Homeಸಿನಿಮಾಕ್ರೀಡೆಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

- Advertisement -
- Advertisement -

ಸಾವಿರಾರು ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್ ಕ್ರೀಡಾಕೂಟ ಜಗತ್ತಿನ ಅತಿ ಜನಪ್ರಿಯ ಮತ್ತು ಹೆಚ್ಚು ವರದಿಯಾಗುವ ಅಂತಾರಾಷ್ಟ್ರೀಯ ಕ್ರೀಡಾಕೂಟ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕ್ರೀಡಾಕೂಟದಲ್ಲಿ ಕನಿಷ್ಠ ಒಂದು ಪದಕವನ್ನಾದರೂ ಗಳಿಸಬೇಕು ಎಂಬುದು ಎಲ್ಲಾ ದೇಶಗಳ ಮಹತ್ವಾಕಾಂಕ್ಷೆಯಾಗಿರುತ್ತದೆ. ಇನ್ನೂ ಒಲಿಂಪಿಕ್ಸ್ ಪದಕ ಗಳಿಸುವುದು ಕ್ರೀಡಾಪಟುಗಳ ಪಾಲಿಗೆ ಜೀವನದ ಕನಸಾಗಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ಸಾಹಸವೇ ಸರಿ. ದ್ವಿತೀಯ ಮಹಾಯುದ್ಧದ ನಂತರ ಯಾವುದೇ ಸಾಂಪ್ರದಾಯಿಕವಾದ ನೇರ ಯುದ್ಧದಲ್ಲಿ ಮುಖಾಮುಖಿಯಾಗಲಾರದ ಅಮೆರಿಕ, ರಷ್ಯಾ, ಜಪಾನ್, ಚೀನಾ, ಜರ್ಮನಿ ಸೇರಿದಂತೆ ಅನೇಕ ಮುಂದುವರೆದ ರಾಷ್ಟ್ರಗಳ ಪಾಲಿಗೆ ಒಲಿಂಪಿಕ್ಸ್ ಕ್ರೀಡಾಕೂಟ ಯುದ್ಧಭೂಮಿಯೇ ಆಗಿದೆ ಎಂದರೆ ಅತಿಶಯೋಕ್ತಿಯೇನಲ್ಲ.

ಇದೇ ಕಾರಣಕ್ಕೆ ಈ ಎಲ್ಲಾ ದೇಶಗಳೂ, ಪ್ರತಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಡಜನ್‌ಗಟ್ಟಲೆ ಪದಕಗಳನ್ನು ಗೆಲ್ಲುವ ಕಡೆಗೆ ಗಮನವಹಿಸುತ್ತವೆ. ಆದರೆ, ಭಾರತದಂತಹ ಮುಂದುವರೆಯುತ್ತಿರುವ ರಾಷ್ಟ್ರಗಳ ಪಾಲಿಗೆ ಕ್ರೀಡಾಪಟುವೊಬ್ಬ ಒಂದು ವೈಯಕ್ತಿಕ ಪದಕವನ್ನು ಗೆಲ್ಲುವುದೂ ಸಹ ಸಾಧನೆಯೇ ಸರಿ ಎಂಬಂತಾಗಿರುವುದು ವಿಪರ್ಯಾಸ!

PC : Indiatimes, (ನಾರ್ಮನ್ ಪ್ರಿಚರ್ಡ್)

ಭಾರತದ ಒಲಿಂಪಿಕ್ಸ್ ಸಾಧನೆಯ ಕಡೆಗೆ ಗಮನ ಹರಿಸಿದರೆ ಪದಕ ಗಳಿಸಿದ ಸಂಖ್ಯೆ ಕಡಿಮೆಯೇ. ಅದಕ್ಕೆ ಕಾರಣಗಳೂ ನೂರೆಂಟಿವೆ. ಅಸಲಿಗೆ ಭಾರತವು 1900ರಲ್ಲಿ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿತು. ಆ ವರ್ಷ ಭಾರತದಿಂದ ಸ್ಪರ್ಧಿಸಿದ ಏಕೈಕ ಕ್ರೀಡಾಪಟು ನಾರ್ಮನ್ ಪಿಚ್ಚರ್ಡ್.

ಬ್ರಿಟಿಷ್ ಮೂಲದ, ಕೊಲ್ಕತ್ತಾದಲ್ಲಿ ಜನಿಸಿದ್ದ ನಾರ್ಮನ್ ಪಿಚರ್ಡ್ ಅಥ್ಲೆಟಿಕ್ಸ್‌ನಲ್ಲಿ ಎರಡು ಬೆಳ್ಳಿಯ ಪದಕಗಳನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದರೂ ಸಹ ನಂತರದ ದಿನಗಳಲ್ಲಿ ಭಾರತ ಕ್ರೀಡಾಪಟುಗಳ ವೈಯಕ್ತಿಕ ಸಾಧನೆಯಲ್ಲಿ ಪದಕ ಗೆಲ್ಲಲು ಒಂದು ಶತಮಾನವೇ ಕಾಯಬೇಕಾದಂತಹ ಪರಿಸ್ಥಿತಿ ಎದುರಾದದ್ದು ವಿಪರ್ಯಾಸ. ಆದರೆ, ವಿಶ್ವ ಹಾಕಿಯಲ್ಲಿ ಮಾತ್ರ ಭಾರತದ್ದು ಅಚ್ಚಳಿಯದ ಸಾಧನೆ ಇದೆ.

1920ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತವು ಮೊದಲ ಬಾರಿಗೆ ಗುಂಪು ಸ್ಪರ್ಧೆಯಾದ ಹಾಕಿಗೆ ತಂಡವನ್ನು ಕಳುಹಿಸಿತ್ತು. ಒಂದು ಕಾಲದಲ್ಲಿ, ಸುಮಾರು ವರ್ಷಗಳ ಕಾಲ, ಭಾರತದ ರಾಷ್ಟ್ರೀಯ ಹಾಕಿ ತಂಡವು ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ಬಲಿಷ್ಠ ತಂಡವಾಗಿತ್ತು. 1920 ಮತ್ತು 1989ರ ನಡುವೆ ನಡೆದ ಹನ್ನೆರಡು ಒಲಿಂಪಿಕ್ಸ್‌ನಲ್ಲಿ ಹನ್ನೊಂದು ಬಾರಿ ಪದಕ ಗೆದ್ದ ಹಿರಿಮೆ ಭಾರತಕ್ಕಿದೆ. ಇದರಲ್ಲಿ ಒಟ್ಟು 8 ಚಿನ್ನದ ಪದಕಗಳು. 1928-1956ರವರೆಗೆ ಸತತ ಆರು ಚಿನ್ನದ ಪದಕಗಳನ್ನು ಭಾರತ ಗೆದ್ದಿತ್ತು ಎಂಬುದು ಇತಿಹಾಸ.

ಆದರೂ, ವೈಯಕ್ತಿಕ ಸಾಧನೆಯ ವಿಭಾಗದಲ್ಲಿ ಚಿನ್ನದ ಕನಸನ್ನು ಪೂರೈಸಲು ಅಭಿನವ್ ಬಿಂದ್ರಾ ಅವರೇ ಬರಬೇಕಾಗಿತ್ತು. 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ, ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅಭಿನವ್ ಬಿಂದ್ರಾ ಚಿನ್ನ ಗೆಲ್ಲುವ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ವಿಜೇಂದರ್ ಸಿಂಗ್ ಮಿಡಲ್ ವೇಟ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ಬಾಕ್ಸಿಂಗ್‌ನಲ್ಲಿ ದೇಶಕ್ಕೆ ಮೊದಲ ಪದಕವನ್ನು ತಂದುಕೊಟ್ಟರು.

2012ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ 83 ಸದಸ್ಯರ ಭಾರತೀಯ ತಂಡವು ವಿವಿಧ ಆಟಗಳಲ್ಲಿ ಭಾಗವಹಿಸಿ ಒಟ್ಟು ದಾಖಲೆಯ ಆರು ಪದಕಗಳೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಉತ್ತಮ ಸಾಧನೆ ಮಾಡಿತು. 1900ರಲ್ಲಿ ನಾರ್ಮನ್ ಪ್ರಿಚರ್ಡ್ ನಂತರ, ಕುಸ್ತಿಪಟು ಸುಶೀಲ್ ಕುಮಾರ್ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಒಲಿಂಪಿಕ್ ಪದಕಗಳನ್ನು (2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚು ಮತ್ತು 2012 ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ) ಪಡೆದ ಮೊದಲ ಭಾರತೀಯ ಎಂದು ಖ್ಯಾತರಾದರು.

ಅದೇವರ್ಷ ಮಹಿಳಾ ಸಿಂಗಲ್ಸ್‌ನಲ್ಲಿ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದರು. ಬ್ಯಾಡ್ಮಿಂಟನ್‌ನಲ್ಲಿ ದೇಶಕ್ಕೆ ಸಿಕ್ಕ ಮೊದಲ ಒಲಿಂಪಿಕ್ ಪದಕ ಇದಾಗಿತ್ತು. ಮಹಿಳಾ ಫ್ಲೈವೇಯ್ಟ್‌ನಲ್ಲಿ ಕಂಚಿನ ಪದಕ ಗೆದ್ದು, ಬಾಕ್ಸಿಂಗ್ ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಮೇರಿ ಕೋಮ್ ಪಾತ್ರರಾದರು.

2016ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ದಾಖಲೆಯ 117 ಕ್ರೀಡಾಪಟುಗಳು ಸ್ಪರ್ಧಿಸಿದ್ದರು. ಮಹಿಳಾ ಫ್ರೀಸ್ಟೈಲ್ 58 ಕೆಜಿ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಂಚಿನ ಪದಕ ಗೆದ್ದು, ಒಲಿಂಪಿಕ್ಸ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಶಟ್ಲರ್ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಮತ್ತು ಭಾರತದ ಅತ್ಯಂತ ಕಿರಿಯ ಒಲಿಂಪಿಕ್ಸ್ ಪದಕ ವಿಜೇತ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ವರ್ಷ ಮತ್ತೆ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗಿದೆ. ಯಾವ ಯಾವ ಆಟಗಾರರ ಮೇಲೆ ನಿರೀಕ್ಷೆ ಇದೆ? ಭಾರತ ಯಾವ ಕ್ರೀಡೆಗಳಲ್ಲಿ ಪದಕ ಗೆಲ್ಲುವ ಭರವಸೆ ಇದೆ?

ಭಾರತದ ಪದಕ ಗಳಿಕೆಯ ರೇಸ್ ವೇಗ ಪಡೆಯುವುದೇ?

ಈ ಹಿಂದಿನ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ 117 ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದು ಸಾಧನೆಯಾಗಿತ್ತು. ಆದರೆ, ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ 127 ಭಾರತದ ಕ್ರೀಡಾಪಟುಗಳು ಭಾಗವಹಿಸಲಿದ್ದು ಹಿಂದಿನ ಬಾರಿಯ ಕ್ರೀಡಾಕೂಟಕ್ಕಿಂತ ಭಾಗವಹಿಸುವವರ ಸಂಖ್ಯೆ ಗಮನಾರ್ಹವಾಗಿ ಹೆಚ್ಚೇನಾಗಿಲ್ಲ. ಈ ಪೈಕಿ 67 ಪುರುಷರು ಮತ್ತು 52 ಮಹಿಳಾ ಕ್ರೀಡಾಪಟುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

PC : Sportstar-The Hindu (ಮೈರಾಜ್ ಅಹಮದ್ ಖಾನ್)

ಭಾರತದ ಒಲಿಂಪಿಕ್ಸ್ ತಂಡದಲ್ಲಿ ಸ್ಥಾನ ಪಡೆದಿರುವ 45 ವರ್ಷದ ಸ್ಕೀಟ್ ಶೂಟರ್ ಮೈರಾಜ್ ಅಹಮದ್ ಖಾನ್ ಅತ್ಯಂತ ಹಿರಿಯ ಕ್ರೀಡಾಪಟುವಾದರೆ, 18 ವರ್ಷದ 10 ಮೀಟರ್ ಏರ್ ರೈಫಲ್ ಶೂಟರ್ ದಿವ್ಯಾಂಶ್ ಸಿಂಗ್ ಪನ್ವಾರ್ ಅತ್ಯಂತ ಕಿರಿಯ ಕ್ರೀಡಾರ್ಥಿ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿಯೂ ಪುರುಷರ ಹಾಕಿ ತಂಡದ ಮೇಲೆ ಸಾಕಷ್ಟು ನಿರೀಕ್ಷೆ ಮತ್ತು ವಿಶ್ವಾಸ ಇದೆ. ನಾಯಕ ಮನ್ಪ್ರೀತ್ ನೇತೃತ್ವದ ಹಾಕಿ ತಂಡ ಇತರೆ ತಂಡಗಳಿಗಿಂತ ಸಾಕಷ್ಟು ಬಲಿಷ್ಠವಾಗಿದೆ. ಹೀಗಾಗಿ ಭಾರತವೇ ಈ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಫೇವರಿಟ್ ತಂಡ ಎನ್ನಲಾಗುತ್ತಿದೆ. ಭಾರತದ ಹಾಕಿ ತಂಡದ ಮಾಜಿ ನಾಯಕ ಧನರಾಜ್ ಪಿಳ್ಳೈ ಸಹ ಭಾರತ ಈ ಬಾರಿ ಪದಕ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೆ, ಈ ವರ್ಷದ ಒಲಿಂಪಿಕ್ಸ್ ಹಾಕಿ ತಂಡದಲ್ಲಿ ಕರ್ನಾಟಕದ ಒಬ್ಬ ಹಾಕಿಪಟುವೂ ಸ್ಥಾನ ಪಡೆದಿಲ್ಲ ಎಂಬುದು ತುಸು ಬೇಸರದ ಸಂಗತಿಯೇ ಹೌದು. ಕರ್ನಾಟಕದ ಹಾಕಿಪಟುಗಳು ಒಂದು ಕಾಲದಲ್ಲಿ ಭಾರತ ಹಾಕಿ ತಂಡದ ಬೆನ್ನೆಲುಬಾಗಿದ್ದರು ಎಂಬುದು ಉಲ್ಲೇಖಾರ್ಹ. ಇದಲ್ಲದೆ, ರಾಣಿ ರಾಂಪಾಲ್ ನೇತೃತ್ವದ ಮಹಿಳಾ ಹಾಕಿ ತಂಡದ ಮೇಲೂ ಸಾಕಷ್ಟು ವಿಶ್ವಾಸವಿದೆ.

ಹಾಕಿ ನಂತರದ ಭಾರತದ ಭರವಸೆ ಬ್ಯಾಡ್ಮಿಂಟನ್ ತಂಡದ ಮೇಲಿದೆ ಎಂದರೂ ತಪ್ಪಾಗಲಾರದು. ಮಾಜಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ನೇತೃತ್ವದ ತಂಡದಲ್ಲಿ ಬಿ. ಸಾಯಿಪ್ರಣೀತ್, ಸಾತ್ವಿಕ್ ಸಾಯಿರಾಜ್, ಚಿರಾಗ್ ಶೆಟ್ಟಿ, ರಾಂಕಿರೆಡ್ಡಿ ಸ್ಥಾನ ಪಡೆದಿದ್ದು, ಈ ವಿಭಾಗದಲ್ಲಿ ಖಚಿತವಾಗಿ ಪದಕ ಬರುವ ನಿರೀಕ್ಷೆ ಇದೆ.

ಬಾಕ್ಸಿಂಗ್ ಪುರುಷರ ಗುಂಪಿನಲ್ಲಿ 91 ಕೆಜಿ ವಿಭಾಗದಲ್ಲಿ ಸತೀಶ್ ಕುಮಾರ್, 75 ಕೆಜಿ ವಿಭಾಗದಲ್ಲಿ ಆಶೀಶ್ ಕುಮಾರ್ ಪದಕದ ಪೈಪೋಟಿಯಲ್ಲಿದ್ದರೆ, 69 ಕೆಜಿ ಮಹಿಳಾ ವಿಭಾಗದಲ್ಲಿ ಲೋಲಿನಾ ಬೋರ್ಗೊಹೇನ್, 75 ಕೆಜಿ ವಿಭಾಗದಲ್ಲಿ ಪೂಜಾ ರಾಣಿ ಪದಕ ಗೆಲ್ಲುವ ಫೇವರಿಟ್ ಕ್ರೀಡಾಪಟುಗಳು ಎಂದು ಬಿಂಬಿಸಲಾಗಿದೆ. ಇನ್ನೂ 51 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿರುವ ಒಲಿಂಪಿಕ್ಸ್ ಪದಕ ವಿಜೇತೆ ಭಾರತದ ಹೆಮ್ಮೆ ಮೇರಿ ಕೋಮ್ ಈ ವರ್ಷವೂ ವಿಶ್ವ ಬಾಕ್ಸಿಂಗ್ ರಿಂಗ್‌ನ ಕೇಂದ್ರ ಬಿಂದು ಎಂದರೆ ತಪ್ಪಾಗಲಾರದು.

50 ಮೀಟರ್ ಮಹಿಳಾ ರೈಫಲ್ ಶೂಟಿಂಗ್‌ನಲ್ಲಿ ಅಂಜುಮ್ ಮೌದ್ಗಿಲ್ ಮತ್ತು ತೇಜಸ್ವಿನಿ ಸಾವಂತ್ ಸ್ಪರ್ಧಿಸುತ್ತಿದ್ದರೆ, 10 ಮೀಟರ್ ರೈಫಲ್ ಶೂಟಿಂಗ್‌ನಲ್ಲಿ ಅಪೂರ್ವಿ ಚಂಡೇಲಾ, ಎಲಾವೆನಿಲ್ ವಲರಿವನ್, ಮನು ಭಾಕರ್, ಯಶಸ್ವಿನಿ ಸಿಂಗ್ ದೇಸ್ವಾಲ್ ಮೇಲೆ ಸಾಕಷ್ಟು ಭರವಸೆ ಇದೆ. ಅದೇ ರೀತಿ ಎಲವೆನಿಲ್ ವಲರಿವನ್, 25 ಮೀ ಪಿಸ್ತೂಲ್‌ನಲ್ಲಿ ರಾಹಿ ಸರ್ನೊಬತ್ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

ಇನ್ನು ಟೆನಿಸ್ ಮಹಿಳಾ ಡಬಲ್ಸ್‌ನಲ್ಲಿ ಅಂಕಿತಾ ರಾಣಿ ಜೊತೆಗೆ ಸಾನಿಯಾ ಮಿರ್ಜಾ ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಸಮಿತ್ ನಗಲ್ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಆದರೂ ಸಾನಿಯಾ ಮಿರ್ಜಾ ಜೋಡಿ ಸಾಮಾನ್ಯವಾಗಿಯೇ ಎಲ್ಲರ ಕೇಂದ್ರ ಬಿಂದುವಾಗಿದೆ. ಆದರೆ, ಪುರುಷರ ಡಬಲ್ಸ್‌ನಲ್ಲಿ ಮಹೇಶ್ ಭೂಪತಿ ಕಣಕ್ಕೆ ಇಳಿಯದೇ ಇರುವುದು ಟೆನಿಸ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಮೇರಿ ಕೋಮ್

ಕುಸ್ತಿ ಸ್ಪರ್ಧೆಯಲ್ಲಿ 86 ಕೆಜಿ ವಿಭಾಗದಲ್ಲಿ ದೀಪಕ್ ಪುನಿಯ 57 ಕೆಜಿಯಲ್ಲಿ ರವಿಕುಮಾರ್ ದಹಿಯಾ, 65 ಕೆಜಿಯಲಿ ಬಜರಂಗ ಪುನಿಯ, ಮಹಿಳೆಯರ 53 ಕೆಜಿ ವಿಭಾಗದಲ್ಲಿ ವಿನೇಶ್ ಪೋಗಾಟ್, 50 ಕೆಜಿಯಲ್ಲಿ ಸೀಮಾ ಬಿಸ್ಲಾ, 57 ಕೆಜಿ ಅನ್ಷು ಮಲ್ಲಿಕ್, 62ಕೆಜಿಯಲ್ಲಿ ಸೋನಮ್ ಮಲ್ಲಿಕ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ.

ಆರ್ಚರ್‌ಗಳಾದ ದೀಪಿಕಾ ಕುಮಾರಿ ಹಾಗೂ ಅತನು ದಾಸ್, ಟೇಬಲ್ ಟೆನ್ನಿಸ್ ಆಟಗಾರರಾದ ಜಿ ಸಥಿಯನ್ ಹಾಗೂ ಎ ಶರತ್ ಕಮಾಲ್ ಜಿಮ್ನ್ಯಾಸ್ಟಿಕ್ ಪಟು ಪ್ರಣತಿ ನಾಯಕ್ ಈ ಬಾರಿ ತಮ್ಮ ಸಾಮರ್ಥ್ಯವನ್ನು ಪಣಕ್ಕೆ ಒಡ್ಡಲಿದ್ದಾರೆ.

ಈಜು ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಶ್ರೀಹರಿ ನಟರಾಜ್ ಮತ್ತು ಸಾಜನ್ ಪ್ರಕಾಶ್ ಹಾಗೂ ಮಹಿಳೆಯರ ವಿಭಾಗದಲ್ಲಿ ಮಾನಾ ಪಟೇಲ್ ಪದಕಕ್ಕಾಗಿ ಮೊದಲ ಬಾರಿಗೆ ಸೆಣಸಲಿದ್ದಾರೆ.

ಓಟದಲ್ಲಿ ಮಹಿಳೆಯರ ವಿಭಾಗದಲ್ಲಿ ದ್ಯುತಿ ಚಾಂದ್ ಮತ್ತು ಪುರುಷರ ವಿಭಾಗದಲ್ಲಿ ಗುರುಪ್ರೀತ್ ಸಿಂಗ್ ಕಣಕ್ಕಿಳಿದರೆ ಕರ್ನಾಟಕದ ವತಿಯಿಂದ ಧನಲಕ್ಷ್ಮಿ ಮತ್ತು ಶುಭಾ 4400 ಮೀ ಮಿಶ್ರ ರಿಲೇಯಲ್ಲಿ ಸ್ಪರ್ಧಿಸಲಿದ್ದಾರೆ.

ಇನ್ನು ವೈಯಕ್ತಿಕ ವಿಭಾಗದಲ್ಲಿ ಭಾಗವಹಿಸುತ್ತಿರುವ ಭಾರತದ ಅಥ್ಲೀಟ್‌ಗಳ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಭಾರತ ಹಿಂದೆಂದಿಗಿಂತಲೂ ಈ ಬಾರಿ ಅಧಿಕ ಪದಕಗಳನ್ನು ಗೆಲ್ಲಲಿದೆ ಎಂಬ ಭರವಸೆಯೂ ಇದೆ. ಭರವಸೆಗೆ ತಕ್ಕಂತೆ ಭಾರತದ ಆಟಗಾರರು ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಅತ್ಯಧಿಕ ಪದಕಗಳನ್ನು ಗೆಲ್ಲಲಿ ಎಂಬುದೇ ಎಲ್ಲರ ಆಶಯ.


ಇದನ್ನೂ ಓದಿ: ಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...