Homeಮುಖಪುಟಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

- Advertisement -
- Advertisement -

ಮಹಾರಾಷ್ಟ್ರದ ವಿಪರಿತವಾಗಿ ಸುರಿಯುತ್ತಿರುವ ಮಳೆಗೆ ರಾಯ್‌ಗಡ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಕೊಂಕಣ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಸಾವಿರಾರು ಜನರು ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದಾರೆ.

ಮುಂಬೈನಿಂದ 70 ಕಿ.ಮೀ ದೂರದಲ್ಲಿರುವ ರಾಯ್‌ಗಡ್‌ನ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ.

ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಕ್ಕಿಬಿದ್ದವರು ತಮ್ಮ ಮನೆಯ ಮೇಲ್ಛಾವಣಿ ಅಥವಾ ಎತ್ತರದ ಪ್ರದೇಶಗಳಿಗೆ ಬರಲು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಹೆಲಿಕಾಪ್ಟರ್‌ಗಳಲ್ಲಿರುವ ರಕ್ಷಣಾ ತಂಡಗಳು ಸಂತ್ರಸ್ತರನ್ನು ಗುರುತಿಸಿ ಸ್ಥಳಾಂತರಿಸಬಹುದು ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ 40 ವರ್ಷಗಳಲ್ಲಿಯೇ ಅತಿ ಹೆಚ್ಚು ಮಳೆಯಾಗುತ್ತಿದೆ.

ಗುರುವಾರ ಸಂಭವಿಸಿದ ಮೂರು ಭೂಕುಸಿತಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಒಂದು ಸ್ಥಳದಲ್ಲಿ 32 ಮೃತದೇಹಗಳು, ಇನ್ನೊಂದು ಸ್ಥಳದಲ್ಲಿ ನಾಲ್ಕು ಶವಗಳು ಪತ್ತೆಯಾಗಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶುಕ್ರವಾರ ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

ಮುಂಬೈನಿಂದ 250 ಕಿ.ಮೀ ದೂರದಲ್ಲಿರುವ ರತ್ನಾಗಿರಿ ಜಿಲ್ಲೆಯ ಕರಾವಳಿ ಪಟ್ಟಣವಾದ ಚಿಪ್ಲುನ್‌ನ ಕೆಲವು ಭಾಗಗಳಲ್ಲಿ, 24 ಗಂಟೆಗಳೂ ನಿರಂತರ ಮಳೆಯಾದ್ದರಿಂದ ನೀರಿನ ಮಟ್ಟವು 12 ಅಡಿಗಳಷ್ಟು ಏರಿತ್ತು. ಇದರಿಂದ ವಶಿಷ್ಠಿ ನದಿ ಉಕ್ಕಿ ಹರಿದು, ರಸ್ತೆಗಳು ಮತ್ತು ಮನೆಗಳು ಮುಳುಗಿವೆ. ನಗರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ದೂರವಾಣಿ ಸಂಪರ್ಕಗಳು ಸ್ಥಗಿತಗೊಂಡಿವೆ. ಇನ್ನು ಕೋವಿಡ್ ಆಸ್ಪತ್ರೆ ಪ್ರವಾಹದಿಂದ ತುಂಬಿದ್ದು, ಕೊರೊನಾ ಸೋಂಕಿತ ರೋಗಿಗಳನ್ನು ದೋಣಿಗಳಲ್ಲಿ ರಕ್ಷಿಸಿ, ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನೌಕಾಪಡೆಯ ಎರಡು ರಕ್ಷಣಾ ತಂಡಗಳು, 12 ಸ್ಥಳೀಯ ಪರಿಹಾರ ತಂಡಗಳು, ಕೋಸ್ಟ್‌ಗಾರ್ಡ್‌ನಿಂದ ಎರಡು, ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದಿಂದ (NDRF) ಮೂರು ತಂಡಗಳನ್ನು ಪ್ರವಾಹ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಜೊತೆಗೆ ನೌಕಾಪಡೆಯು ರಬ್ಬರ್ ಬೋಟ್‌ಗಳು, ಲೈಫ್ ಜಾಕೆಟ್‌ಗಳು ಹೊಂದಿರುವ ಏಳು ರಕ್ಷಣಾ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ.

ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಹಲವಾರು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಗುರುವಾರ ಭಾರಿ ಮಳೆಯಿಂದಾಗಿ ರತ್ನಾಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದರು.

ಇತ್ತಿಚೆಗೆ ಚೆಂಬೂರ್ ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 23 ಜನರು ಸಾವನ್ನಪ್ಪಿದ್ದರು. ಚೆಂಬೂರ್‌ನ ವಾಶಿ ನಾಕಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೆಲವು ಮನೆಗಳ ಗೋಡೆ ಕುಸಿದು ಒಟ್ಟು 17 ಜನರು ಪ್ರಾಣ ಕಳೆದುಕೊಂಡಿದ್ದರು. ದುರಂತದಿಂದಾಗಿ ಮೃತಪಟ್ಟವರಿಗೆ ಒಕ್ಕೂಟ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿತ್ತು.


ಇದನ್ನೂ ಓದಿ: ಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...