Homeಕರ್ನಾಟಕಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

ಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಳೆದೆಡು ದಿನಗಳ ಹಿಂದೆ ಸೂಚನೆ ನೀಡಿದ್ದರು. ಈಗ ರಾಜೀನಾಮೆ ನೀಡಬಾರದು ಎಂಬ ಒತ್ತಡ ಹಾಕಲು ಮತ್ತು ಯಡಿಯೂರಪ್ಪ  ಅವರನ್ನು ಬೆಂಬಲಿಸಿ ರಾಜ್ಯದ 500ಕ್ಕೂ ಹೆಚ್ಚು ಮಠಾಧೀಶರು ಸಮಾವೇಶ ನಡೆಸುತ್ತಿದ್ದಾರೆ.

ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಠಾಧೀಶರ ಮಹಾ ಸಮಾವೇಶ ನಡೆಯುತ್ತಿದ್ದು, 500ಕ್ಕೂ ಹೆಚ್ಚು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮತ್ತು ತಿಪಟೂರಿನ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ಸೇರಿದಂತೆ 500ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ.

ಯಡಿಯೂರಪ್ಪ ಅಧಿಕಾರ ಕಳೆದುಕೊಂಡರೆ ಬಿಜೆಪಿಗೆ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಂಬಲವೂ ದೊರೆಯುವುದಿಲ್ಲ ಎಂಬ ಸಂದೇಶ ನೀಡಲು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳು ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನ ಕೈಗೊಳ್ಳದಂತೆ ಬಿಜೆಪಿ ಹೈಕಮಾಂಡ್‌ ಮೇಲೆ ಒತ್ತಡ ತರುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಈ ಹಿಂದೆಯು  ಮುಖ್ಯಮಂತ್ರಿ ನಿವಾಸಕ್ಕೆ ಮಠಾಧೀಶರು ತೆರಳಿ ತಮ್ಮ ಬೆಂಬಲ ಸೂಚಿಸಿದ್ದರು.

ಜುಲೈ 22 ರಂದು ಮಾತನಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, “75 ವರ್ಷ ದಾಟಿದವರಿಗೆ ಈವರೆಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ಕೊಟ್ಟಿಲ್ಲ. ಆದರೆ ನನಗೆ ಕೊಟ್ಟಿದ್ದಾರೆ. ಇದೀಗ ರಾಷ್ಟ್ರೀಯ ನಾಯಕರು ಯಾವ ಕೆಲಸ ಕೊಡುತ್ತಾರೋ ನಾನು ಆ ಕೆಲಸ ನಡೆಸಿಕೊಂಡು ಹೋಗುತ್ತೇನೆ. ಹೈಕಮಾಂಡ್ ಹೇಳಿದಂತೆ ನಡೆದುಕೊಂಡು ಹೋಗುತ್ತೇನೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ನನ್ನ ತೀರ್ಮಾನ. ಜುಲೈ 25 ಕ್ಕೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಅವರ ಸೂಚನೆಯಂತೆ ನಡೆದುಕೊಳ್ಳುತ್ತೇನೆ” ಎಂದಿದ್ದರು.

ಭಾನುವಾರ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಯಡಿಯೂರಪ್ಪ ಅವರು ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಸಂಜೆ ಬೆಂಗಳೂರಿಗೆ ಬರಲಿದ್ದಾರೆ. “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...