. ಅವರ ಇಚ್ಛೆಗೆ ವಿರುದ್ದವಾಗಿ ಅರೆ-ನಗ್ನ ಮತ್ತು ನಗ್ನ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗೆ ದೌರ್ಜನ್ಯಕ್ಕೆ ಒಳಗಾದವರಲ್ಲಿ ಕೆಲವರು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಈ ಹಿಂದೆ ಭರಂಬೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದರು.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...