Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...