Homeಚಳವಳಿಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ ಸಂಸದರು ಸಂಸತ್ತಿನ ಆವರಣದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಕಳೆದ ನವೆಂಬರ್‌ನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು (ಜುಲೈ 22) ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್ ಪ್ರಾರಂಭಿಸಲಿದ್ದಾರೆ. ಮಾನ್ಸೂನ್ ಅಧಿವೇಶನ ನಡೆಯುವ ಪ್ರತಿದಿನ 200 ಜನರ ರೈತರ ಗುಂಪು ಆಂದೋಲನ ನಡೆಸಲಿದೆ ಎಂದು ರೈತ ನಾಯಕರು ಹೇಳಿದ್ದಾರೆ.

ಇಂದಿನಿಂದ (ಜುಲೈ 22) ಆಗಸ್ಟ್ 9 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಜಂತರ್ ಮಂತರ್ ನಲ್ಲಿ ಕಿಸಾನ್ ಸಂಸತ್ ನಡೆಸಲು ದೆಹಲಿ ಸರ್ಕಾರ ಮತ್ತು ಪೊಲೀಸರು ಒಪ್ಪಿಗೆ ನೀಡಿದ್ದಾರೆ. ಇದಕ್ಕಾಗಿ ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂಬ ಷರತ್ತು ಹಾಕಲಾಗಿದೆ. ಷರತ್ತುಗಳ ಪ್ರಕಾರ ಪ್ರತಿದಿನ 206 ಜನರಿಗೆ ಮಾತ್ರ ಪ್ರತಿಭಟನೆ ನಡೆಸಲು ಅವಕಾಶವಿದೆ.

ಸಿಂಘು ಗಡಿಯಿಂದ ಜಂತರ್‌ ಮಂತರ್‌ಗೆ ಹೋಗುತ್ತಿದ್ದ ಸುಮಾರು 200 ರೈತರಿದ್ದ ಬಸ್‌ಗಳನ್ನು ಜಿಟಿ ಕರ್ನಾಲ್ ರಸ್ತೆಯಲ್ಲಿ ಪೊಲೀಸರು ತಡೆದಿದ್ದರು. 206 ಜನರಿಗಷ್ಟೇ ಅವಕಾಶ ನೀಡಲಾಗಿದ್ದು, ಉಳಿದವರನ್ನು ಬೇರೆ ಮಾರ್ಗಗಳ ಮೂಲಕ ಹೋಗಲು ತಿಳಿಸಿದ್ದಾರೆ.

ಇದನ್ನೂ ಓದಿ: ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

“ಸಂಸತ್ತನ್ನು ಹೇಗೆ ನಡೆಸಬೇಕು ಎಂಬುದನ್ನು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಕಿಸಾನ್ ಪಾರ್ಲಿಮೆಂಟ್ ಪ್ರತಿ ದಿನವೂ ನಡೆಯಲಿದೆ. ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ. ನಂತರ ಉಳಿದ ಕಾಯ್ದೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ರೈತರು ತಿಳಿಸಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಸಂಸತ್ ಭವನ ಆವರಣದ ಗಾಂಧಿ ಪ್ರತಿಮೆ ಬಳಿ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು. ಇಂದು ಸಂಸತ್ತು ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದು ಪಕ್ಷದ ನಾಯಕ ಮನೀಶ್ ತಿವಾರಿ ಹೇಳಿದ್ದಾರೆ.

ಶಿರೋಮಣಿ ಅಕಾಲಿ ದಳದ ಸಂಸದರು ಸಂಸತ್ತಿನ ಮುಂದೆ ವಿವಾದಿತ ಕೃಷಿ ಕಾನೂನುಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಮುಮದೆ ಭಿತ್ತಿಪತ್ರಗಳನ್ನು ತೋರಿಸಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ರೈತ ಪ್ರತಿಭಟನೆಯಲ್ಲಿ ಭಾಗವಹಿಸುವವರು ಗುರುತಿನ ಚೀಟಿಗಳನ್ನು  ಹಾಕಿಕೊಳ್ಳಲಿದ್ದಾರೆ.

ಜಂತರ್‌ ಮಂತರ್ ಹೊರಗೆ ಭಾರಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಬ್ಯಾರಿಕೇಡ್‌ಗಳ ಜೊತೆಗೆ ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ. ಇಂದಿನಿಂದ ಆಗಸ್ಟ್  9 ರವರೆಗೆ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ನಡೆಸಲು ರೈತರು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...