Homeಸಿನಿಮಾಕ್ರೀಡೆತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಚಾನು..

- Advertisement -
- Advertisement -

ಇಂದು ಭಾರತದ ಪಾಲಿಗೆ ಹೆಮ್ಮೆಯ ದಿನ. ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾಳೆ. ಚಿಕ್ಕವಳಿದ್ದಾಗ ಆರ್ಚರ್ (ಬಿಲ್ಲುಗಾರಿಕೆ) ಸ್ಪರ್ಧೆಯ ತರಬೇತಿ ಪಡೆಯಲು ಹೋಗಿ ಕೋಚ್‌ ಸಿಗದೆ ನಂತರ ವೇಟ್ ಲಿಫ್ಟಿಂಗ್ ತರಬೇತಿ ಪಡೆದು ಇಂದು ಇತಿಹಾಸ ನಿರ್ಮಿಸಿದ ಮಣಿಪುರದ ಮೀರಾಬಾಯಿ ಚಾನು ಕುರಿತು ವಿವರ ಇಲ್ಲಿದೆ.

2016ರ ರಿಯೋ ಒಲಂಪಿಕ್ಸ್‌ನಲ್ಲಿಯೇ ಮೀರಾಬಾಯಿ ಇತಿಹಾಸ ಸೃಷ್ಟಿಸಬೇಕಿತ್ತು. ಆದರೆ ಗಾಯಗೊಂಡ ಅವರು ಪದಕ ಗೆಲ್ಲವಲ್ಲಿ ವಿಫಲರಾದರು. ಆದರೆ ಛಲಬಿಡದ ಅವರು ಕೊನೆಗೂ ವೇಟ್‌ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಪಿಂಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿಯವರು ಕಂಚಿನ ಪದಕ ಗಳಿಸಿದ್ದೇ ಕೊನೆಯಾಗಿತ್ತು.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಕ್ರೀಡಾಪಟುವಾಗಲು ನಿರ್ಧರಿಸಿದ್ದಳು. ತನ್ನ ಮನೆಯ ಹುಡುಗರು ಮತ್ತು ಸಂಬಂಧಿಕರು ಪುಟ್ಬಾಲ್ ಆಡುತ್ತಿದ್ದರಿಂದ ಪ್ರತಿದಿನ ಬಟ್ಟೆಯೆಲ್ಲ ಗಲೀಜು ಮಾಡಿಕೊಂಡು ವಾಪಸ್ ಬರುತ್ತಿದ್ದರು. ಹಾಗಾಗಿ ಈಕೆ ಮಾತ್ರ ಶುಚಿಯಾದ, ನೀಟ್‌ ಆಗಿರುವ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಬಯಸಿದ್ದಳು. ಹಾಗಾಗಿ ಆರ್ಚರ್ ಕ್ರೀಡೆಯು ಅದಕ್ಕೆ ತಕ್ಕುದಾದ ಮತ್ತು ಸ್ಟೈಲ್ ಆದ ಕ್ರೀಡೆಯಾಗಿದ್ದು ಅದನ್ನು ಅಭ್ಯಸಿಸಲು ಬಯಸಿದ್ದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದಳು. ನಂತರ ಅಂತರಾಷ್ಟ್ರೀಯ ವೇಟ್ ಲಿಫ್ಟರ್‌ ಮತ್ತು ಕೋಚ್ ಆಗಿದ್ದ ಅನಿತಾ ಚಾನುರನ್ನು ಭೇಟಿ ಮಾಡಿದ ನಂತರ ಆಕೆಯ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭವಾಯಿತು.

ಮೀರಾಬಾಯಿ ಆರಂಭದಲ್ಲಿಯೇ ಹಲವು ಕಷ್ಟಗಳನ್ನು ಎದುರಿಸಬೇಕಾಯಿತು. ತನ್ನ ಊರಿನಿಂದ 22 ಕಿ.ಮೀ ದೂರದಲ್ಲಿರುವ ತರಬೇತಿ ಕೇಂದ್ರವನ್ನು ಎರಡು ಬಸ್‌ ಬದಲಿಸಿ ಬೆಳಿಗ್ಗೆ 6 ಗಂಟೆಯೊಳಗೆ ತಲುಬೇಕಾಗಿತ್ತು. ಬಹಳ ಶಕ್ತಿಯುತ ಹುಡುಗಿಯಾಗಿದ್ದ ಮೀರಾಬಾಯಿ ಇದೆಲ್ಲವನ್ನು ದಿಟ್ಟವಾಗಿ ಎದುರಿಸಿದಳು. 12ನೇ ವಯಸ್ಸಿನಲ್ಲಿಯೇ ಆಕೆ ತನ್ನ ಸಹೋದರರಿಗಿಂತ ಹೆಚ್ಚಿನ ಭಾರದ ಕಟ್ಟಿಗೆಗಳನ್ನು ಹೊರುತ್ತಿದ್ದಳು.

2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 170ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದ ಅವರು, 2016ರಲ್ಲಿ ನಡೆದ ನ್ಯಾಷನಲ್ ಸ್ಪರ್ಧೆಯಲ್ಲಿ 186 ಕೆಜಿ ಭಾರ ಎತ್ತಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಆದರೆ ಅದೇ ವರ್ಷ ನಡೆದ ರಿಯೋ ಒಲಪಿಂಕ್‌ನಲ್ಲಿ ಗಾಯಗೊಂಡು ನಿರಾಸೆ ಮೂಡಿಸಿದ್ದರು.

2017 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮತ್ತು 2018ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಾನು 2016ರ ಒಲಂಪಿಕ್ಸ್ ನೋವನ್ನು ಮರೆತರು. ಅಲ್ಲಿಂದ ಟೋಕಿಯೋ ಒಲಂಪಿಕ್ಸ್‌ಗಾಗಿ ತಯಾರಿ ನಡೆಸಿದ ಅವರು ಕೊನೆಗೂ ಭರವಸೆ ಹುಸಿಗೊಳಿಸದೆ ಪದಕ ತಂದುಕೊಟ್ಟಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಚೀಫ್ ಟಿಕೆಟ್ ಇನ್ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ ಚಾನು ಏಷ್ಯನ್ ಕ್ರೀಡಾಕೂಟದಲ್ಲಿ ವಿಶ್ವದಾಖಲೆ ಗಳಿಸಿದ್ದಾರೆ. ಇಂದಿನ ಒಲಂಪಿಕ್ ಬೆಳ್ಳಿ ಅವರ ಹಿರಿಮೆಗೆ ಮತ್ತೊಂದು ಗರಿಯಾಗಿದೆ. ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಬಾಯಿ ಚಾನುಗೆ ಅಭಿನಂದನೆಗಳು.. ಮತ್ತುಷ್ಟು ಪದಕಗಳು ನಿಮ್ಮಿಂದ ಹೊರಹೊಮ್ಮಲಿ ಎಂದು ಭಾರತ ಎದುರು ನೋಡುತ್ತಿದೆ.


ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...