Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...