Homeಮುಖಪುಟನಾಯಿ, ಆಮೆಗಳನ್ನು ವರದಕ್ಷಿಣೆ ಕೇಳಿದ ವರ: ಜೈಲಿಗೆ ತಳ್ಳಿದ ಪೊಲೀಸರು

ನಾಯಿ, ಆಮೆಗಳನ್ನು ವರದಕ್ಷಿಣೆ ಕೇಳಿದ ವರ: ಜೈಲಿಗೆ ತಳ್ಳಿದ ಪೊಲೀಸರು

- Advertisement -
- Advertisement -

ಮಹಾರಾಷ್ಟ್ರದಲ್ಲಿ 21 ಆಮೆಗಳು ಮತ್ತು ಕಪ್ಪು ಲ್ಯಾಬ್ರಡಾರ್ ನಾಯಿಯನ್ನು ವರದಕ್ಷಿಣೆ ನೀಡಲು ಒತ್ತಾಯಿಸಿದ್ದ ಔರಂಗಾಬಾದ್ ಮೂಲದ ವ್ಯಕ್ತಿ ಮತ್ತು ಅವರ ಕುಟುಂಬದ ಐವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವರನ ಕುಟುಂಬದ ವಿರುದ್ಧ ವಂಚನೆ ಮತ್ತು ಕಾನೂನು ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 10 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ನಿಶ್ಚಿತಾರ್ಥವಾದ ಮೇಲೆ ಇಂತಹ ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ಈ ಮೊದಲೇ ವಧುವಿನ ಮನೆಯವರಿಂದ 2 ಲಕ್ಷ ರೂಪಾಯಿ ಮತ್ತು 10 ಗ್ರಾಂ ಚಿನ್ನವನ್ನು ವರದಕ್ಷಿಣೆಯಾಗಿ ಪಡೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಶ್ಚಿತಾರ್ಥದ ನಂತರ, ವರ ಮತ್ತು ಅವನ ಮನೆಯ ಸದಸ್ಯರು 21 ಆಮೆ, ಒಂದು ಕಪ್ಪು ಲ್ಯಾಬ್ರಡಾರ್ ನಾಯಿ, ಬುದ್ಧನ ಪ್ರತಿಮೆ, ಬೆಲೆಬಾಳುವ ದೀಪದ ಕಂಬಗಳು ಮತ್ತು 10 ಲಕ್ಷ ರೂ.ಗಳನ್ನು ಬೇಡಿಕೆಯಿಟ್ಟಿದ್ದಾರೆ. ಜೊತೆಗೆ  ಮದುವೆಯ ನಂತರ ಹುಡುಗಿಗೆ ಸರ್ಕಾರಿ ಕೆಲಸ ಕೊಡಿಸಲು ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದು ಹುಡುಗಿ ಮನೆಯವರು ಆರೋಪಿಸಿದ್ದಾರೆ.

ಇದನ್ನೂ ಓದಿ: 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಾಧ್ನಾ ಅವಾದ್, “ವಧುವಿನ ಕುಟುಂಬವು ವರದಕ್ಷಿಣೆ ಬೇಡಿಕೆ ಪೂರೈಸುವಲ್ಲಿ ಅಸಹಾಯಕರಾಗಿದ್ದಾರೆ ಎಂದು ವರನ ಕಡೆಯವರು ಮದುವೆಯನ್ನು ರದ್ದುಪಡಿಸಿದ್ದಾರೆ. ವರ ಮತ್ತು ಅವರ ಕುಟುಂಬದ ವಿರುದ್ಧ ಅಪರಾಧ ಉಲ್ಲಂಘನೆ ಮತ್ತು ವಂಚನೆಗಾಗಿ ಐಪಿಸಿಯ 420, 406 ಮತ್ತು 34 ನೇ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ಪೂರ್ಣಗೊಂಡ ನಂತರ ಇನ್ನೂ ಹಲವು ಸೆಕ್ಷನ್‌ಗಳನ್ನು ಸೇರಿಸಬಹುದು” ಎಂದು ತಿಳಿಸಿದ್ದಾರೆ.

ಎಷ್ಟೇ ಕಾನೂನುಗಳು ಜಾರಿಗೆ ಬಂದರೂ ದೇಶದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ವರದಕ್ಷಿಣೆಯ ಸ್ಪರೂಪ ಬದಲಾಗಿಯಷ್ಟೇ. ವಿಭಿನ್ನ ರೀತಿಯಲ್ಲಿ ವರದಕ್ಷಿಣೆ ಪಡೆಯುವುದು ಈಗೀನ ರೀತಿಯಾಗಿದೆ. ಕೆಲವು ಪ್ರದೇಶದಲ್ಲಿ ನಿರಂತರವಾಗಿ ವರದಕ್ಷಿಣೆ ಕಿರುಕುಳ ಪ್ರಕರಣಗಳು ಹೊರಬರುತ್ತಿವೆ.

ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣೆ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...