Homeಮುಖಪುಟಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ಮೊಟ್ಟೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ರಹಸ್ಯ ಕಾರ್ಯಚರಣೆಯ ವಿಡಿಯೋ ಬಿಡುಗಡೆಯಾಗಿದೆ.

ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿದೆ.

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ಅಧಿಕೃತ ಮುಂದೆ ಜಮಾಯಿಸಿದ NSUI ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಭ್ರಷ್ಟಾಚಾರ ನಡೆಸಿರುವ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಒಂದೆಡೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ
ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು. ಲಂಚದ ಹಣಕ್ಕೆ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ನ್ಯೂಸ್‌ಫಸ್ಟ್ ನನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ” ಎಂದಿದ್ದಾರೆ.

ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ: ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಪಿತೂರಿಯಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ; ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...