Homeಮುಖಪುಟಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

- Advertisement -
- Advertisement -

ಜೀನ್ಸ್ ಧರಿಸಿದ ಕಾರಣಕ್ಕೆ ಮನೆಯ ಮಗಳನ್ನೇ ಅಜ್ಜ ಮತ್ತು ಬಾಲಕಿಯ ಚಿಕ್ಕಪ್ಪಂದಿರು ಕೊಲೆ ಮಾಡಿ ಮೃತದೇಹವನ್ನು ಸೇತುವೆಯಿಂದ ನದಿಗೆ ಎಸೆಯಲು ಪ್ರಯತ್ನಿಸಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ಮೃತದೇಹ ಕಶ್ಯಾ-ಪಾಟ್ನಾ ಹೆದ್ದಾರಿಯಲ್ಲಿರುವ ಪತನ್ವಾ ಸೇತುವೆಯ ಕಂಬಿಗಳಲ್ಲಿ ನೇತಾಡುತ್ತಿರುವುದನ್ನು ಕಂಡು ದಾರಿಹೋಕರು ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳಲ್ಲಿ ಬಾಲಕಿಯ ಅಜ್ಜನನ್ನು ಬಂಧಿಸಲಾಗಿದ್ದು, ಚಿಕ್ಕಪ್ಪಂದಿರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಅಥವಾ ಮಂಗಳವಾರ ರಾತ್ರಿ ನಡುವೆ ಬಾಲಕಿಯ ಕೊಲೆ ಮಾಡಲಾಗಿದ್ದು, ಬಳಿಕ ಶವವನ್ನು ನದಿಗೆ ಎಸೆಯಲಾಗಿದೆ. ಆದರೆ ಮೃತದೇಹ ನದಿಗೆ ಬೀಳದೆ ಸೇತುವೆಯ ಕಂಬಿಗಳಲ್ಲಿ ಸಿಲುಕಿಕೊಂಡಿದ್ದು, ದಾರಿಹೋಕರ ಗಮನ ಸೆಳೆದಿದೆ.ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಮೃತ ಬಾಲಕಿ ಮತ್ತು ಆಕೆಯ ತಾಯಿ ಇತ್ತೀಚೆಗೆ ಡಿಯೋರಿಯಾದಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸಿಸಲು ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಬಾಲಕಿಯ ತಂದೆ ಪಂಜಾಬ್‌ನ ಲೂಧಿಯಾನದಲ್ಲಿ ವಲಸೆ ಕೆಲಸಗಾರರಾಗಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

” ನನ್ನ ಮಗಳು ಅಂದು ಉಪವಾಸ  ಮಾಡುತ್ತಿದ್ದಳು. ಸಂಜೆ ಸ್ನಾನದ ನಂತರ ಜೀನ್ಸ್ ಮತ್ತು ಟಾಪ್ ಧರಿಸಿ, ಪೂಜೆ ಮಾಡಲು ಹೋಗುತ್ತಿದ್ದಾಗ, ಉಡುಗೆ ಬದಲಿಸಲು ಅಜ್ಜ ತಿಳಿಸಿದರು. ಆಕೆ ನಿರಾಕರಿಸಿದಾಗ ಕೋಲುಗಳಿಂದ ಆಕೆಯ ಮೇಲೆ ಹಲ್ಲೆ ಮಾಡಿದರು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು, ಆದರೆ, ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ “ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ಈ ಜನರಿಗೆ ಯಾವಾಗಲೂ ಆ ಹುಡುಗಿಯ ಮತ್ತು ಆಕೆಯ ಕುಟುಂಬದ ಜೀವನಶೈಲಿಯೊಂದಿಗೆ ಸಮಸ್ಯೆ ಇತ್ತು. ಆ ಕುಟುಂಬದವರು ಏನು ತಿನ್ನುತ್ತಾರೆ, ಏನು ಧರಿಸಿದ್ದಾರೆ ಎಂಬ ಬಗ್ಗೆ ಇವರಲ್ಲಿ ಅಸೂಯೆ ತುಂಬಿಕೊಂಡಿತ್ತು. ಅವತ್ತು ಮೃತ ಬಾಲಕಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದರು. ಆಕೆಯ ಪರಿಸ್ಥಿತಿ ಗಂಭೀರವಾದಾಗ, ಆಸ್ಪತ್ರೆಗೆ ಕರೆದೊಯ್ಯುವುದಾಗಿ ಬಾಲಕಿಯ ತಾಯಿಗೆ ತಿಳಿಸಿದ್ದರು. ಆದರೆ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಸೇತುವೆಯಿಂದ ಎಸೆದಿದ್ದಾರೆ” ಎಂದು ಬಾಲಕಿಯ ಚಿಕ್ಕಮ್ಮ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬಾಲಕಿ ಜಿನ್ಸ್ ವಿಷಯಕ್ಕೆ ತನ್ನ ಅಜ್ಜನೊಂದಿಗೆ ವಾಗ್ವಾದ ನಡೆಸಿ ಅವರನ್ನು ನಿಂದಿಸಿದ್ದಾರೆ. ಆಗ ಹುಡುಗಿಯ ಇಬ್ಬರು- ಮೂವರು ಚಿಕ್ಕಪ್ಪಂದಿರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆಕೆ ಪ್ರಜ್ಞೆ ತಪ್ಪಿದ್ದಾರೆ. ನಂತರ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಆದರೆ ದಾರಿಯಲ್ಲಿಯೇ ಆಕೆ ಮೃತಪಟ್ಟ ಕಾರಣ ನದಿಗೆ ಎಸೆಯಲು ನೋಡಿದ್ದಾರೆ. ಆದರೆ ಮೃತದೇಹ ನದಿ ಸೇತುವೆಯ ಮೇಲೆ ಸಿಲುಕಿಕೊಂಡಿದೆ ಎಂದು ಡಿಯೋರಿಯಾ ಪೊಲೀಸ್ ಮುಖ್ಯಸ್ಥ ಶ್ರೀಪತಿ ಮಿಶ್ರಾ ಹೇಳಿದ್ದಾರೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಹೆಣ್ಣು ಮಕ್ಕಳಿಗೆ, ಅವರಿಗೆ ಇಷ್ಟವಾದ ಬಟ್ಟೆಗಳನ್ನು ತೊಡುವ ಸ್ವಾತಂತ್ರ್ಯ ಸಹ ಇಲ್ಲದಿರುವುದು ದುರಂತ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...