Homeಮುಖಪುಟಮಹಾರಾಷ್ಟ್ರ ಭೂಕುಸಿತ: ಸಾವಿನ ಸಂಖ್ಯೆ 112 ಏರಿಕೆ, 47 ಜನರು ಇನ್ನೂ ಕಾಣೆ

ಮಹಾರಾಷ್ಟ್ರ ಭೂಕುಸಿತ: ಸಾವಿನ ಸಂಖ್ಯೆ 112 ಏರಿಕೆ, 47 ಜನರು ಇನ್ನೂ ಕಾಣೆ

- Advertisement -
- Advertisement -

ಮಹಾರಾಷ್ಟ್ರ ದ ಕರಾವಳಿ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದ ಪರಿಣಾಮ ಮತ್ತೆ ಎಪ್ಪತ್ತಮೂರು ಶವಗಳನ್ನು ಪತ್ತೆಹಚ್ಚಲಾಗಿದೆ, ಇನ್ನೂ 47 ಜನರು ಕಾಣೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಭಾನುವಾರ ಸ್ಪಷ್ಟಪಡಿಸಿದೆ.

ಫೆಡರಲ್ ಪಡೆಗಳ ಮಹಾನಿರ್ದೇಶಕ (ಡಿಜಿ) ಎಸ್.ಎನ್. ಪ್ರಧಾನ್ ಅವರು ಭಾನುವಾರ ಮಧ್ಯಾಹ್ನ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಲ್ಲಿ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅವರ ಮಾಹಿತಿಯ ಪ್ರಕಾರ, ರಾಯಗಡ್‌‌ ಜಿಲ್ಲೆಯ ಮಹಾಡ್, ತಹಸಿಲ್, ತಾಲಿಯೆ ಪ್ರದೇಶಗಳಲ್ಲಿ ಅತೀ ಹೆಚ್ಚು ಜೀವ ಹಾನಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ 36 ಜನರು ಸಾವು

ಮಹಾಡ್, ತಹಸಿಲ್, ತಾಲಿಯೆ ಪ್ರದೇಶಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಲವತ್ತನಾಲ್ಕು ಶವಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೂ 26 ಜನರು ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಭಾರಿ ಮಳೆಯಿಂದಾಗಿ ಈ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ರಕ್ಷಣಾ ಪಡೆಗಳ 34 ತಂಡಗಳನ್ನು ಪರಿಹಾರ ಕಾರ್ಯ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಈ ತಂಡಗಳು ಪ್ರಸ್ತುತ ರಾಯಗಡ್‌ನ ಭೂಕುಸಿತ ಪೀಡಿತ ತಾಲಿಯೆ, ರತ್ನಗಿರಿಯ ಪೊರೇಸ್ ಮತ್ತು ಸತಾರಾ ಜಿಲ್ಲೆಯ ಮಿರ್‌‌ಗಾಂವ್‌‌, ಅಂಬೇಘರ್ ಮತ್ತು ಧೋಕವಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಕರಾವಳಿ ಜಿಲ್ಲೆಯಾದ ರಾಯಗಡ್ ಜಿಲ್ಲೆಯ 52 ಸೇರಿದಂತೆ ಪುಣೆ ಮತ್ತು ಕೊಂಕಣ ಪ್ರದೇಶಗಳಲ್ಲಿ ಮಳೆ ಮತ್ತು ಭೂಕುಸಿತದಿಂದಾಗಿ ಉಂಟಾದ ಸಾವಿನ ಸಂಖ್ಯೆ 112 ಕ್ಕೆ ಏರಿದೆ. ಸಾಂಗ್ಲಿಯಲ್ಲಿ 78,111, ಕೊಲ್ಹಾಪುರದಲ್ಲಿ 40,882 ಸೇರಿದಂತೆ, ಇದುವರೆಗೂ 1,35,313 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...