Homeಸಿನಿಮಾಕ್ರೀಡೆತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಚಾನು..

- Advertisement -
- Advertisement -

ಇಂದು ಭಾರತದ ಪಾಲಿಗೆ ಹೆಮ್ಮೆಯ ದಿನ. ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾಳೆ. ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಮಣಿಪುರದ ಮೀರಾಬಾಯಿ ಚಾನು ಕುರಿತು ವಿವರ ಇಲ್ಲಿದೆ.

2016ರ ರಿಯೋ ಒಲಂಪಿಕ್ಸ್‌ನಲ್ಲಿಯೇ ಮೀರಾಬಾಯಿ ಇತಿಹಾಸ ಸೃಷ್ಟಿಸಬೇಕಿತ್ತು. ಆದರೆ ಗಾಯಗೊಂಡ ಅವರು ಪದಕ ಗೆಲ್ಲವಲ್ಲಿ ವಿಫಲರಾದರು. ಆದರೆ ಛಲಬಿಡದ ಅವರು ಕೊನೆಗೂ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಪಿಂಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿಯವರು ಕಂಚಿನ ಪದಕ ಗಳಿಸಿದ್ದೇ ಕೊನೆಯಾಗಿತ್ತು.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಕ್ರೀಡಾಪಟುವಾಗಲು ನಿರ್ಧರಿಸಿದ್ದಳು. ತನ್ನ ಮನೆಯ ಹುಡುಗರು ಮತ್ತು ಸಂಬಂಧಿಕರು ಪುಟ್ಬಾಲ್ ಆಡುತ್ತಿದ್ದರಿಂದ ಪ್ರತಿದಿನ ಬಟ್ಟೆಯೆಲ್ಲ ಗಲೀಜು ಮಾಡಿಕೊಂಡು ವಾಪಸ್ ಬರುತ್ತಿದ್ದರು. ಹಾಗಾಗಿ ಈಕೆ ಮಾತ್ರ ಶುಚಿಯಾದ, ನೀಟ್‌ ಆಗಿರುವ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಬಯಸಿದ್ದಳು. ಹಾಗಾಗಿ ಆರ್ಚರ್ ಕ್ರೀಡೆಯು ಅದಕ್ಕೆ ತಕ್ಕುದಾದ ಮತ್ತು ಸ್ಟೈಲ್ ಆದ ಕ್ರೀಡೆಯಾಗಿದ್ದು ಅದನ್ನು ಅಭ್ಯಸಿಸಲು ಬಯಸಿದ್ದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದಳು. ನಂತರ ಅಂತರಾಷ್ಟ್ರೀಯ ವೇಟ್ ಲಿಫ್ಟರ್‌ ಮತ್ತು ಕೋಚ್ ಆಗಿದ್ದ ಅನಿತಾ ಚಾನುರನ್ನು ಭೇಟಿ ಮಾಡಿದ ನಂತರ ಆಕೆಯ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭವಾಯಿತು.

ಮೀರಾಬಾಯಿ ಆರಂಭದಲ್ಲಿಯೇ ಹಲವು ಕಷ್ಟಗಳನ್ನು ಎದುರಿಸಬೇಕಾಯಿತು. ತನ್ನ ಊರಿನಿಂದ 22 ಕಿ.ಮೀ ದೂರದಲ್ಲಿರುವ ತರಬೇತಿ ಕೇಂದ್ರವನ್ನು ಎರಡು ಬಸ್‌ ಬದಲಿಸಿ ಬೆಳಿಗ್ಗೆ 6 ಗಂಟೆಯೊಳಗೆ ತಲುಬೇಕಾಗಿತ್ತು. ಬಹಳ ಶಕ್ತಿಯುತ ಹುಡುಗಿಯಾಗಿದ್ದ ಮೀರಾಬಾಯಿ ಇದೆಲ್ಲವನ್ನು ದಿಟ್ಟವಾಗಿ ಎದುರಿಸಿದಳು. 12ನೇ ವಯಸ್ಸಿನಲ್ಲಿಯೇ ಆಕೆ ತನ್ನ ಸಹೋದರರಿಗಿಂತ ಹೆಚ್ಚಿನ ಭಾರದ ಕಟ್ಟಿಗೆಗಳನ್ನು ಹೊರುತ್ತಿದ್ದಳು.

2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 170ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದ ಅವರು, 2016ರಲ್ಲಿ ನಡೆದ ನ್ಯಾಷನಲ್ ಸ್ಪರ್ಧೆಯಲ್ಲಿ 186 ಕೆಜಿ ಭಾರ ಎತ್ತಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಆದರೆ ಅದೇ ವರ್ಷ ನಡೆದ ರಿಯೋ ಒಲಪಿಂಕ್‌ನಲ್ಲಿ ಗಾಯಗೊಂಡು ನಿರಾಸೆ ಮೂಡಿಸಿದ್ದರು.

2017 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮತ್ತು 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಾನು 2016ರ ಒಲಂಪಿಕ್ಸ್ ನೋವನ್ನು ಮರೆತರು. ಅಲ್ಲಿಂದ ಟೋಕಿಯೋ ಒಲಂಪಿಕ್ಸ್‌ಗಾಗಿ ತಯಾರಿ ನಡೆಸಿದ ಅವರು ಕೊನೆಗೂ ಭರವಸೆ ಹುಸಿಗೊಳಿಸದೆ ಪದಕ ತಂದುಕೊಟ್ಟಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ ಚಾನು ಏಷ್ಯನ್ ಕ್ರೀಡಾಕೂಟದಲ್ಲಿ ವಿಶ್ವದಾಖಲೆ ಗಳಿಸಿದ್ದಾರೆ. ಇಂದಿನ ಒಲಂಪಿಕ್ ಬೆಳ್ಳಿ ಅವರ ಹಿರಿಮೆಗೆ ಮತ್ತೊಂದು ಗರಿಯಾಗಿದೆ. ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಬಾಯಿ ಚಾನುಗೆ ಅಭಿನಂದನೆಗಳು.. ಮತ್ತುಷ್ಟು ಪದಕಗಳು ನಿಮ್ಮಿಂದ ಹೊರಹೊಮ್ಮಲಿ ಎಂದು ಭಾರತ ಎದುರು ನೋಡುತ್ತಿದೆ.


ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...