Homeಮುಖಪುಟಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

- Advertisement -
- Advertisement -

ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯ ಯುವತಿಯೊಬ್ಬರು ವಾಟ್ಸಾಪ್ ಸ್ಟೇಟಸ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೋಸ್ಟ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸವನ್ನು ಉಡುಗೊರೆಯಾಗಿ ನೀಡುವ ಪ್ರಸ್ತಾಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಿನ್ನೆ ಯುವತಿಯೊಬ್ಬಳು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಅಪ್‌ಲೋಡ್ ಮಾಡಿದ್ದಾರೆ. ನಾವು ಈ ಕುರಿತು ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜಾನುವಾರುಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಿದ ಬಳಿಕ ಇದು ಮೊದಲ ಪ್ರಕರಣವಾಗಿದೆ.

ಈ ಕಾಯ್ದೆ ಪ್ರಕಾರ, ಹಿಂದೂ, ಜೈನ, ಸಿಖ್ ಮತ್ತು ಇತರ ಗೋಮಾಂಸೇತರ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಮತ್ತು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ಯುವತಿ ಬುಧವಾರ ತನ್ನ ಹಸುವಿನ ಫೋಟೋವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸತ್ತ ಹಸುವಿನ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಬಳಿಕ, ಎರಡನೇ ಪೋಸ್ಟ್‌ನಲ್ಲಿ ಗೋಮಂಸವನ್ನು ಮುಖ್ಯಮಂತ್ರಿಗೆ  ನೀಡುವ ಮಾತನಾಡಿದ್ದರು ಎನ್ನಲಾಗಿದೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗೋಮಾಂಸದ ತುಂಡನ್ನು ಉಡುಗೊರೆಯಾಗಿ ನೀಡುವಂತ ಪೋಸ್ಟ್‌ವೊಂದನ್ನು ಯುವತಿ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಬುಧವಾರ, ಮುಸ್ಲಿಂ ಸಮುದಾಯವು ಪ್ರಪಂಚದಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಿದೆ. ಇಂತಹ ಸಮಯದಲ್ಲಿ ಈ ರೀತಿಯ ‘ಆಕ್ಷೇಪಾರ್ಹ ಪೋಸ್ಟ್’ ಎರಡು ಸಮುದಾಯಗಳಲ್ಲಿ ಗಲಭೆ ಸೃಷ್ಟಿಸಬಹುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಯುವತಿಯು ಮಾಜಿ ಸ್ಥಳೀಯ ಬಿಜೆಪಿ ಮುಖಂಡರ ಮಗಳಾಗಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಲ್ಬಾರಿ ಘಟಕವು ಯುವತಿ ವಿರುದ್ಧ ಎರಡು ಸಮುದಾಯಗಳ ನಡುವೆ ಕೋಮು ಗಲಭೆ ಉಂಟುಮಾಡಿದ ಪ್ರಕರಣ ದಾಖಲಿಸಿತ್ತು.

“ಇಂತಹ ವಿವಾದಾತ್ಮಕ ಪೋಸ್ಟ್ ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ. ನಮ್ಮ ಸಂಸ್ಕೃತಿಯನ್ನು ಅವಮಾನಿಸುವ ಇಂತಹ ಪ್ರಯತ್ನಗಳನ್ನು ನಾವು ಸಹಿಸಲಾರೆವು. ಹಿಂದೂಗಳು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಇಂತಹ ವಿಷಯದ ಬಗ್ಗೆ ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹೇಗೆ ಅಂತಹ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಹಾಕಬಹುದು” ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರೊಬ್ಬರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...