Homeಸಿನಿಮಾಕ್ರೀಡೆಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

- Advertisement -
- Advertisement -

ಪ್ರತಿ ನಾಲ್ಕು ವರ್ಷಗಳಿಗೊಮ್ಮ ಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿನ ಸಾಧನೆ ಯಾವುದೇ ಕ್ರೀಡಾಪಟುವಿನ ಜೀವಮಾನಕ್ಕೆ ಜೊತೆಯಾಗಿ ಉಳಿಯುವ ಬೆವರು. ಅಲ್ಲಿ ಕೇವಲ ಆಟಗಾರನೊಬ್ಬನಲ್ಲ ಆತನನ್ನು/ಆಕೆಯನ್ನು ಪ್ರೋತ್ಸಾಹಿಸುವ, ಪೋಷಿಸುವ, ಮಾರ್ಗದರ್ಶನ ನೀಡುವ, ಚಪ್ಪಾಳೆ ಹೊಡೆದು ಹುರಿದುಂಬಿಸುವ, ಬಿರುದು ಬಾವಲಿ ನೀಡಿ ಅಭಿನಂದಿಸುವ ಸಾವಿರಾರು ಮನಸ್ಸುಗಳಿರುತ್ತವೆ. ಹಾಗೆ ನೋಡಿದರೆ ಒಂದಿಡೀ ಸಮುದಾಯ/ದೇಶವೇ ಆಕೆ/ಆತನ ಹಿಂದಿರುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಒಲಿಂಪಿಕ್ಸ್‌ಅನ್ನು ರಾಜಕೀಯರಹಿತ ರಾಷ್ಟ್ರೀಯತೆಯಿಂದ ಬೇರ್ಪಡಿಸುವುದು ಕಷ್ಟ.

ಈ ಕ್ರೀಡಾಜಾತ್ರೆಗೆ ಆಟಗಾರರನ್ನು ಅಣಿಗೊಳಿಸುವುದು, ಅವರ ಬೆಂಬಲಕ್ಕೆ ನಿಲ್ಲುವುದು ಹಾಗೂ ಅವರ ಸಾಧನೆಗೆ ಪೂರಕ ಒತ್ತಾಸೆ ನೀಡುವ ವ್ಯವಸ್ಥೆ ಸಹ ಒಂದಿಲ್ಲೊಂದು ಚೌಕಟ್ಟಿನ ಬಂಧಿಯಾಗಿರುತ್ತದೆ. ಓರ್ವ ಕ್ರೀಡಾಪಟುವಿನ ಯಶಸ್ಸಿನ ಮೇಲೆ ಆ ಇಡೀ ವ್ಯವಸ್ಥೆಯ ಯಶಸ್ಸು ಕೂಡ ಅವಲಂಬಿತವಾಗಿರುತ್ತದೆ.

ಈ ದೃಷ್ಟಿಯಿಂದ ನೋಡಿದಾಗ ಶತಮಾನಗಳಷ್ಟು ಇತಿಹಾಸವಿರುವ ಈ ಕೂಟಗಳಲ್ಲಿ ಅನೇಕ ಉದಾಹರಣೆಗಳು ದೇಶಿಯತೆಯ ಛಾಪು ಮೂಡಿಸಿರುವುದನ್ನು ನೋಡಬಹುದಾಗಿದೆ. ಅಷ್ಟೇ ಏಕೆ, ಪದಕ ಗೆದ್ದ ಕ್ರೀಡಾಳು ತನ್ನ ದೇಶದ ಧ್ವಜವನ್ನು ಮೈಗೆ ಸುತ್ತಿಕೊಂಡು ಸಂಭ್ರಮಿಸುವಾಗ, ಗೆಲುವನ್ನು ತನ್ನ ಜನರಿಗೆ ಸಮರ್ಪಿಸುವಾಗ ಸಹ ಈ ದೇಶೀಯತೆ ಸಾಕಾರಗೊಳ್ಳುತ್ತದೆ.

ಸಹಜವಾಗಿಯೇ ಅಥ್ಲೀಟ್‌ಗಳು ತಮ್ಮ ನಾಲ್ಕು ವರ್ಷಗಳ ಕಠಿಣ ಪರಿಶ್ರಮವನ್ನು ಪಣಕ್ಕಿಡುತ್ತಾರೆ. ಇಲ್ಲಿ ವೈಯಕ್ತಿಕ ಸಾಧನೆಯ ಪರಾಕಾಷ್ಠೆ ತಲುಪುವ ಹಂಬಲದಲ್ಲಿರುತ್ತಾರೆ. ಅವರ ಸಾಧನೆಯ ಮೇರಿನಲ್ಲಿಯೇ ಅವರು ಪ್ರತಿನಿಧಿಸುವ ಸಮುದಾಯದ ಸಂಭ್ರಮ ಕೂಡ ಬೆಸುಗೆ ಹಾಕಿಕೊಂಡಿರುತ್ತದೆ.

ಒಲಿಂಪಿಕ್ಸ್‌ನಲ್ಲಿ ದೇಶದ ಎಲ್ಲೆಗಳನ್ನು ಮೀರಿ ಕ್ರೀಡಾಪಟುಗಳು ಸ್ವತಂತ್ರರಾಗಿ ಸ್ಪರ್ಧಿಸಲು ಸಹ ಅವಕಾಶ ಇರುತ್ತದೆ. ಯಾವುದೇ ಒಂದು ದೇಶ ರಾಜಕೀಯ ಮತ್ತು ತುಮುಲದ ಕಾರಣಗಳಿಂದಾಗಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದಾದಾಗ ಆಯ್ದ ಕ್ರೀಡಾಪಟುಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಐಒಸಿ ಅವಕಾಶ ಮಾಡಿಕೊಡುತ್ತದೆ. ಆದರೆ ಅಂತಹವರ ಸಂಖ್ಯೆ ವಿರಳ ಎಂದೇ ಹೇಳಬೇಕು.

17 ವರ್ಷಗಳ ಹಿಂದೆ…

ಆಧುನಿಕ ಒಲಿಂಪಿಕ್ಸ್ ತವರು ಎನ್ನಲಾಗುವ ಅಥೆನ್ಸ್‌ನಲ್ಲಿ 17 ವರ್ಷಗಳ ಹಿಂದೆ ಒಲಿಂಪಿಕ್ಸ್ ಕ್ರೀಡಾಕೂಟ ಏರ್ಪಟ್ಟಿತ್ತು. ಧಾರವಾಡದ ಹೆಮ್ಮೆಯ ಕುವರಿ ಜೆಜೆ ಶೋಭಾ ಆ ಕೂಟದಲ್ಲಿ ತೋರಿದ ಛಲ, ಧೈರ್ಯ, ಸಂಕಲ್ಪದ ಹಿಂದೆ ಸಹ ತನ್ನ, ತನ್ನ ದೇಶದ ಗೌರವವನ್ನು ಎತ್ತಿಹಿಡಿಯಬೇಕು ಎಂಬ ಭಾವನೆ ಎದ್ದು ಕಾಣುತ್ತದೆ.

ಏಳು ಆಟಗಳ ಗೊಂಚಲಾಗಿರುವ ಹೆಪ್ಟಾಥ್ಲಾನಿನಲ್ಲಿ ಪದಕದಾಸೆಯೊಂದಿಗೆ ಕಣಕ್ಕಿಳಿದಿದ್ದ ಶೋಭಾ ಕಡೆಯ ಓಟದ ವೇಳೆ ತೀವ್ರ ಗಾಯಗೊಂಡು ನಡೆದಾಡಲೂ ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದ್ದರು. ಇಡೀ ಮೈದಾನವೇ ನಿಬ್ಬೆರಗಾಗುವಂತೆ 800 ಮೀಟರ್ ಓಟದ ಆರಂಭ ಗೆರೆ ಸಮೀಪ ಬಂದ ಶೋಭಾ ಅಪಾರ ನೋವಿನ ನಡುವೆಯೂ ಓಡಿದ್ದು, ಇಡೀ ಭಾರತೀಯರು ಎದೆಯುಬ್ಬಿಸುವಂತೆ ಮಾಡಿತ್ತು ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಇಂತಹ ಅನೇಕ ಉದಾಹರಣೆಗಳು ಓಲಿಂಪಿಕ್ಸ್ ಇತಿಹಾಸದ ಗರ್ಭದಲ್ಲಿ ಅಡಗಿವೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳ ಅಥ್ಲೀಟ್‌ಗಳು ತಮ್ಮ ದೇಶದ ಘನತೆ ಹೆಚ್ಚಿಸುವ ಸಲುವಾಗಿ ಅಪಾರ ನೋವು ನುಂಗಿ ಸ್ಪರ್ಧಿಸಿದ ನಿದರ್ಶನಗಳು ಹಲವಿವೆ.

ನಿಜ, ಓಲಿಂಪಿಕ್ಸ್ ಎಂಬುದು ಸಮಾನತೆಯ ಸಂಕೇತ. ಸಾಧನೆಯೊಂದೇ ಇಲ್ಲಿ ಎದ್ದು ಕಾಣುವ ಕಸುಬಾದರೂ ಎಲ್ಲರೂ ಸಮಾನ ಸಾಮರ್ಥ್ಯದ ಅಭ್ಯರ್ಥಿಗಳೇ! ಇಷ್ಟಾದರೂ ಇದನ್ನು ನಾವು, ನಮ್ಮವರು, ನಮ್ಮ ದೇಶ ಎಂಬ ಭಾವನೆಗಳಿಂದ ದೂರ ಇಡಲು ಸಾಧ್ಯವಿಲ್ಲ. ಆದರೆ ಇಲ್ಲಿ ಎದೆ ಬಡಿದುಕೊಳ್ಳುವ ರಾಷ್ಟ್ರೀಯತೆ ಎಂಬ ರಾಜಕೀಯ ಷಡ್ಯಂತ್ರ ಇಲ್ಲ. ಇಲ್ಲಿರುವುದು ಒಂದಿಡೀ ಸಮುದಾಯ-ದೇಶ ಎದೆಯುಬ್ಬಿಸಿ ನಡೆಯುವಂತೆ ಮಾಡುವ, ಒಳಗೊಳ್ಳುವ, ಪ್ರಾತಿನಿಧ್ಯಕ್ಕೆ ಮಹತ್ವ ನೀಡುವ, ಕ್ರೀಡಾಸ್ಪೂರ್ತಿಯ ರಾಷ್ಟ್ರೀಯತೆಯಷ್ಟೇ.

ಈಗ ಟೋಕಿಯೋದಲ್ಲಿ ಈ ಜಾತ್ರೆ ನಡೆಯುತ್ತಿದೆ. ಭಾರತ ಈ ಬಾರಿ 120ಕ್ಕೂ ಹೆಚ್ಚು ಸ್ಪರ್ಧಾಳುಗಳನ್ನು ಕಳುಹಿಸಿಕೊಟ್ಟಿದೆ.  ಈ ಹೊತ್ತಿಗೆ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಒಲಿಂಪಿಕ್ಸ್ ನ ಬೆಳ್ಳಿ ಪದಕ ಗಳಿಸಿಕೊಟ್ಟಿದ್ದರೆ. ಇನ್ನೂ ಹಲವು ಪದಕಗಳ ಭರವಸೆ ಇದೆ. ಅದೇನೇ ಇರಲಿ ನೂರು ಕೋಟಿ ಕನಸನ್ನು ಹೊತ್ತು ಟೋಕಿಯೋಗೆ ಹೋಗಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭಮಸ್ತು.

ಕೆ ಬಿ ಎಸ್ ಜಗನ್ನಾಥ್

ಕೆ ಬಿ ಎಸ್ ಜಗನ್ನಾಥ್
ಹಲವು ಕನ್ನಡ ಪತ್ರಿಕೆಗಳಲ್ಲಿ ಕ್ರೀಡಾ ವಿಭಾಗದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸಂಯುಕ್ತ ಕರ್ನಾಟಕ ಪತ್ರಿಕೆಯ ಮಾಜಿ ಸಂಪಾದಕರು.


ಇದನ್ನೂ ಓದಿ: ಒಲಂಪಿಯಾದಿಂದ ಟೋಕಿಯೋದವರೆಗೆ; ಇತಿಹಾಸದ ಕಣ್ಣೋಟದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...