Homeಮುಖಪುಟಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ಮೊಟ್ಟೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ರಹಸ್ಯ ಕಾರ್ಯಚರಣೆಯ ವಿಡಿಯೋ ಬಿಡುಗಡೆಯಾಗಿದೆ.

ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿದೆ.

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ಅಧಿಕೃತ ಮುಂದೆ ಜಮಾಯಿಸಿದ NSUI ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಭ್ರಷ್ಟಾಚಾರ ನಡೆಸಿರುವ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಒಂದೆಡೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ
ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು. ಲಂಚದ ಹಣಕ್ಕೆ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ನ್ಯೂಸ್‌ಫಸ್ಟ್ ನನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ” ಎಂದಿದ್ದಾರೆ.

ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ: ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಪಿತೂರಿಯಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ; ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...