Homeಮುಖಪುಟಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು.

- Advertisement -
- Advertisement -

ಪೆಗಾಸಸ್ ಎಂಬುದು ಕೇವಲ ಸಾಫ್ಟ್‌ವೇರ್ ಅಲ್ಲ. ಅದೊಂದು ಆಯುಧವಾಗಿದೆ. ಅದನ್ನು ಭಯೋತ್ಪಾದಕರು, ಕ್ರಿಮಿನಲ್‌ಗಳ ವಿರುದ್ಧ ಬಳಸುವುದು ಬಿಟ್ಟು ಈ ದೇಶದ ಪ್ರಜಾತಂತ್ರವನ್ನು ಹಾಳು ಮಾಡಲು ಬಳಸಲಾಗುತ್ತಿದೆ. ದೇಶದ ಜನರ ಜನರ ದನಿ ಅಡಗಿಸಲು ದುರಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆಗಾಸಸ್ ಅನ್ನು ಕರ್ನಾಟಕದ ಸರ್ಕಾರ ಕೆಡವಲು ಬಳಸಿಕೊಳ್ಳಲಾಯಿತು. ರಾಫೇಲ್ ಹಗರಣವನ್ನು ಮುಚ್ಚಿಹಾಕಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಅದನ್ನು ಬಳಸಲಾಯಿತು. ಪತ್ರಕರ್ತರು, ವಿರೋಧ ಪಕ್ಷದವರ ಮೇಲೆ ಬಳಸಿ ಮೋದಿ ಮತ್ತು ಅಮಿತ್ ಶಾ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

ನನ್ನ ಫೋನ್ ಕೇವಲ ಗುರಿಯಾಗಿರಲಿಲ್ಲ, ಬದಲಿಗೆ ಖಂಡಿತಾ ಟ್ಯಾಪ್ ಮಾಡಲಾಗಿದೆ. ಕೇವಲ ರಾಹುಲ್ ಗಾಂಧಿಯ ಫೋನ್ ಟ್ಯಾಪ್ ಮಾಡಿದರೆ ಅದು ದೊಡ್ಡ ವಿಷಯವಲ್ಲ. ಆದರೆ ನಾನು ವಿರೋಧ ಪಕ್ಷದ ನಾಯಕ. ಜನರ ದನಿಯಾಗಿ ಕೆಲಸ ಮಾಡುತ್ತಿರುವವನು. ನನ್ನ ಫೋನ್ ಟ್ಯಾಪ್ ಮಾಡುವ ಮೂಲಕ ಜನರ ದನಿ ಅಡಗಿಸಲು ಈ ಸರ್ಕಾರ ಮುಂದಾಗಿದೆ. ಇಡೀ ದೇಶದ ಮೇಲಿನ ದಾಳಿ ಇದಾಗಿದೆ ಎಂದು ಕಿಡಿಕಾರಿದರು.

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು. ಸುಪ್ರೀಂ ಕೋರ್ಟ್ ಮೇಲ್ವೀಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

ಪೆಗಾಸಸ್ ಕಣ್ಗಾವಲಿನಲ್ಲಿ ಉದ್ಯಮಿ ಅನಿಲ್ ಅಂಬಾನಿಯ ಹೆಸರು ಕೇಳಿಬಂದಿರುವ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ರಾಫೇಲ್ ಹಗರಣದ ಬಗ್ಗೆ ನಾನು ದನಿಯೆತ್ತಿದೆ. ನೀವು ಸೇರಿದಂತೆ ಯಾವ ಮಾಧ್ಯಮಗಳು ನನ್ನನ್ನು ಬೆಂಬಲಿಸಲಿಲ್ಲ. ಇದು ನಿಜ. ಆದರೆ ನಿಧಾನವಾಗಿ ರಾಫೇಲ್ ಹಗರಣ ಹೊರಬರುತ್ತಿದೆ. ಪ್ರಧಾನ ಮಂತ್ರಿಗಳು ಈ ಹಗರಣದಲ್ಲಿ ನೇರ ಭಾಗಿಯಾಗಿದ್ದಾರೆ. ನೀವು ಏಕೆ ಮಾಜಿ ಸಿಬಿಐ ಡೈರೆಕ್ಟರ್ ಪೆಗಾಸಸ್ ಕಣ್ಗಾವಲಿಗೆ ಒಳಗಾಗಿದ್ದಾರೆ ಎಂಬ ಪ್ರಶ್ನೆ ಕೇಳಲಿಲ್ಲ? ಅವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, “ಪೆಗಾಸಸ್ ಅನ್ನು ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ. ಮೋದಿ ಸರ್ಕಾರ ಇದನ್ನು ಮಾಡಿಲ್ಲ ಎಂದಾದರೆ ಜಪಾನ್, ಇಸ್ರೇಲ್, ಉಗಾಂಡ ಸರ್ಕಾರ ಮಾಡಿರಬಹುದಲ್ಲವೇ? ಪೋನ್‌ಗಳು ಟ್ಯಾಪ್‌ ಆಗುತ್ತಿರುವುದು ನಿಜವಾದರೆ ಅದರ ಬಗ್ಗೆ ಸರ್ಕಾರ ಏಕೆ ತನಿಖೆ ನಡೆಸುತ್ತಿಲ್ಲ? ನಾವು ಇದನ್ನು ಮಾಡಿಲ್ಲ ಎಂದು ಏಕೆ ಮೋದಿ ಇದುವರೆಗೂ ಹೇಳಿಲ್ಲ? ಎಂದರು.

ನಾನು ಇದರಿಂದ ಹೆದರುವುದಿಲ್ಲ. ಭ್ರಷ್ಟಾಚಾರ ಮತ್ತು ಕಳ್ಳತನ ಮಾಡಿದವರು ತಮ್ಮ ಫೋನ್ ಟ್ಯಾಪ್ ಆದರೆ ಹೆದರಬೇಕು. ಈ ಎರಡು ಭಯ ನನಗಿಲ್ಲ. ಹಾಗಾಗಿ ನರೇಂದ್ರ ಮೋದಿಯವರ ಕದ್ದಾಲಿಕೆಗೆ ಹೆದರುವ ಮಾತೇ ಇಲ್ಲ ಎಂದಿದ್ದಾರೆ. ಇಂಟೆಲಿಜೆನ್ಸ್ ನವರು ಸಹ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಆರೋಪಗಳನ್ನು ಅಲ್ಲಗೆಳೆದಿರುವ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್, “ನಾವು ಎಲ್ಲಾ ವಿಷಯಗಳಿಗೆ ಸ್ಪಷ್ಟೀಕರಣ ನೀಡಿದ್ದೇವೆ. ಇದರಲ್ಲಿ ತನಿಖೆ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...