Homeಚಳವಳಿನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೂ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ  ಗಾಯಗಳಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ನರಗುಂದ ರೈತ ಹೋರಾಟ ಕಾರ್ಯಕ್ರಮ ಆಯೋಜಿಸುವಲ್ಲಿ ನಿರತರಾಗಿದ್ದ ಜಿ.ಟಿ ರಾಮಸ್ವಾಮಿ ಮತ್ತು ರಾಮಣ್ಣನವರು ನಿನ್ನೆ ಕಾರ್ಯಕ್ರಮ ಮುಗಿಸಿ ರಾತ್ರಿ 10ರ ವೇಳೆಗೆ ಅಲ್ಲಿಂದ ಹೊರಟಿದ್ದು, ಬೆಳಗ್ಗಿನ ಜಾವ 5 ಗಂಟೆಯ ಸಮಯದಲ್ಲಿ ಚಿಕ್ಕಮಗಳೂರು ಬಳಿ ಅಪಘಾತಕ್ಕೀಡಾಗಿದ್ದಾರೆ.

ನರಗುಂದ ರೈತ ಬಂಡಾಯ ಹೋರಾಟದಲ್ಲಿ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡುತ್ತಿರುವುದು

ಮೂಲತಃ ಕನಕಪುರದವರಾದ ಜಿ.ಟಿ ರಾಮಸ್ವಾಮಿಯವರು ಸೈನ್ಯದಲ್ಲಿ ಕೆಲ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ನಂತರ ಕೆಎಎಸ್‌ ಪಾಸು ಮಾಡಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿದ್ದವರು. ಅದಕ್ಕೂ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ನಂತರ ಅಲ್ಲಿಂದ ಸಕ್ರಿಯ ರೈತ ಚಳವಳಿಯಲ್ಲಿ ತೊಡಗಿಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಅವರು ಹಾಸನ ಜಿಲ್ಲೆಯ ಆಲೂರಿನ ಬೆಳ್ಳವಾರದಲ್ಲಿ ತೋಟ ಮಾಡಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು.

ಚನ್ನಪಟ್ಟಣ ರಾಮು ಎಂದೇ ಖ್ಯಾತಿಯಾಗಿದ್ದ ರಾಮಣ್ಣನವರು ಹಲವು ದಶಕಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.

ಸದಾ ರೈತ ಪರವಾಗಿ ನೂರಾರು ಹೋರಾಟಗಳನ್ನು ಸಂಘಟಿಸಿದ್ದ, ಸರಳ ಜೀವಿಗಳಾಗಿದ್ದ ಅವರ ಸಾವು ಬಹಳ ದುಃಖದ ಸಂಗತಿ, ನಾವು ಇಬ್ಬರು ಹೋರಾಟದ ಸಂಗಾತಿಗಳನ್ನು ಕಳೆದುಕೊಂಡಿದ್ದೇವೆ ಎಂದು ಅವರ ನಿಧನಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು, ಕಾರ್ಯದರ್ಶಿ ಗೋಪಾಲ್ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸದ್ಯ ಅವರ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮರಣೋತ್ತರ ಪರೀಕ್ಷೆ ಮುಗಿದ ನಂತರ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತದೆ ಎನ್ನಲಾಗಿದೆ. ಜಿ ಟಿ ರಾಮಸ್ವಾಮಿ ಅವರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆಗೆ ಅವರ ತೋಟ ಹಾಸನ ಜಿಲ್ಲೆ ಆಲೂರು ತಾಲೂಕಿನ ಬೆಳ್ಳವಾರದಲ್ಲಿ ನಡೆಯಲಿದೆ.

ದಿವಂಗತ ಚನ್ನಪಟ್ಟಣ ರಾಮು ಅವರ ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಅವರ ಸ್ವಗ್ರಾಮ ಮೊಗೇನಹಳ್ಳಿಯಲ್ಲಿ ನಡೆಯಲಿದೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...