Homeಮುಖಪುಟಅವಶ್ಯಕತೆ ಇದ್ದರಷ್ಟೇ ಮೊಬೈಲ್ ಬಳಸಿ: ಮಹಾರಾಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಮಾರ್ಗಸೂಚಿ

ಅವಶ್ಯಕತೆ ಇದ್ದರಷ್ಟೇ ಮೊಬೈಲ್ ಬಳಸಿ: ಮಹಾರಾಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಮಾರ್ಗಸೂಚಿ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ಹಗರಣದ ನಡುವೆಯೇ ಮಹಾರಾಷ್ಟ್ರ ಸರ್ಕಾರ ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಕಚೇರಿಗಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸುವಂತೆ ಮತ್ತು ಅಧಿಕೃತ ಲ್ಯಾಂಡ್‌ಲೈನ್ ಬಳಕೆ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಜನರಲ್‌ ಅಡ್ಮಿನಿಸ್ಟ್ರೇಷನ್‌ ಡಿಪಾರ್ಟ್‌ಮೆಂಟ್‌ (General Administration Department ), ಪೆಗಾಸಸ್ ಹಗರಣದ ನಡುವೆ ಲ್ಯಾಂಡ್‌ಲೈನ್‌ಗಳು ಹೆಚ್ಚು ಯೋಗ್ಯವಾಗಿವೆ ಎಂದಿದೆ. ಅಧಿಕೃತ ಕೆಲಸಕ್ಕೆ ಅಗತ್ಯವಿದ್ದರೆ ಮಾತ್ರ ಮೊಬೈಲ್ ಫೋನ್ ಬಳಸಬೇಕು ಎಂದು ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮೊಬೈಲ್‌ನಲ್ಲಿ ಮಾತನಾಡುವಾಗ ಸಭ್ಯ ಭಾಷೆಯ ಬಳಕೆ ಮತ್ತು ಇತರರ ಉಪಸ್ಥಿತಿಯ ಬಗ್ಗೆ ಗಮನಗೊಡುವುದು ಮುಖ್ಯವೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. “ಮೊಬೈಲ್ ಫೋನ್‌ನಲ್ಲಿ ಮಾತನಾಡುವಾಗ, ಮೃದು ಧ್ವನಿಯಲ್ಲಿ ಮಾತನಾಡಬೇಕು, ವಾದ ಮಾಡಬಾರದು ಮತ್ತು ಅಸಂವಿಧಾನಿಕ ಭಾಷೆಯನ್ನು ಬಳಸಬಾರದು” ಎಂದು ಮಾರ್ಗಸೂಚಿಯಲ್ಲಿ ತಿಳಿಸಿರುವುದಾಗಿ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಕಚೇರಿ ಬಳಕೆಗಾಗಿ ಸಾಮಾಜಿಕ ಮಾಧ್ಯಮವನ್ನು ಬಳಸುವಾಗ ಸಮಯ ಮತ್ತು ಭಾಷೆಯತ್ತ ಗಮನಹರಿಸಲು ತಿಳಿಸಲಾಗಿದೆ. ಜೊತೆಗೆ ಸರ್ಕಾರದ ಅಧಿಕೃತ ಕೆಲಸಗಳಿಗೆ ಸಂಬಂಧಿಸಿದಂತೆ ಪಠ್ಯ ಸಂದೇಶಗಳನ್ನು (text messages) ಬಳಸಲು ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಸೂಚನೆ ನೀಡಲಾಗಿದೆ.

ಅಧಿಕಾರಿಗಳು ಮತ್ತು ಉದ್ಯೋಗಿಗಳು ಮತ್ತೊಂದು ಕರೆಯಲ್ಲಿ ಕಾರ್ಯನಿರತವಾಗಿದ್ದಾಗ ಹಿರಿಯ ಅಧಿಕಾರಿಗಳು ಕರೆ ಮಾಡಿದರೆ ತ್ವರಿತವಾಗಿ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರಿ ಕಚೇರಿಗಳ ವರ್ಚಸ್ಸಿಗೆ ಕಳಂಕವಾಗದಂತೆ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ. ಎಲ್ಲಾ ಉದ್ಯೋಗಿಗಳು ಈ ನಿಯಮಾವಳಿಗಳನ್ನು ಅನುಸರಿಸಲು ಬದ್ಧರಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಸಭೆಗಳಲ್ಲಿ ಅಥವಾ ಹಿರಿಯ ಅಧಿಕಾರಿಗಳ ಕೋಣೆಗಳ ಒಳಗೆ ಇರುವಾಗ ಮೊಬೈಲ್ ಫೋನ್‌ಗಳನ್ನು ಸೈಲೆಂಟ್ ಮೋಡ್‌ನಲ್ಲಿಇಟ್ಟಿರಬೇಕು. ಅಂತೆಯೇ, ಇಂಟರ್‌ನೆಟ್‌ ಬ್ರೌಸ್‌ ಮಾಡುವುದು, ಸಂದೇಶಗಳನ್ನು ಪರಿಶೀಲಿಸುವುದು ಮತ್ತು ಇಯರ್‌ಫೋನ್‌ಗಳ ಬಳಕೆಯನ್ನು ಇಂತಹ ಸಂದರ್ಭಗಳಲ್ಲಿ ತಪ್ಪಿಸಬೇಕು ಎಂದು ಸರ್ಕಾರ ಸಲಹೆ ನೀಡಿದೆ.


ಇದನ್ನೂ ಓದಿ: ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...