Homeಮುಖಪುಟಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

- Advertisement -
- Advertisement -

ಜೀನ್ಸ್ ಧರಿಸಿದ ಕಾರಣಕ್ಕೆ ಮನೆಯ ಮಗಳನ್ನೇ ಅಜ್ಜ ಮತ್ತು ಬಾಲಕಿಯ ಚಿಕ್ಕಪ್ಪಂದಿರು ಕೊಲೆ ಮಾಡಿ ಮೃತದೇಹವನ್ನು ಸೇತುವೆಯಿಂದ ನದಿಗೆ ಎಸೆಯಲು ಪ್ರಯತ್ನಿಸಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ಮೃತದೇಹ ಕಶ್ಯಾ-ಪಾಟ್ನಾ ಹೆದ್ದಾರಿಯಲ್ಲಿರುವ ಪತನ್ವಾ ಸೇತುವೆಯ ಕಂಬಿಗಳಲ್ಲಿ ನೇತಾಡುತ್ತಿರುವುದನ್ನು ಕಂಡು ದಾರಿಹೋಕರು ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳಲ್ಲಿ ಬಾಲಕಿಯ ಅಜ್ಜನನ್ನು ಬಂಧಿಸಲಾಗಿದ್ದು, ಚಿಕ್ಕಪ್ಪಂದಿರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಅಥವಾ ಮಂಗಳವಾರ ರಾತ್ರಿ ನಡುವೆ ಬಾಲಕಿಯ ಕೊಲೆ ಮಾಡಲಾಗಿದ್ದು, ಬಳಿಕ ಶವವನ್ನು ನದಿಗೆ ಎಸೆಯಲಾಗಿದೆ. ಆದರೆ ಮೃತದೇಹ ನದಿಗೆ ಬೀಳದೆ ಸೇತುವೆಯ ಕಂಬಿಗಳಲ್ಲಿ ಸಿಲುಕಿಕೊಂಡಿದ್ದು, ದಾರಿಹೋಕರ ಗಮನ ಸೆಳೆದಿದೆ.ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಮೃತ ಬಾಲಕಿ ಮತ್ತು ಆಕೆಯ ತಾಯಿ ಇತ್ತೀಚೆಗೆ ಡಿಯೋರಿಯಾದಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸಿಸಲು ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಬಾಲಕಿಯ ತಂದೆ ಪಂಜಾಬ್‌ನ ಲೂಧಿಯಾನದಲ್ಲಿ ವಲಸೆ ಕೆಲಸಗಾರರಾಗಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

” ನನ್ನ ಮಗಳು ಅಂದು ಉಪವಾಸ  ಮಾಡುತ್ತಿದ್ದಳು. ಸಂಜೆ ಸ್ನಾನದ ನಂತರ ಜೀನ್ಸ್ ಮತ್ತು ಟಾಪ್ ಧರಿಸಿ, ಪೂಜೆ ಮಾಡಲು ಹೋಗುತ್ತಿದ್ದಾಗ, ಉಡುಗೆ ಬದಲಿಸಲು ಅಜ್ಜ ತಿಳಿಸಿದರು. ಆಕೆ ನಿರಾಕರಿಸಿದಾಗ ಕೋಲುಗಳಿಂದ ಆಕೆಯ ಮೇಲೆ ಹಲ್ಲೆ ಮಾಡಿದರು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು, ಆದರೆ, ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ “ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ಈ ಜನರಿಗೆ ಯಾವಾಗಲೂ ಆ ಹುಡುಗಿಯ ಮತ್ತು ಆಕೆಯ ಕುಟುಂಬದ ಜೀವನಶೈಲಿಯೊಂದಿಗೆ ಸಮಸ್ಯೆ ಇತ್ತು. ಆ ಕುಟುಂಬದವರು ಏನು ತಿನ್ನುತ್ತಾರೆ, ಏನು ಧರಿಸಿದ್ದಾರೆ ಎಂಬ ಬಗ್ಗೆ ಇವರಲ್ಲಿ ಅಸೂಯೆ ತುಂಬಿಕೊಂಡಿತ್ತು. ಅವತ್ತು ಮೃತ ಬಾಲಕಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದರು. ಆಕೆಯ ಪರಿಸ್ಥಿತಿ ಗಂಭೀರವಾದಾಗ, ಆಸ್ಪತ್ರೆಗೆ ಕರೆದೊಯ್ಯುವುದಾಗಿ ಬಾಲಕಿಯ ತಾಯಿಗೆ ತಿಳಿಸಿದ್ದರು. ಆದರೆ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಸೇತುವೆಯಿಂದ ಎಸೆದಿದ್ದಾರೆ” ಎಂದು ಬಾಲಕಿಯ ಚಿಕ್ಕಮ್ಮ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬಾಲಕಿ ಜಿನ್ಸ್ ವಿಷಯಕ್ಕೆ ತನ್ನ ಅಜ್ಜನೊಂದಿಗೆ ವಾಗ್ವಾದ ನಡೆಸಿ ಅವರನ್ನು ನಿಂದಿಸಿದ್ದಾರೆ. ಆಗ ಹುಡುಗಿಯ ಇಬ್ಬರು- ಮೂವರು ಚಿಕ್ಕಪ್ಪಂದಿರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆಕೆ ಪ್ರಜ್ಞೆ ತಪ್ಪಿದ್ದಾರೆ. ನಂತರ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಆದರೆ ದಾರಿಯಲ್ಲಿಯೇ ಆಕೆ ಮೃತಪಟ್ಟ ಕಾರಣ ನದಿಗೆ ಎಸೆಯಲು ನೋಡಿದ್ದಾರೆ. ಆದರೆ ಮೃತದೇಹ ನದಿ ಸೇತುವೆಯ ಮೇಲೆ ಸಿಲುಕಿಕೊಂಡಿದೆ ಎಂದು ಡಿಯೋರಿಯಾ ಪೊಲೀಸ್ ಮುಖ್ಯಸ್ಥ ಶ್ರೀಪತಿ ಮಿಶ್ರಾ ಹೇಳಿದ್ದಾರೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಹೆಣ್ಣು ಮಕ್ಕಳಿಗೆ, ಅವರಿಗೆ ಇಷ್ಟವಾದ ಬಟ್ಟೆಗಳನ್ನು ತೊಡುವ ಸ್ವಾತಂತ್ರ್ಯ ಸಹ ಇಲ್ಲದಿರುವುದು ದುರಂತ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...