Homeಕರ್ನಾಟಕಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

ಶ್ರದ್ಧಾಂಜಲಿ; ಶಾಶ್ವತ ಮೌನಕ್ಕೆ ಜಾರಿದ ನಿಷ್ಠುರ ಮಾತಿನ ಮಾದೇಗೌಡರು

- Advertisement -
- Advertisement -

ಜಿ. ಮಾದೇಗೌಡರು ಗಾಂಧಿವಾದಿ. ಕೆಲವರಿಗೆ ’ಇವನ್ಯಾವ ಸೀಮೆ ಗಾಂಧಿವಾದಿ’ ಅನ್ನಿಸುತ್ತಿದ್ದುದೂ ಉಂಟು. ಯಾಕೆಂದರೆ ಅವರ ಅಸಹನೆಯ ಸಿಟ್ಟಿನ ಮುಖ, ತೀಕ್ಷ್ಣವಾದ ಕಣ್ಣುಗಳು ಮತ್ತು ಈ ರೂಪಕ್ಕೆ ಮೆರಗು ಕೊಟ್ಟಂತಹ ಅವರ ನಿಷ್ಠುರವಾದ ಮಾತುಗಳು ಹಾಗೂ ಆ ಮಾತಿನಲ್ಲಿ ಅಡಗಿದ್ದ ಸತ್ಯ ಸಂಗತಿಗಳು. ಹೀಗೆ, ಗಾಂಧಿವಾದಿಗಳು ಹೀಗೂ ಇರಬಲ್ಲರು ಎಂದು ತೋರಿಸಿಕೊಟ್ಟವರು ಮಾದೇಗೌಡರು. ಮಂಡ್ಯದ ಮಣ್ಣು ರೂಪಿಸಿದ ಅಪರೂಪದ ರಾಜಕಾರಣಿಗಳ ಪೈಕಿ ಮಾದೇಗೌಡರ ವರಸೆಯೇ ಬೇರೆ. ಇತರರನ್ನು ಮೆಚ್ಚಿಸುವುದಕ್ಕಾಗಿ ಎಂದೂ ಮಾತನಾಡಿದವರಲ್ಲ. ಹಾಸ್ಯ ಅವರಿಗೆ ಹಿಡಿಸುತ್ತಿರಲಿಲ್ಲ. ಆದರೆ ಅವರ ಕೆಲವು ಮಾತುಗಳು ಹಾಸ್ಯವಾಗಿ ಪರಿವರ್ತನೆಯಾಗುತ್ತಿದ್ದವು. ಉದಾಹರಣೆಗೆ ಅವರೇ ಹೇಳಿದಂತೆ, ’ಈ ಎಸ್.ಎಂ. ಕೃಷ್ಣ ಮತ್ತೆ ಅಂಬರೀಶ್ ರಾಜಕಾರಣದಲ್ಲಿ ಯಾವ ಗೇಮೆಯನ್ನು ಮಾಡದವರು. ಪ್ರತಿಭಟನೆ, ಸತ್ಯಾಗ್ರಹ, ಕಾಲ್ನಡಿಗೆ ಇಂತಹ ದೈಹಿಕ ಶ್ರಮದಿಂದ ದೂರವುಳಿದವರು. ಆದರೂ ಅವುರು ರಾಜಕಾರಣದಲ್ಲಿ ಏನೇನೊ ಆದ್ರು. ಒಬ್ಬ ಮೋಜುಗಾರ ಇನ್ನೊಬ್ಬ ಸೊಗಸುಗಾರ. ಈ ಹಾಳುಡುಗ್ರು ಅವುರು ಬಂದಾಗ ನ್ವಣ ಮುತ್ತಿದಂಗೆ ಮುತ್ತಿಗತವೆ. ಇದಕೇನೇಳನ’ ಎಂದಿದ್ದರು.

ಕಾವೇರಿ ವಿಷಯ ಅವರ ಜೀವನಾಡಿಯಾಗಿತ್ತು. ಕಾವೇರಿ ಸಮಸ್ಯೆ ಭುಗಿಲೇಳುವುದಕ್ಕೂ ಮೊದಲೆ ಹಾಜರಾಗಿ ಚಳವಳಿಯನ್ನ ನಿಯಂತ್ರಿಸುತ್ತಿದ್ದರು. ಅದೂ ಗಾಂಧಿ ಮಾರ್ಗದಲ್ಲಿ. ಒಮ್ಮೆ ಈ ಚಳವಳಿಯೊಳಕ್ಕೆ ಕೇಂದ್ರ ಸಚಿವರಾಗಿದ್ದ ಅಂಬರೀಶ್ ರಾಜಿನಾಮೆಯಿತ್ತು ಬಂದು ಸೇರಿಕೊಂಡರು. ಇದು ಮಾದೇಗೌಡರಿಗೆ
ಸಿಟ್ಟು ತರಿಸಿ ಗದರಿಸಿ ಕಳಿಸಿದ್ದರು. ಇಷ್ಟಾದರೂ ಅಂಬಿ ಮತ್ತು ಮಾದೇಗೌಡರ ನಡುವೆ ಒಳ್ಳೆ ಸಂಬಂಧವಿತ್ತು. ಒಮ್ಮೆ ಗೌಡರು ಅಂಬರೀಶ್‌ರನ್ನು ಕುರಿತು “ಲೇ ಅಂಬರೀಶ ಒಳ್ಳೆ ಬುದ್ದಿನೆ ಕಲಿಲಿಲ್ಲವಲ್ಲೊ ನೀನು” ಅಂದರು. ಅದಕ್ಕೆ ಅಂಬಿ “ಲೇ ಮುದುಕ ಮ್ಯಟ್ರೆ ಹಿಸಿಗಿ ಸಾಯಿಸಿಬುಡ್ತಿನಿ ಸುಮ್ಮನಿರು” ಎಂದರು. ಎಲ್ಲರ ಸ್ಥಾನಮಾನ ಸೊಕ್ಕನ್ನು ಮುರಿದು ತನ್ನ ವ್ಯಕ್ತಿತ್ವಕ್ಕೆ ಒಗ್ಗಿಸಿಕೊಳ್ಳುವ ಅಂಬರೀಶ್ ತನ್ನ ಇಂತಹ ಗುಣಕ್ಕೆ ಒಗ್ಗಿಕೊಳ್ಳದವರ ಬಳಿ ಸುಳಿಯುತ್ತಿರಲಿಲ್ಲ. ಉದಾಹರಣೆ ದೇವೇಗೌಡರು, ರಾಮಕೃಷ್ಣ ಹೆಗಡೆ, ಬೊಮ್ಮಾಯಿ ಇಂತಹವರ ಬಳಿ ಐದು ನಿಮಿಷವೂ ಇರುತ್ತಿರಲಿಲ್ಲ. ಆದರೆ ಇಂತವರ ಸಾಲಿನ ಮಾದೇಗೌಡರನ್ನ ಪಳಗಿಸಿದ್ದರು. ಕಾವೇರಿ ವಿಷಯದಲ್ಲಿ ಇಬ್ಬರ ಅಭಿಪ್ರಾಯಗಳು ಅವರ ಮನೋಗತಕ್ಕೆ ತಕ್ಕಂತಿದ್ದವು. ಕೆರೆಕಟ್ಟೆಯ ವಿಷಯದಲ್ಲಿ ವಾಟರ್ ಪಾಲಿಸಿ ಎಂಬುದೊಂದಿದೆ. ಅಚ್ಚುಕಟ್ಟಿನ ಕಟ್ಟಕಡೆ ರೈತನಿಗೂ ನೀರು ತಲುಪಬೇಕು.

ಆದರೆ ಮಾದೇಗೌಡರು “ಡ್ಯಾಂ ನಮ್ಮದು, ಅದರ ಗೇಟಿನ ಕೀ ನನ್ನ ಬಳಿ ಇರಬೇಕು. ಬೇಕಾದ್ರೆ ನೀರು ಕೊಟ್ಟೆ ಇಲ್ದಿದ್ರೆ ಇಲ್ಲ ಎನ್ನುವಂತೆ ಮಾತನಾಡುತ್ತಿದ್ದರು. ಅದೇ ಅಂಬರೀಶ್ “ನನ್ನ ಬಕೀಟಲ್ಲಿ ನೀರಿದ್ರೆ ಯರಡು ಲೋಟ ಕೊಡ್ತಿನಪ್ಪ ನೀರೆ ಇಲ್ದಿದ್ರೆ ಎಲ್ಲಿಕೊಡ್ಲಿ” ಎನ್ನುತ್ತಿದ್ದರು.

ಮಾದೇಗೌಡರ ಚಳವಳಿ ಕಾವೇರಿಗೆ ಮಾತ್ರ ಸೀಮಿತವಾಗಿತ್ತು. ಒಂದು ಬಾರಿ ಕಾವೇರಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆ ಜಾಗಕ್ಕೆ ಬಂದರು. ಈಗಾಗಲೇ ಪ್ರತಿಭಟಿಸುತ್ತಿದ್ದ ರೈತರು “ಅಯ್ಯವ್ ಏಳಯ್ಯ ಮ್ಯಾಕೆ ನಡಿಯಯ್ಯ ಈಗ ಬಂದುಬಿಟ್ಟ. ಅಲ್ಲೋಗಿ ಸಿ.ಎಂ ಅತ್ರ ಏನೇನೊ ಕ್ಯಲಸ ಮಾಡಿಸಿಕೊಳದು ಇಲ್ಲಿ ಬಂದು ಚಳವಳಿ ಮಾಡದು” ಎಂದು ಮೂದಲಿಸಿಬಿಟ್ಟರು. ಚಳವಳಿಗೆ ನನ್ನಂಥವರ ಅಗತ್ಯವಿಲ್ಲವೇನೊ ಅಂತ ಒಂದುಕ್ಷಣ ಮಾದೇಗೌಡರಿಗೆ ಅನ್ನಿಸಿಬಿಟ್ಟಿತು. ಆದರೆ, ಗಾಂಧಿಯಿಂದ ಸ್ಫೂರ್ತಿ ಪಡೆಯುತ್ತಿದ್ದ ಅವರು ತಮ್ಮ ಹೋರಾಟಗಳನ್ನು ಕೈಬಿಟ್ಟವರಲ್ಲ. ಅವರ ಬದುಕಿನ ಬಹುದೊಡ್ಡ ಸಾಧನೆಯಾದ ಗಾಂಧಿ ಭವನ ನಿರ್ಮಾಣ ಪೂರ್ಣಗೊಂಡ ಮೇಲೆ ಅದರ ಮುಂದೆ ಕುಳಿತು, ಹಾಳಾಗುತ್ತಿರುವ ಯುವಜನತೆ, ಕುಸಿಯುತ್ತಿರುವ ಮೌಲ್ಯಗಳ ಬಗ್ಗೆ ಯೋಚಿಸುತ್ತ ನಿಷ್ಠುರವಾಗಿ ಪ್ರತಿಕ್ರಿಯಿಸುತ್ತಿದ್ದರು.

ಅಂತಹ ಒಂದು ಸಂದರ್ಭದಲ್ಲಿ ಅವರ ಸಮಕಾಲೀನ ರಾಜಕಾರಣಿಯಾದ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಅಭಿನಂದನಾ ಗ್ರಂಥ ತರುವ ಸಮಯದಲ್ಲಿ ಮಾತನಾಡಿಸಲು ಹೋಗಿದ್ದೆ. ಗಾಂಧಿ ಭವನದ ವರಾಂಡದಲ್ಲಿ ಕುಳಿತಿದ್ದ ಅವರ ಪಕ್ಕ ಕುಳಿತ ನಾನು “ಸಾರ್ ಹೆಚ್.ಟಿ ಕೃಷ್ಣಪ್ಪನವರ ಬಗ್ಗೆ ಒಂದು ಅಭಿನಂದನಾ ಗ್ರಂಥ ತರತಾಯಿದ್ದಿವಿ, ಅವರು ನಿಮ್ಮ ಸಮಕಾಲೀನರು ಮತ್ತು ಒಡನಾಡಿಯಾಗಿದ್ರು. ಅವುರ ಬಗ್ಗೆ ಹೇಳಿ ಸಾರ್” ಎಂದೆ. ಮಾದೇಗೌಡರು ಒಳಗಣ್ಣಾಗಿ “ಕೃಷ್ಣಪ್ಪ ನಾನು ತಾಲೂಕ್ ಬೋರ್ಡ್ ಚುನಾವಣೆ ಮುಖಾಂತರ ರಾಜಕೀಯಕ್ಕೆ ಬಂದೊ.. ಅವುರು ಇಲ್ಲೇ ಲಾಯರಾಗಿದ್ರು. ನಾಟಕದಲ್ಲಿ ಪಾರ್ಟು ಮಾಡತಿದ್ರು. ಪದ ಹೇಳತಿದ್ರು. ಮಾತ್ರ ವಳ್ಳೆ ಮನ್ಸ” ಎಂದವರು ತಿರುಗಿ ಮಾತನಾಡಲಿಲ್ಲ. ಈ ರೀತಿ ಕೇಳಲು ಬಂದವನು ಯಾವೂರ ದಾಸಯ್ಯ ಎಂದೂ ನೋಡಲಿಲ್ಲ. ’ಗಾಂಧಿ ಭವನ ಚನ್ನಾಗ್ಯದೆ ಸಾರ್’ ಎಂದೆ. “ಇನ್ನ ಚನ್ನಾಗಿರದು. ಇರೊ ಜಾಗದಲ್ಯಲ್ಲ. ಕಟ್ಟಿದ್ರೆ ಹೊರಗಡೆ ಜಾಗದಲ್ಲಿ ಗಾಡಿಗಳು ನಿಂತಗಳವು. ಆ ಡಿ.ಕೆ ಶಿವಕುಮಾರ ವಸಿ ಜಾಗ ವಡಕಂಡು ಅದೇನೊ ಕಟ್ಟಿಗಂಡ. ಬರಿ ಇಂತ ಕ್ಯಲಸಗಳಯ ಅವುರವು” ಎಂದು ಸಿಟ್ಟಾದರು. ಎದ್ದು ಬಂದೆ ಆ ನಂತರ ಹೆಚ್.ಟಿ ಕೃಷ್ಣಪ್ಪನವರ ಬಳಿ ಬಂದು “ಸಾರ್ ಮಾದೇಗೌಡ್ರು ಅದ್ಭುತ ಸಾರ್. ನಿಮ್ಮ ಇಡೀ ಜೀವನನ ಐದು ಪದದಲ್ಲಿ ಹೇಳಿ ಮುಗಿಸಿದ್ರು” ಅಂದೆ. ನಗಾಡಿದ ಅವರು “ಆಯ್ತು ಅಷ್ಟನೆ ಹಾಕಿ” ಎಂದರು. ಹಾಗೇ ಮಾಡಿದೆ. ಮಾದೇಗೌಡರ ಬಳಿ ಅನವಶ್ಯಕ ಪುಲಾರಕ್ಕೆ ಅವಕಾಶವಿರಲಿಲ್ಲ.

ವಯಸ್ಸಾದ ವ್ಯಕ್ತಿಯ ಮಾತಿನಲ್ಲಿ ಮೊದಲಿನ ನಿಷ್ಠುರತೆ ಸಿಟ್ಟು ಸೆಡವುಗಳಿರುವುದಿಲ್ಲ ಎನ್ನುತ್ತಾರೆ. ಆದರೆ ಮಾದೇಗೌಡರ ವಿಷಯದಲ್ಲಿ ಇವು ಸುಳ್ಳಾಗಿದ್ದವು. ಬದುಕಿನ ಕಟ್ಟಕಡೆಯವರೆಗೂ ಅವರು ಕಡುಪಾಗೇ ಇದ್ದರು. ಜಿಲ್ಲಾಧಿಕಾರಿಯಿಂದ ಹಿಡಿದು ಯಾರಿಗೂ ಕೇರ್ ಮಾಡದ ಮಾದೇಗೌಡರು, ಮೈಗಳ್ಳ ಅಧಿಕಾರಿಗಳಿಗೆ ಮೈಚಳಿ ಬಿಡಿಸುತ್ತಿದ್ದರು. ಕಲೆ, ಸಾಹಿತ್ಯ ಸಂಗೀತದ ಅಭಿರುಚಿಯಿಂದ ಕೆ.ವಿ ಶಂಕರೇಗೌಡರು ಜಿಲ್ಲೆಗೆ ಕೀರ್ತಿ ತಂದರೆ ಮಾದೇಗೌಡರು ತಮ್ಮ ವಿಶಿಷ್ಟ ರೀತಿಯ ರಾಜಕಾರಣದ ವರಸೆಯಿಂದ ಮಂಡ್ಯ ಜಿಲ್ಲೆಗೆ ಹೆಸರು ತಂದಿದ್ದರು. ತುಂಬ ಶಿಸ್ತಿನಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸಿ ಮಗನಿಗೆ ವಹಿಸಿದ್ದರು. ಮಗ ಚಿರಂಜೀವಿ ಸಿಂಗ್ ತರದ ಅಧಿಕಾರಿಯಾಗಬೇಕೆಂದು ಬಯಸಿದ್ದರು. ಆದರೆ ಮಗ ರಾಜಕಾರಣಕ್ಕೆ ಬಂದಾಗ ಅವರು ಸಿಡಿಮಿಡಿಗೊಂಡು “ವಳ್ಳೆ ಅಧಿಕಾರಿಯಾಗು ಅಂದ್ರೆ ಈ ಬಡೆತದ್ದು ರಾಜಕೀಯಕ್ಕೆ ಬತ್ತಲ್ಲ ಹೇಳು” ಎಂದಿದ್ದರು.

ಒಮ್ಮೆ ಲಂಕೇಶ್ ಎದುರು ಕುಳಿತಿದ್ದ ಹೆಚ್.ಎಲ್. ಕೇಶವಮೂರ್ತಿಯವರು ಮಾದೇಗೌಡರ ಆರೋಗ್ಯದ ಬಗ್ಗೆ ಮಾತನಾಡುತ್ತ “ತುಂಬಾ ಕುಡಿತರೆ ಸಾರ್ ಎದುರಿಗಿದ್ದ ಬಾಟ್ಳಿ ಖಾಲಿ ಮಾಡಿದ ಮ್ಯಾಲೆ ಮೇಕ್ಕೇಳದು” ಎಂದರು. ತುಂಬಾ ಒಳ್ಳೆದು, ಮಾದೇಗೌಡ್ರು ಈ ವಯಸ್ಸಲ್ಲಿ ಅಷ್ಟು ಕುಡಿತರೆ ಅಂದ್ರೆ ಹೆಮ್ಮೆ ಪಡಬೇಕು ನಾವು ಎಂದು ನಕ್ಕರು. ಆದರೆ, ಮಾದೇಗೌಡರು ತುಂಬು ಜೀವನ ನಡೆಸಿ ಶಿಕ್ಷಣ ಸಂಸ್ಥೆ, ಗಾಂಧಿ ಭವನ ಮತ್ತು ಚಳವಳಿಯನ್ನು ಬಿಟ್ಟು ಹೋಗಿದ್ದಾರೆ. ಸದ್ಯಕ್ಕೆ ಮಂಡ್ಯದಲ್ಲಿ ಅವರ ಜಾಗ ತುಂಬುವವರು ಯಾರೂ ಇಲ್ಲ. ಒಂದು ಇತಿಹಾಸ ಕೊನೆಗೊಂಡಿದೆ.

  • ಬಿ ಚಂದ್ರೇಗೌಡ

ಇದನ್ನೂ ಓದಿ: ಕೊಪ್ಪಳ: ಹಿರಿಯ ಸಾಹಿತಿ, ಜನಪರ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...