Homeಮುಖಪುಟಬಿಎಸ್‌ಪಿಯಿಂದ ಚುನಾವಣೆಗಾಗಿ ರಾಮ ಧ್ಯಾನ: ಮಂದಿರ ನಿರ್ಮಾಣ ತ್ವರಿತಗೊಳಿಸುವ ಭರವಸೆ

ಬಿಎಸ್‌ಪಿಯಿಂದ ಚುನಾವಣೆಗಾಗಿ ರಾಮ ಧ್ಯಾನ: ಮಂದಿರ ನಿರ್ಮಾಣ ತ್ವರಿತಗೊಳಿಸುವ ಭರವಸೆ

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣವನ್ನು ತ್ವರಿತಗೊಳಿಸುವುದಾಗಿ ಮಾಯಾವತಿಯ ಬಹುಜನ ಸಮಾಜ ಪಕ್ಷ ಶುಕ್ರವಾರ ಭರವಸೆ ನೀಡಿದೆ. ದೇವಾಲಯ ನಿರ್ಮಾಣಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುವುದು ಮಾತ್ರ ಬಿಜೆಪಿಯ ಕೆಲಸವಾಗಿದೆ ಎಂದು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದೆ.

ಉತ್ತರ ಪ್ರದೇಶದ ದಲಿತ ಮತಗಳ ಮೇಲೆಯೇ ಕೇಂದ್ರೀತವಾಗಿರುವ ರಾಜಕೀಯ ಪಕ್ಷ ಬಹುಜನ ಸಮಾಜ ಪಕ್ಷದ ಈ ಹೇಳಿಕೆ ಚುನಾವಣಾ ತಂತ್ರವಾಗಿ ನೋಡಲಾಗುತ್ತಿದೆ. ಬ್ರಾಹ್ಮಣರ ಒಲೈಕೆಗಾಗಿ ಇಂತಹ ಹೇಳಿಕೆಗಳು ಬ್ರಾಹ್ಮಣ ಸಮ್ಮೇಳನಗಳನ್ನು ಬಿಎಸ್‌ಪಿ ನಡೆಸುತ್ತಿದೆ.

“ಬಿಜೆಪಿಗರು ರಾಮ ಮಂದಿರದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ಆದರೆ, ಭವ್ಯವಾದ ರಾಮನ ದೇವಾಲಯವನ್ನು ನಿರ್ಮಿಸಲು ಅದನ್ನು ಬಳಸುತ್ತಿಲ್ಲ. ಬಿಜೆಪಿಗರು ದೇವಾಲಯವನ್ನು ನಿರ್ಮಿಸಲು ಬಯಸುವುದಿಲ್ಲ. ನಾವು ಅವರಿಂದ ಈ ಕೆಲಸ ಆಗುವಂತೆ ಮಾಡುತ್ತೇವೆ. ದೇವಾಲಯ ನಿರ್ಮಾಣ ಚುರುಕುಗೊಳಿಸುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಆಪ್ತ ಸತೀಶ್ ಚಂದ್ರ ಮಿಶ್ರಾ ಅಯೋಧ್ಯೆಯಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧೆ: ಓವೈಸಿ ಜೊತೆ ಮೈತ್ರಿ ತಳ್ಳಿ ಹಾಕಿದ ಮಾಯಾವತಿ

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಎಸ್‌ಪಿ ರಾಜ್ಯದಲ್ಲಿ ಬ್ರಾಹ್ಮಣ ಸಮ್ಮೇಳನಗಳನ್ನು ಆಯೋಜಿಸುತ್ತಿದ್ದು, ಇದು ಮೊದಲನೆಯ ಬ್ರಾಹ್ಮಣ ಸಮ್ಮೇಳನವಾಗಿದೆ. ಆದರೆ, ಅಯೋಧ್ಯೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಮಾಯಾವತಿ ಭಾಗವಹಿಸಸಿರಲಿಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಮಿಶ್ರಾ ಉಸ್ತುವಾರಿ ವಹಿಸಿದ್ದರು.

ಯುಪಿ ಜನಸಂಖ್ಯೆಯ ಅಂದಾಜು ಶೇಕಡಾ 11 ರಷ್ಟು ಬ್ರಾಹ್ಮಣರು ಇದ್ದು, ಸಾಂಪ್ರದಾಯಿಕವಾಗಿ ರಾಜ್ಯದಲ್ಲಿ ರಾಜಕೀಯ ಮತ್ತು ಅಧಿಕಾರ ಸಮೀಕರಣಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಬ್ರಾಹ್ಮಣರು ಮತ್ತು ಪರಿಶಿಷ್ಟ ಜಾತಿಗಳ ಮತಗಳಿಂದ 2007 ರಲ್ಲಿ ಮಾಯಾವತಿ ಪಕ್ಷ ಅಧಿಕಾರಕ್ಕೆ ಬಂದಿತ್ತು.  ಬಹುಮತ ಪಡೆದಿದ್ದ ಮಾಯಾವತಿ ಪಕ್ಷ ಐದು ವರ್ಷಗಳ ಕಾಲ ಆಳಿದ್ದರು. ಬಿಎಸ್‌ಪಿಯಿಂದ ಇಲ್ಲಿಯವರೆಗೆ 40 ಕ್ಕೂ ಹೆಚ್ಚು ಬ್ರಾಹ್ಮಣ ಶಾಸಕರು ಆಯ್ಕೆಯಾಗಿದ್ದಾರೆ.

ಜಾತಿಯ ಆಧಾರದಲ್ಲಿ ಠಾಕೂರ್ ಆಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಬ್ರಾಹ್ಮಣ ಸಮುದಾಯವು  ಅಸಮಾಧಾನ ಹೊಂದಿದೆ. ಆದರೆ, ಈ ವಿಚಾರವನ್ನು ಬಿಜೆಪಿ ತಳ್ಳಿಹಾಕಿದೆ.

ಇತ್ತ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಮತ್ತು ಮಾಯಾವತಿಯ ಬಿಎಸ್‌ಪಿ ಎರಡು ಪಕ್ಷಗಳು ಚುನಾವಣೆಗೆ ಮುನ್ನ ಬ್ರಾಹ್ಮಣ ಸಮುದಾಯವನ್ನು ಗೆಲ್ಲುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.


ಇದನ್ನೂ ಓದಿ: ರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಬಹಳ ನೋವಿನ ಸಂಗತಿ, ಚುನಾವಣೆಯಲ್ಲಿ ಗೆಲ್ಲಲು ಬಿ.ಎಸ್.ಪಿ. ಇಂತಹ ಹಾದಿಯನ್ನು ಹಿಡಿಯಬಾರದಿತ್ತು. ಅಂಬೇಡ್ಕರ್ ಮತ್ತು ಕಾನ್ಶೀರಾಂ ಅವರ ಕನಸುಗಳನ್ನು ಮಾಯಾವತಿಯವರು ನುಚ್ಚುನೂರು ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...