Homeಕರ್ನಾಟಕಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

ಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಳೆದೆಡು ದಿನಗಳ ಹಿಂದೆ ಸೂಚನೆ ನೀಡಿದ್ದರು. ಈಗ ರಾಜೀನಾಮೆ ನೀಡಬಾರದು ಎಂಬ ಒತ್ತಡ ಹಾಕಲು ಮತ್ತು ಯಡಿಯೂರಪ್ಪ  ಅವರನ್ನು ಬೆಂಬಲಿಸಿ ರಾಜ್ಯದ 500ಕ್ಕೂ ಹೆಚ್ಚು ಮಠಾಧೀಶರು ಸಮಾವೇಶ ನಡೆಸುತ್ತಿದ್ದಾರೆ.

ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಠಾಧೀಶರ ಮಹಾ ಸಮಾವೇಶ ನಡೆಯುತ್ತಿದ್ದು, 500ಕ್ಕೂ ಹೆಚ್ಚು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮತ್ತು ತಿಪಟೂರಿನ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ಸೇರಿದಂತೆ 500ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ.

ಯಡಿಯೂರಪ್ಪ ಅಧಿಕಾರ ಕಳೆದುಕೊಂಡರೆ ಬಿಜೆಪಿಗೆ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಂಬಲವೂ ದೊರೆಯುವುದಿಲ್ಲ ಎಂಬ ಸಂದೇಶ ನೀಡಲು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳು ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನ ಕೈಗೊಳ್ಳದಂತೆ ಬಿಜೆಪಿ ಹೈಕಮಾಂಡ್‌ ಮೇಲೆ ಒತ್ತಡ ತರುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಈ ಹಿಂದೆಯು  ಮುಖ್ಯಮಂತ್ರಿ ನಿವಾಸಕ್ಕೆ ಮಠಾಧೀಶರು ತೆರಳಿ ತಮ್ಮ ಬೆಂಬಲ ಸೂಚಿಸಿದ್ದರು.

ಜುಲೈ 22 ರಂದು ಮಾತನಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, “75 ವರ್ಷ ದಾಟಿದವರಿಗೆ ಈವರೆಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ಕೊಟ್ಟಿಲ್ಲ. ಆದರೆ ನನಗೆ ಕೊಟ್ಟಿದ್ದಾರೆ. ಇದೀಗ ರಾಷ್ಟ್ರೀಯ ನಾಯಕರು ಯಾವ ಕೆಲಸ ಕೊಡುತ್ತಾರೋ ನಾನು ಆ ಕೆಲಸ ನಡೆಸಿಕೊಂಡು ಹೋಗುತ್ತೇನೆ. ಹೈಕಮಾಂಡ್ ಹೇಳಿದಂತೆ ನಡೆದುಕೊಂಡು ಹೋಗುತ್ತೇನೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ನನ್ನ ತೀರ್ಮಾನ. ಜುಲೈ 25 ಕ್ಕೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಅವರ ಸೂಚನೆಯಂತೆ ನಡೆದುಕೊಳ್ಳುತ್ತೇನೆ” ಎಂದಿದ್ದರು.

ಭಾನುವಾರ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಯಡಿಯೂರಪ್ಪ ಅವರು ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಸಂಜೆ ಬೆಂಗಳೂರಿಗೆ ಬರಲಿದ್ದಾರೆ. “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...