Homeಮುಖಪುಟಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

- Advertisement -
- Advertisement -

ಮಹಾರಾಷ್ಟ್ರದ ವಿಪರಿತವಾಗಿ ಸುರಿಯುತ್ತಿರುವ ಮಳೆಗೆ ರಾಯ್‌ಗಡ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಕೊಂಕಣ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಸಾವಿರಾರು ಜನರು ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದಾರೆ.

ಮುಂಬೈನಿಂದ 70 ಕಿ.ಮೀ ದೂರದಲ್ಲಿರುವ ರಾಯ್‌ಗಡ್‌ನ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ.

ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಕ್ಕಿಬಿದ್ದವರು ತಮ್ಮ ಮನೆಯ ಮೇಲ್ಛಾವಣಿ ಅಥವಾ ಎತ್ತರದ ಪ್ರದೇಶಗಳಿಗೆ ಬರಲು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಹೆಲಿಕಾಪ್ಟರ್‌ಗಳಲ್ಲಿರುವ ರಕ್ಷಣಾ ತಂಡಗಳು ಸಂತ್ರಸ್ತರನ್ನು ಗುರುತಿಸಿ ಸ್ಥಳಾಂತರಿಸಬಹುದು ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ 40 ವರ್ಷಗಳಲ್ಲಿಯೇ ಅತಿ ಹೆಚ್ಚು ಮಳೆಯಾಗುತ್ತಿದೆ.

ಗುರುವಾರ ಸಂಭವಿಸಿದ ಮೂರು ಭೂಕುಸಿತಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಒಂದು ಸ್ಥಳದಲ್ಲಿ 32 ಮೃತದೇಹಗಳು, ಇನ್ನೊಂದು ಸ್ಥಳದಲ್ಲಿ ನಾಲ್ಕು ಶವಗಳು ಪತ್ತೆಯಾಗಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶುಕ್ರವಾರ ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

ಮುಂಬೈನಿಂದ 250 ಕಿ.ಮೀ ದೂರದಲ್ಲಿರುವ ರತ್ನಾಗಿರಿ ಜಿಲ್ಲೆಯ ಕರಾವಳಿ ಪಟ್ಟಣವಾದ ಚಿಪ್ಲುನ್‌ನ ಕೆಲವು ಭಾಗಗಳಲ್ಲಿ, 24 ಗಂಟೆಗಳೂ ನಿರಂತರ ಮಳೆಯಾದ್ದರಿಂದ ನೀರಿನ ಮಟ್ಟವು 12 ಅಡಿಗಳಷ್ಟು ಏರಿತ್ತು. ಇದರಿಂದ ವಶಿಷ್ಠಿ ನದಿ ಉಕ್ಕಿ ಹರಿದು, ರಸ್ತೆಗಳು ಮತ್ತು ಮನೆಗಳು ಮುಳುಗಿವೆ. ನಗರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ದೂರವಾಣಿ ಸಂಪರ್ಕಗಳು ಸ್ಥಗಿತಗೊಂಡಿವೆ. ಇನ್ನು ಕೋವಿಡ್ ಆಸ್ಪತ್ರೆ ಪ್ರವಾಹದಿಂದ ತುಂಬಿದ್ದು, ಕೊರೊನಾ ಸೋಂಕಿತ ರೋಗಿಗಳನ್ನು ದೋಣಿಗಳಲ್ಲಿ ರಕ್ಷಿಸಿ, ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನೌಕಾಪಡೆಯ ಎರಡು ರಕ್ಷಣಾ ತಂಡಗಳು, 12 ಸ್ಥಳೀಯ ಪರಿಹಾರ ತಂಡಗಳು, ಕೋಸ್ಟ್‌ಗಾರ್ಡ್‌ನಿಂದ ಎರಡು, ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದಿಂದ (NDRF) ಮೂರು ತಂಡಗಳನ್ನು ಪ್ರವಾಹ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಜೊತೆಗೆ ನೌಕಾಪಡೆಯು ರಬ್ಬರ್ ಬೋಟ್‌ಗಳು, ಲೈಫ್ ಜಾಕೆಟ್‌ಗಳು ಹೊಂದಿರುವ ಏಳು ರಕ್ಷಣಾ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ.

ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಹಲವಾರು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಗುರುವಾರ ಭಾರಿ ಮಳೆಯಿಂದಾಗಿ ರತ್ನಾಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದರು.

ಇತ್ತಿಚೆಗೆ ಚೆಂಬೂರ್ ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 23 ಜನರು ಸಾವನ್ನಪ್ಪಿದ್ದರು. ಚೆಂಬೂರ್‌ನ ವಾಶಿ ನಾಕಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೆಲವು ಮನೆಗಳ ಗೋಡೆ ಕುಸಿದು ಒಟ್ಟು 17 ಜನರು ಪ್ರಾಣ ಕಳೆದುಕೊಂಡಿದ್ದರು. ದುರಂತದಿಂದಾಗಿ ಮೃತಪಟ್ಟವರಿಗೆ ಒಕ್ಕೂಟ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿತ್ತು.


ಇದನ್ನೂ ಓದಿ: ಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...