Homeಚಳವಳಿರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ರೈತ ಪ್ರತಿಭಟನೆ ವೇಳೆ 500 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೊಂಡಿದೆ.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಹುತಾತ್ಮರಾದ ರೈತರ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ಹೇಳಿದ್ದಾರೆ.

ಆದರೆ, ಪಂಜಾಬ್ ಸರ್ಕಾರವು ರಾಜ್ಯದ 220 ರೈತರು ಮತ್ತು ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶ ನೀಡಿದ್ದು, ಮೃತಪಟ್ಟ ರೈತ ಕುಟುಂಬಗಳಿಗೆ 10.86 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಘೋಷಿಸಿದೆ.

ಈ ಬಗ್ಗೆ ಪಂಜಾಬ್ ಸರ್ಕಾರದ ಮಾಹಿತಿಯನ್ನು ಕಲೆ ಹಾಕಿರುವ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ, ಜುಲೈ 20 ರವರೆಗೆ 220 ರೈತರು, ಕೃಷಿ ಕಾರ್ಮಿಕರು ಮೃತಪಟ್ಟಿರುವ ವಿವರಗಳು ಕಡತದಲ್ಲಿ ದಾಖಲಾಗಿವೆ ಎಂದು ತಿಳಿಸಿದೆ.

ಈ 220 ಜನರಲ್ಲಿ, 203 (92%) ರೈತರು / ಕೃಷಿ ಕಾರ್ಮಿಕರು ರಾಜ್ಯದ ಮಾಲ್ವಾ ಪ್ರದೇಶದವರಾಗಿದ್ದರೆ, 11 (5%) ಸಾವುಗಳು ಮಜಾ ಪ್ರದೇಶ ಮತ್ತು ಆರು (2.7%) ದೋಬಾ ಪ್ರದೇಶದ ರೈತರಾಗಿದ್ದಾರೆ ಎಂದು ಪಂಜಾಬ್ ಸರ್ಕಾರದ ದಾಖಲೆಗಳು ತಿಳಿಸಿವೆ.

ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ಇನ್ನು ದೆಹಲಿ ಹೋರಾಟದ ಪ್ರತಿಭಟನೆ ವೇಳೆ 500 ಕ್ಕೂ ಹೆಚ್ಚು ಪ್ರತಿಭಟನಾ ನಿರತ ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೊಂಡಿದೆ. ಇದಕ್ಕೆ ಹೆಚ್ಚಿನ ರೈತರ ಸಾವುಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಪಂಜಾಬ್ ಸರ್ಕಾರದ ಮೂಲಗಳು ಬಹಿರಂಗಪಡಿಸಿವೆ.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಂಗ್ರೂರ್ ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯ ರೈತರು/ ಕೃಷಿ ಕಾರ್ಮಿಕರ ಸಾವುಗಳು ವರದಿಯಾಗಿವೆ. ಕಳೆದ ಎಂಟು ತಿಂಗಳಲ್ಲಿ ಇಂತಹ 43 ಸಾವುಗಳು ಸಂಭವಿಸಿವೆ. ಪ್ರತಿ ಪ್ರಕರಣದಲ್ಲೂ ಮೃತ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಮಂಜೂರು ಮಾಡಿದೆ. ಜಿಲ್ಲೆಯಲ್ಲಿ ಈಗಾಗಲೇ 2.13 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.

ಬಟಿಂಡಾ ಜಿಲ್ಲೆಯು ರೈತರ ಸಾವುಗಳಲ್ಲಿ ಎರಡನೇ ಸ್ಥಾನದಲ್ಲಿದ್ದು, ಈವರೆಗೆ 33 ಸಾವುಗಳು ವರದಿಯಾಗಿವೆ. ಮೃತ ರ ಕುಟುಂಬಗಳಿಗೆ ಸರ್ಕಾರವು 1.65 ಕೋಟಿ ರೂ. ನೀಡಿದೆ. ಇದಲ್ಲದೆ, ಮೊಗಾದಲ್ಲಿ 27, ಪಟಿಯಾಲದಲ್ಲಿ 25, ಬರ್ನಾಲಾದಲ್ಲಿ 17, ಮಾನ್ಸಾದಲ್ಲಿ 15, ಮುಕಾತ್ಸರ್‌ ಸಾಹಿಬ್‌ನಲ್ಲಿ 14, ಲೂಧಿಯಾನದಲ್ಲಿ 13 ಪ್ರಕರಣಗಳು ವರದಿಯಾಗಿವೆ.

ಇನ್ನು, ಮೃತ ರೈತರ ಕುಟುಂಬ ಸದಸ್ಯರಿಗೆ ಸಹಾನುಭೂತಿಯ ನೆಲೆಯಲ್ಲಿ ಪಂಜಾಬ್ ಸರ್ಕಾರವು ಉದ್ಯೋಗಗಳನ್ನು ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...