Homeಮುಖಪುಟಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

- Advertisement -
- Advertisement -

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ. “ಕರ್ನಾಟಕದಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ರಾಜ್ಯದಲ್ಲಿ ಯಾವುದೆ ರಾಜಕೀಯ ಬಿಕ್ಕಟ್ಟು ಇಲ್ಲ” ಎಂದು ಅವರು ಭಾನುವಾರ ತಿಳಿಸಿದ್ದಾರೆ.

ಗೋವಾದ ಪಣಜಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘‘ಯಡಿಯೂರಪ್ಪ ಅವರು ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ಕರ್ನಾಟಕವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರು ತಮ್ಮದೇ ಆದ ರೀತಿಯಲ್ಲಿ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಹಾಗೆಂದು ನಿಮಗೆ ಅನಿಸುತ್ತಿದೆ. ಆದರೆ ನಮಗೆ ಹಾಗೆ ಅನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

ಇಂದು ಸಂಜೆ ವೇಳೆಗೆ ಸಿಎಂ ಬದಲಾವಣೆಯ ಕುರಿತ ಸಂದೇಶ ಪಕ್ಷದ ಹೈಕಮಾಂಡ್‌ನಿಂದ ಬರಲಿದೆ ಎಂದು ಯಡಿಯೂರಪ್ಪ ಭಾನುವಾರ ಬೆಳಿಗ್ಗೆ ಬೆಳಗಾವಿಯಲ್ಲಿ ಹೇಳಿದ್ದರು. ಅವರು, “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದರು. ಇದಾದ ಕೆಲ ಗಂಟೆಗಳಲ್ಲಿಯೇ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರತಿಕ್ರಿಯಿಸಿದ್ದು, ಭಾರಿ ಮಹತ್ವ ಪಡೆದುಕೊಂಡಿದೆ.

ಯಡಿಯೂರಪ್ಪ ಅವರ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೆರೆಡು ದಿನಗಳಲ್ಲಿ ಎರಡು ವರ್ಷಗಳಾಗಿದೆ. ಹಿಂದಿನಿಂದಲೂ ಅವರ ನಾಯಕತ್ವದ ಬಗ್ಗೆ ಬಿಜೆಪಿಯೊಳಗೆ ಅಸಮಾಧಾನಗಳು ಇದ್ದವು. ಇದನ್ನು ಪಕ್ಷದ ನಾಯಕರೆ ಬಹಿರಂಗವಾಗಿ ಹೇಳಿದ್ದರು. ಈ ಹಿಂದೆ ಕೂಡಾ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಸರಣಿ ಸಭೆಗಳನ್ನು ನಡೆಸಿ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಿದ್ದರು. ಆದರೆ ಅದರ ನಂತರ ಕೂಡಾ ಪಕ್ಷದೊಳಗಿನ ಕಚ್ಚಾಟಗಳು ನಿಂತಿರಲಿಲ್ಲ.

ಇದನ್ನೂ ಓದಿ: ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಸರಣಿ ಸಭೆಯನ್ನು ನಡೆಸಿದ್ದರು. ಆದರೆ ಸಭೆಯ ನಂತರ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದಾಗ್ಯೂ, ಅಲ್ಲಿ ಅವರು ರಾಜೀನಾಮೆಯ ಸುದ್ದಿಯನ್ನು ಅಲ್ಲಗೆಳೆದಿದ್ದರು. ಆದರೆ ಗುರವಾರದಂದು ಮತ್ತೇ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದ ಯಡಿಯೂರಪ್ಪ, ಹೈಕಮಾಂಡ್‌ನಿಂದ ಸಂದೇಶವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಅದಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು.

ಈ ಮಧ್ಯೆ ಸೋಮವಾರದಂದು ತಮ್ಮ ಸರ್ಕಾರದ ಎರಡು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಯನ್ನು ಯಡಿಯೂರಪ್ಪ ನಡೆಸಲಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡುವ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ನಾಯಕತ್ವದ ಬದಲಾವಣೆಯ ಬಗ್ಗೆ ಕೇಂದ್ರ ನಾಯಕರು ಉತ್ಸುಕರಾಗಿದ್ದರೂ, ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೆ ಪ್ರವಾಹದಿಂದ ಸಾವಿರಾರು ಜನರು ಕಷ್ಟ ಪಡುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಅಪಾಯ ತಂದೊಡ್ಡಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ವಿಡಿಯೊ ನೋಡಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದ ಕೇಂದ್ರ ಸರ್ಕಾರ.. ಹಾಗಾದರೆ ಇವು ಏನು??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...