Homeಮುಖಪುಟಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

- Advertisement -
- Advertisement -

ಜೀನ್ಸ್ ಧರಿಸಿದ ಕಾರಣಕ್ಕೆ ಮನೆಯ ಮಗಳನ್ನೇ ಅಜ್ಜ ಮತ್ತು ಬಾಲಕಿಯ ಚಿಕ್ಕಪ್ಪಂದಿರು ಕೊಲೆ ಮಾಡಿ ಮೃತದೇಹವನ್ನು ಸೇತುವೆಯಿಂದ ನದಿಗೆ ಎಸೆಯಲು ಪ್ರಯತ್ನಿಸಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ಮೃತದೇಹ ಕಶ್ಯಾ-ಪಾಟ್ನಾ ಹೆದ್ದಾರಿಯಲ್ಲಿರುವ ಪತನ್ವಾ ಸೇತುವೆಯ ಕಂಬಿಗಳಲ್ಲಿ ನೇತಾಡುತ್ತಿರುವುದನ್ನು ಕಂಡು ದಾರಿಹೋಕರು ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳಲ್ಲಿ ಬಾಲಕಿಯ ಅಜ್ಜನನ್ನು ಬಂಧಿಸಲಾಗಿದ್ದು, ಚಿಕ್ಕಪ್ಪಂದಿರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಅಥವಾ ಮಂಗಳವಾರ ರಾತ್ರಿ ನಡುವೆ ಬಾಲಕಿಯ ಕೊಲೆ ಮಾಡಲಾಗಿದ್ದು, ಬಳಿಕ ಶವವನ್ನು ನದಿಗೆ ಎಸೆಯಲಾಗಿದೆ. ಆದರೆ ಮೃತದೇಹ ನದಿಗೆ ಬೀಳದೆ ಸೇತುವೆಯ ಕಂಬಿಗಳಲ್ಲಿ ಸಿಲುಕಿಕೊಂಡಿದ್ದು, ದಾರಿಹೋಕರ ಗಮನ ಸೆಳೆದಿದೆ.ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಮೃತ ಬಾಲಕಿ ಮತ್ತು ಆಕೆಯ ತಾಯಿ ಇತ್ತೀಚೆಗೆ ಡಿಯೋರಿಯಾದಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸಿಸಲು ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಬಾಲಕಿಯ ತಂದೆ ಪಂಜಾಬ್‌ನ ಲೂಧಿಯಾನದಲ್ಲಿ ವಲಸೆ ಕೆಲಸಗಾರರಾಗಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

” ನನ್ನ ಮಗಳು ಅಂದು ಉಪವಾಸ  ಮಾಡುತ್ತಿದ್ದಳು. ಸಂಜೆ ಸ್ನಾನದ ನಂತರ ಜೀನ್ಸ್ ಮತ್ತು ಟಾಪ್ ಧರಿಸಿ, ಪೂಜೆ ಮಾಡಲು ಹೋಗುತ್ತಿದ್ದಾಗ, ಉಡುಗೆ ಬದಲಿಸಲು ಅಜ್ಜ ತಿಳಿಸಿದರು. ಆಕೆ ನಿರಾಕರಿಸಿದಾಗ ಕೋಲುಗಳಿಂದ ಆಕೆಯ ಮೇಲೆ ಹಲ್ಲೆ ಮಾಡಿದರು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು, ಆದರೆ, ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ “ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ಈ ಜನರಿಗೆ ಯಾವಾಗಲೂ ಆ ಹುಡುಗಿಯ ಮತ್ತು ಆಕೆಯ ಕುಟುಂಬದ ಜೀವನಶೈಲಿಯೊಂದಿಗೆ ಸಮಸ್ಯೆ ಇತ್ತು. ಆ ಕುಟುಂಬದವರು ಏನು ತಿನ್ನುತ್ತಾರೆ, ಏನು ಧರಿಸಿದ್ದಾರೆ ಎಂಬ ಬಗ್ಗೆ ಇವರಲ್ಲಿ ಅಸೂಯೆ ತುಂಬಿಕೊಂಡಿತ್ತು. ಅವತ್ತು ಮೃತ ಬಾಲಕಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದರು. ಆಕೆಯ ಪರಿಸ್ಥಿತಿ ಗಂಭೀರವಾದಾಗ, ಆಸ್ಪತ್ರೆಗೆ ಕರೆದೊಯ್ಯುವುದಾಗಿ ಬಾಲಕಿಯ ತಾಯಿಗೆ ತಿಳಿಸಿದ್ದರು. ಆದರೆ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಸೇತುವೆಯಿಂದ ಎಸೆದಿದ್ದಾರೆ” ಎಂದು ಬಾಲಕಿಯ ಚಿಕ್ಕಮ್ಮ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬಾಲಕಿ ಜಿನ್ಸ್ ವಿಷಯಕ್ಕೆ ತನ್ನ ಅಜ್ಜನೊಂದಿಗೆ ವಾಗ್ವಾದ ನಡೆಸಿ ಅವರನ್ನು ನಿಂದಿಸಿದ್ದಾರೆ. ಆಗ ಹುಡುಗಿಯ ಇಬ್ಬರು- ಮೂವರು ಚಿಕ್ಕಪ್ಪಂದಿರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆಕೆ ಪ್ರಜ್ಞೆ ತಪ್ಪಿದ್ದಾರೆ. ನಂತರ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಆದರೆ ದಾರಿಯಲ್ಲಿಯೇ ಆಕೆ ಮೃತಪಟ್ಟ ಕಾರಣ ನದಿಗೆ ಎಸೆಯಲು ನೋಡಿದ್ದಾರೆ. ಆದರೆ ಮೃತದೇಹ ನದಿ ಸೇತುವೆಯ ಮೇಲೆ ಸಿಲುಕಿಕೊಂಡಿದೆ ಎಂದು ಡಿಯೋರಿಯಾ ಪೊಲೀಸ್ ಮುಖ್ಯಸ್ಥ ಶ್ರೀಪತಿ ಮಿಶ್ರಾ ಹೇಳಿದ್ದಾರೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಹೆಣ್ಣು ಮಕ್ಕಳಿಗೆ, ಅವರಿಗೆ ಇಷ್ಟವಾದ ಬಟ್ಟೆಗಳನ್ನು ತೊಡುವ ಸ್ವಾತಂತ್ರ್ಯ ಸಹ ಇಲ್ಲದಿರುವುದು ದುರಂತ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...