Homeಕರ್ನಾಟಕ‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

ಸಚಿವೆ ಶಶಿಕಲಾ ಜೊಲ್ಲೆ ವಿರುದ್ದದ ಆಕ್ರೋಶ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಶುಕ್ರವಾರ ಆರೋಪಿಸಿತ್ತು. ಇದನ್ನು ವಿರೋಧಿಸಿ ಭಾನುವಾರ(ಇಂದು) ಟ್ವಿಟರ್‌ನಲ್ಲಿ ‘#ನುಂಗಬೇಡಿಮಕ್ಕಳಮೊಟ್ಟೆ’ ಎಂಬ ಹ್ಯಾಶ್‌ಟ್ಯಾಗ್‌ ಚಳುವಳಿ ನಡೆಯುತ್ತಿದ್ದು, ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ, “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌‌ನಲ್ಲಿ ಹ್ಯಾಶ್‌ಟ್ಯಾಗ್ ಚಳುವಳಿ ನಡೆಯುತ್ತಿದ್ದು, ಖ್ಯಾತ ನಟ ಚೇತನ್ ಅಹಿಂಸಾ ಸೇರಿದಂತೆ ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಚೇತನ್‌ ಅವರು, “ಮಕ್ಕಳ ಮೂಲಭೂತ ಆಹಾರ ಮತ್ತು ಪೋಷಣೆಯನ್ನು ಕಸಿದುಕೊಳ್ಳುವ ಭ್ರಷ್ಟಾಚಾರವು ಸಹಿಸಲು ಅಸಾಧ್ಯವಾದುದಾಗಿದೆ. ಇದರ ವಿರುದ್ದ ಸಂಪೂರ್ಣ ತನಿಖೆ ನಡೆದು, ಅವರನ್ನು ಕಡ್ಡಾಯವಾಗಿ ಶಿಕ್ಷಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ!

ಕಾಂಗ್ರಸ್ ಸದಸ್ಯೆ, ಲಾವಣ್ಯ ಬಲ್ಲಾಲ್ ಅವರು, “ಮಾಧ್ಯಮವೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಶಶಿಕಲಾ ಜೊಲ್ಲೆ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಬೇಕಾಗಿದೆ” ಎಂದು ಆಗ್ರಹಿಸಿದ್ದಾರೆ.

ಶರತ್‌ ಬೀರಂಬಳ್ಳಿ ಅವರು, “ಅಪೌಷ್ಟಿಕತೆ ‌ತಪ್ಪಿಸಲು ನಾನಾ ಯೋಜನೆಗಳು. ಗರ್ಭಿಣಿಯರಿಗೆ ಮಾತೃಪೂರ್ಣ, ಶಿಶು ವಿಹಾರದಿಂದ ಬಾಣಂತಿ ಕಿಟ್, ನಂತರ ಶಾಲೆಗಳಲ್ಲಿ ‌ಮೊಟ್ಟೆ, ಹಾಲು ಬಿಸಿಯೂಟ. ಇದು ಕೇವಲ ಯೋಜನೆಗಳಲ್ಲ ಮಕ್ಕಳ‌ ಆರೋಗ್ಯ, ಭವಿಷ್ಯ. ಇದರ ಮೇಲು ಹಗರಣ ಅಂದ್ರೆ ಅಸಹ್ಯ ಅನ್ನಿಸುವಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್ ಅವರು, “ರಾಷ್ಟ್ರೀಯ ಪಕ್ಷದಲ್ಲಿ ದೆಹಲಿಯ ಹೈಕಮಾಂಡ್‌ನ ಅನುಮತಿಯಿಲ್ಲದೆ ಒಂದು ಹುಲ್ಲು ಕೂಡ ಅಲುಗಾಡೊಲ್ಲಾ. ಹಾಗಿರುವಾಗ ಮೊಟ್ಟೆಯ ವಿಚಾರದಲ್ಲಿ ಕೇಳಿಬರುತ್ತಿರೋ ಭ್ರಷ್ಟಾಚಾರದಲ್ಲಿ ದೆಹಲಿಯ ಹೈಕಮಾಂಡ್ ಪಾಲೆಷ್ಟು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಪ್ರೊಫಸರ್‌ ಎಂಬ ಟ್ವಿಟರ್‌ ಖಾತೆ, “ಆ ಕಡೆಯಿಂದ ಅಕ್ಕಿ ಕದಿಯೋದು. ಈ ಕಡೆ ಮೊಟ್ಟೆ ಕದಿಯೋದು. ಇದೊಂತರ ಎಗ್‌ರೈಸ್‌ ಸರ್ಕಾರ!!” ಎಂದು ಹೇಳಿದ್ದಾರೆ.

ಸ್ಯಾಮುಯೆಲ್‌ ಶೈನ್ ಎಂಬವರು, “ಏನ್ರೀ ಜೊಲ್ಲೆ, ಮೊಟ್ಟೆ ಕಾಸಲ್ಲಿ ಭಲ್ಲೆ ಭಲ್ಲೆ? #ನುಂಗಬೇಡಿಮಕ್ಕಳಮೊಟ್ಟೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಇದನ್ನೂ ಓದಿ: ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...