Homeಮುಖಪುಟಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

- Advertisement -
- Advertisement -

ಥಾಲಸ್ಸೆಮಿಯಾ (Thalassemia) ರೋಗಕ್ಕೆ ಒಳಗಾಗಿದ್ದ ತನ್ನ ಮಗನಿಗೆ ರಕ್ತ ವರ್ಗಾವಣೆಯ ವ್ಯವಸ್ಥೆ ಮಾಡಲು ತಂದೆಯೊಬ್ಬರು ಪ್ರತಿ ತಿಂಗಳು ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ಘಟನೆ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್‌ನ ಕೂಲಿ ಕೆಲಸಗಾರ ದಿಲೀಪ್‌ ಯಾದವ್‌, ತನ್ನ ಐದೂವರೆ ವರ್ಷದ ಮಗ ವಿವೇಕ್‌ಗೆ ರಕ್ತ ವರ್ಗಾವಣೆಯ ವ್ಯವಸ್ಥೆ ಮಾಡಲು ಅವರು ಬೈಸಿಕಲ್‌ನಲ್ಲಿ ಪ್ರತಿ ತಿಂಗಳು 400 ಕಿ.ಮೀ ಪ್ರಯಾಣ ಮಾಡುತ್ತಿದ್ದರು. ಅವರ ಕಷ್ಟವನ್ನು ಗಮನಿಸಿದ್ದ ಬೆಂಗಳೂರು ಮೂಲದ ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್‌, ಬೆಂಗಳೂರಿನ ಆಸ್ಟರ್‌ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ.

ಥಾಲಸ್ಸೆಮಿಯಾ (Thalassemia) ಅನುವಂಶಿಕವಾಗಿ ರಕ್ತದ ಕಾಯಿಲೆಯಾಗಿದ್ದು, ಈ ರೊಗದಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಅಗತ್ಯಕ್ಕಿಂತ ಕಡಿಮೆಯಾಗುತ್ತಿರುತ್ತದೆ. ಐದೂವರೆ ವರ್ಷದ ಬಾಲಕ ವಿವೇಕ್‌ಗೆ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಆಸ್ಪತ್ರೆಗೆ ತೆರಳಲು ಲಾಕ್‌ಡೌನ್ ನಡುವೆ ಪ್ರತಿ ತಿಂಗಳು ಬೈಸಿಕಲ್‌ನಲ್ಲಿ 400 ಕಿ.ಮೀ ಪ್ರಯಾಣಿಸುತ್ತಿದ್ದ ದಿಲೀಪ್‌ ಯಾದವ್‌ ಅವರ  ಕಷ್ಟದ ಬಗ್ಗೆ ಪತ್ರಿಕಾ ವರದಿಗಳಿಂದ ತಿಳಿದ, ಮಿಲಾಪ್‌ ಸಂಸ್ಥೆ ಸಂಸ್ಥಾಪಕ-ನಿರ್ದೇಶಕ ಸಂಜಯ್ ಪಾಂಡೆ ಅವರು ಯಾದವ್ ಅವರನ್ನು ಭೇಟಿಯಾಗಲು ಅವರ ಊರು ಗೊಡ್ಡಾಗೆ ಪ್ರಯಾಣಿಸಿದ್ದರು.

ದಿಲೀಪ್‌ ಯಾದವ್‌ ಅವರನ್ನು ಭೇಟಿ ಮಾಡಿದ ಸಂಜಯ್‌ ಪಾಂಡೆ ಅವರು, “ಯಾದವ್ ಅವರ ಮಗನಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸಲು ಸಹಾಯ ಮಾಡಬೇಕು ಎಂದು ನಾವು ನಿರ್ಧರಿಸಿದ್ದೇವೆ. ಯಾದವ್ ಅವರ ಮಗನ ವೈದ್ಯಕೀಯ ಪರೀಕ್ಷೆಯ ನಂತರ, ಆತನ ಅಸ್ಥಿಮಜ್ಜೆಯ ಕಸಿಗೆ ಒಟ್ಟು 18 ರಿಂದ 20 ಲಕ್ಷ ರೂ. ವೆಚ್ಚವಾಗಲಿದೆ ಎಂದು ತಿಳಿದುಬಂದಿದೆ. ಅದನ್ನು ಮಿಲಾಪ್ ಸಂಸ್ಥೆ ಸಂಪೂರ್ಣವಾಗಿ ಭರಿಸಲಿದೆ” ಎಂದು ಹೇಳಿದ್ದಾರೆ.

ಮಗನ ಚಿಕಿತ್ಸೆಗಾಗಿ ಕಷ್ಟ ಪಡುತ್ತಿದ್ದ ದಿಲೀಪ್ ಯಾದವ್ ಅವರ ಕುಟುಂಬದ ನಾಲ್ಕು ಮಕ್ಕಳು ಸೇರಿದಂತೆ ಆರು ಸದಸ್ಯರಿಗೂ ವಿಮಾನ ಟಿಕೆಟ್‌ಗಳನ್ನು ಕಳುಹಿಸಲಾಗಿದೆ. ಇದರಿಂದ ಅವರು ಬೆಂಗಳೂರಿಗೆ ಬರಲು ಅನುಕೂಲವಾಗಿದೆ ಎಂದು ಮಿಲಾಪ್‌ ಸಂಸ್ಥೆ ಸಂಸ್ಥಾಪಕ-ನಿರ್ದೇಶಕ ಸಂಜಯ್ ಪಾಂಡೆ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...