Homeಮುಖಪುಟಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ರಾಜಕಾರಣಿಗಳು ಸೇರಿ ದೇಶದ 300 ಕ್ಕೂ ಹೆಚ್ಚು ಜನರನ್ನು  ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಬಳಸಿ ಸರ್ಕಾರಿ ಸಂಸ್ಥೆಗಳು ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಕೀಲ ಎಂ.ಎಲ್.ಶರ್ಮಾ, ’ಪೆಗಾಸಸ್ ಹಗರಣವು ಭಾರೀ ಗಂಭೀರ ವಿಷಯವಾಗಿದೆ. ಭಾರತದ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ದೇಶದ ಭದ್ರತೆಯ ಮೇಲೆ ನಡೆದಿರುವ ಗಂಭೀರ ದಾಳಿ’ ಎಂದು ಹೇಳಿದ್ದಾರೆ.

“ಖಾಸಗಿತನ ಎಂದರೆ ಮರೆಮಾಚುವ ಬಯಕೆಯಲ್ಲ, ಇದು ನಮ್ಮ ಆಲೋಚನೆಗಳು ಮತ್ತು ಅಸ್ತಿತ್ವವನ್ನು ಇಟ್ಟುಕೊಳ್ಳುವ ಒಂದು ಸ್ಥಳಾವಕಾಶ. ಇದು ಬೇರೊಬ್ಬರ ಉದ್ದೇಶಗಳ ಸಾಧನವಾಗಬಾರದು. ಇದು ಘನತೆಯ ಅತ್ಯಗತ್ಯ ಅಂಶವಾಗಿದೆ” ಎಂದು ವಕೀಲರ ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ಪೆಗಾಸಸ್ ಸ್ಪೈವೇರ್‌ ಕೇವಲ ಸಂಭಾಷಣೆಗಳನ್ನು ಕೇಳುವುದಕ್ಕೆ ಬಳಸಲಾಗುವುದಿಲ್ಲ. ಒಬ್ಬ ವ್ಯಕ್ತಿಯ ಜೀವನದ ಸಂಪೂರ್ಣ ಮಾಹಿತಿ ಪಡೆಯಲು ಇದನ್ನು ಬಳಸಬಹುದು. ಏಕೆಂದರೆ ಇದು ಫೋನ್ ಹ್ಯಾಕ್ ಮಾಡಿದ ವ್ಯಕ್ತಿಯಲ್ಲದೇ, ಆತನ ಸಂಪರ್ಕದಲ್ಲಿರುವ ಪ್ರತಿಯೊಬ್ಬರನ್ನು ಅಸಹಾಯಕರನ್ನಾಗಿ ಮಾಡುತ್ತದೆ ಎಂದು ಹೇಳಲಾಗಿದೆ.

ಪೆಗಾಸಸ್ ಸ್ಪೈವೇರ್‌ ಕಣ್ಗಾವಲು ತಂತ್ರಜ್ಞಾನವಷ್ಟೇ ಅಲ್ಲದೆ, ಜಾಗತಿಕ ಭದ್ರತೆ, ಮಾನವ ಹಕ್ಕುಗಳು ಮತ್ತು ರಾಷ್ಟ್ರೀಯ ಭದ್ರತಾ ಪರಿಣಾಮಗಳ ಮೇಲೆ ಸೈಬರ್ ಆಯುಧವಾಗಿ ಕೆಲಸ ಮಾಡುತ್ತದೆ ಎನ್ನಲಾಗಿದೆ.

ಫಾರ್ಬಿಡನ್‌ ಸ್ಟೋರಿಸ್‌ ಬಿಡುಗಡೆ ಮಾಡಿರುವ ತನಿಖಾ ವರದಿ ‘ಪೆಗಾಸಸ್‌ ಪ್ರಾಜೆಕ್ಟ್‌‌’ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದೆ. 2016 ರಿಂದ ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ಇದರಲ್ಲಿ ನಮ್ಮ ದೇಶದ 300 ಕ್ಕೂ ಹೆಚ್ಚು ಜನರನ್ನು ಗುರಿಮಾಡಲಾಗಿದೆ ಎಂದು ವರದಿಯಾಗಿದೆ.

ಪೆಗಾಸಸ್ ಹಗರಣದ ಬಗ್ಗೆ ಸುಮೋಟೊ ಕೇಸ್ ದಾಖಲಿಸಿಕೊಂಡು ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿವಸೇನೆ ಬುಧವಾರ ಮನವಿ ಮಾಡಿತ್ತು. ದೇಶಾದ್ಯಂತ ಕಾಂಗ್ರೆಸ್ ಪೆಗಾಸಸ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...