Homeಕರೋನಾ ತಲ್ಲಣಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಅಂಕಿ ಅಂಶವನ್ನೇ ಕೇಳಿಲ್ಲ: ತಿರುಗೇಟು ನೀಡಿದ ಛತ್ತಿಸ್‌ಘಡ

ಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಅಂಕಿ ಅಂಶವನ್ನೇ ಕೇಳಿಲ್ಲ: ತಿರುಗೇಟು ನೀಡಿದ ಛತ್ತಿಸ್‌ಘಡ

- Advertisement -
- Advertisement -

ದೇಶಾದ್ಯಂತ ಅಪ್ಪಳಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಕುರಿತು ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಒಕ್ಕೂಟ ಸರ್ಕಾರ ತನ್ನ ವೈಫಲ್ಯವನ್ನು ರಾಜ್ಯ ಸರ್ಕಾರದ ಮೇಲೆ ಹೇರಿತ್ತು. ಈಗ ರಾಜ್ಯಗಳಿಂದ ಅಂಕಿ ಅಂಶಗಳನ್ನೇ ಕೇಳಿಲ್ಲ ಎಂದು ಛತ್ತಿಸ್‌ಘಡ ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಒಕ್ಕೂಟ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

“ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ರೋಗಿಗಳು ಬಲಿಯಾಗಿದ್ದಾರೆಯೇ ಎಂದು ತಿಳಿಯಲು ರಾಜ್ಯ ಸರ್ಕಾರವು ದಾಖಲಾದ ಸಾವುಗಳ ಮರು ಲೆಕ್ಕಪರಿಶೋಧನೆ ನಡೆಸುತ್ತಿದೆ” ಎಂದು ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಮಾಹಿತಿ ಹೇಳಿದ್ದಾರೆ.

ಒಕ್ಕೂಟ ಸರ್ಕಾರವು ಜುಲೈ 20 ರಂದು ರಾಜ್ಯಸಭೆಯಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಆಕ್ಸಿಜನ್‌ ಕೊರತೆಯ ಸಾವುಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರದಿಯನ್ನು ನೀಡಿಲ್ಲ ಎಂದು ಹೇಳಿತ್ತು. ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

“ಭಾರತ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಮದ ನಿರಂತರವಾಗಿ ಮಾಹಿತಿ ನೀಡಲಾಗಿದೆ. ಆದರೆ, ಅವರು ಆಮ್ಲಜನಕದ ಕೊರತೆಯಿಂದ ಉಂಟಾಗುವ ಸಾವುಗಳ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಕೇಳಲಿಲ್ಲ. ಈಗ ರಾಜ್ಯಗಳು ಸರಿಯಾದ ಡೇಟಾ ನೀಡಲ್ಲ ಎಂದು ಹೇಳುತ್ತಿದ್ದಾರೆ. ಇದು ಅವರ ವೈಫಲ್ಯ ಅಸಮರ್ಥತೆಯನ್ನು ಮುಚ್ಚಿಕೊಳ್ಳಲು ಹೇಳುತ್ತಿರುವ ದುರುದ್ದೇಶದ ಹೇಳಿಕೆಯಾಗಿದೆ” ಎಂದು ಸಚಿವ ಟಿಎಸ್‌ ಸಿಂಗ್‌ ಡಿಯೋ ಒಕ್ಕೂಟ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

“ಛತ್ತಿಸ್‌ಘಡ ರಾಜ್ಯದಲ್ಲಿ ಆಕ್ಸಿಜನ್‌ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗಿದೆ. ಹೀಗಾಗಿ ನಾವು ಆಕ್ಸಿಜನ್‌ ಕೊರತೆಗೆ ಸಂಬಂಧಿಸಿದ ಸಾವುಗಳನ್ನು ದಾಖಲಿಸಿಲ್ಲ. ಆದರೆ, ಈ ಬಗ್ಗೆ ನಾವು ಮೊಂಡುತನವನ್ನು ಪ್ರದರ್ಶಿಸುವುದಿಲ್ಲ. ನಾವು ಆಕ್ಸಿಜನ್‌ ಸಾವುಗಳ ಬಗ್ಗೆ ಜನರು ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಸಿದ್ದರಿದ್ದೇವೆ. ಆಕ್ಸಿಜನ್‌ ಸಂಬಂಧಿತ ಸಾವುಗಳ ಬಗ್ಗೆ ಮರು ಪರಿಶೀಲನೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೂ, ಕೆಲವು ದೂರುಗಳನ್ನು ಪಡೆಯಲಾಗಿದೆ. ಹಾಗಾಗಿ, ಎಲ್ಲಾ ಅನುಮಾನಗಳನ್ನು ಹೋಗಲಾಡಿಸಲು ನಾವು ಮತ್ತೆ ಸಾವುಗಳ ಅಂಕಿಅಂಶಗಳನ್ನು ಮರು ಲೆಕ್ಕಪರಿಶೋಧನೆ ಮಾಡುತ್ತಿದ್ದೇವೆ” ಎಂದು ಸಿಂಗ್ ಡಿಯೋ ತಿಳಿಸಿದ್ದಾರೆ.

ದೇಶಾದ್ಯಂತ ಇದೇ ರೀತಿಯ ಸಾವುಗಳ ಲೆಕ್ಕಪರಿಶೋಧನೆ ನಡೆಸಬೇಕೆಂದು ಒಕ್ಕೂಟ ಸರ್ಕಾರವನ್ನು ಸಿಂಗ್ ಡಿಯೋ ಒತ್ತಾಯಿಸಿದ್ದಾರೆ. “ಯಾವುದೇ ಪುರಾವೆಗಳಿಲ್ಲದೆ ಲಸಿಕೆ ವ್ಯರ್ಥವಾಗಿದೆಯೆಂದು ಕೇಂದ್ರವು ಛತ್ತಿಸ್‌ಘಡದ ಮೇಲೆ ಆರೋಪ ಮಾಡುತ್ತಿದೆ. ಈ ರೀತಿ ದೇಶಾದ್ಯಂತ ತಮ್ಮ ತಂಡಗಳನ್ನು ಕಳುಹಿಸುವ ಮೂಲಕ ಎಷ್ಟು ಸಾವುಗಳು ಸಂಭವಿಸಿವೆ ಎಂಬುದನ್ನು ತಿಳಿಯಲು ಸಾಧ್ಯವಾಗುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಪಾರದರ್ಶಕತೆ ಪ್ರಜಾಪ್ರಭುತ್ವದಿಂದ ಚುನಾಯಿತವಾದ ಸರ್ಕಾರದ ಒಂದು ಅಂಶವಾಗಿದೆ. ಪಾರದರ್ಶಕತೆಗೆ ಕಾಂಗ್ರೆಸ್‌ ಬದ್ದವಾಗಿದೆ. ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಕೊರೊನಾ ರೋಗಿಯು ಸಾವನ್ನಪ್ಪಿದ್ದರೆ, ಆ ಬಗ್ಗೆ ಮಾಹಿತಿ ನೀಡುವಂತೆ ಎನ್‌ಜಿಒಗಳು, ನಾಗರಿಕ ಸಮಾಜದ ಸದಸ್ಯರು ಮತ್ತು ರಾಜ್ಯದ ಪತ್ರಕರ್ತರಿಗೆ ನಾವು ಮನವಿ ಮಾಡುತ್ತೇವೆ” ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...