Homeಕರ್ನಾಟಕಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತ್ತಿದ್ದ ಜಯಂತಿಯವರು, ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್‌ ನಟಿ ಎಂದು ಗುರುತಿಸಿಕೊಂಡಿದ್ದರು.

ನಟಿ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿಯೂ ಅಭಿನಯಿಸಿದ್ದರು. ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಅಭಿನಯ ಶಾರದೆ ಭಾಜನರಾಗಿದ್ದರು.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರೊಂದಿಗೆ 45 ಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ನಟಿ ಜಯಂತಿಯವರದ್ದು. ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ತೆರೆ ಹಂಚಿಕೊಂಡಿದ್ದರು.

1968 ರಲ್ಲಿ ತೆರೆ ಕಂಡ ವೈ.ಆರ್.ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಜಟಿ ಜಯಂತಿ, 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಕರ್ನಾಟಕದ ಬಳ್ಳಾರಿಯಲ್ಲಿ ಜನವರಿ 6, 1945 ರಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

1965ರಲ್ಲಿ ತೆರೆಕಂಡ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ಜಯಂತಿಯವರಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಚಿತ್ರಕ್ಕೆ ನಿರ್ಮಾಪಕಿಯೂ ನಿರ್ದೇಶಕಿಯೂ ಜಯಂತಿ. ಎರಡು ಮುಖ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತು, ಮಸಣದ ಹೂವು, ಆನಂದ್ ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ವಿಶಿಷ್ಟ ಅಭಿನಯ ನೀಡಿದ್ದಾರೆ. ಕಸ್ತೂರಿ ನಿವಾಸ, ಬ್ಯಾಂಕರ್ ಮಾರ್ಗಯ್ಯ, ಬೆಟ್ಟದ ಹುಲಿ, ಚೂರಿ ಚಿಕ್ಕಣ್ಣ, ಭಲೇ ಬಸವ, ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದರು.

ವಿಷ್ಣು ಮಾಯ, ಕಲೆಕ್ಟರ್ ಜಾನಕಿ, ಮಾಯದಾರಿ ಮಲ್ಲಿಗಾಡು, ಸಂಸಾರಂ ಸಾಗರಂ, ಕುಲಗೌರವಂ, ಮಾಂಗಲ್ಯ ಭಾಗ್ಯಂ, ಶ್ರೀರಾಮಾಂಜನೇಯ ಯುದ್ಧಂ,ಅಂದರೂ ಮಂಚಿವಾರೆ, ಬೊಮ್ಮರಿಲ್ಲು, ಭಲೇ ಕೊಡಲ್ಲು ಸೇರಿದಂತೆ ಅನೇಕ ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರರಂಗದಲ್ಲಿಯೂ ನಟಿ ಜಯಂತಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ಗಂಗಾ ಗೌರಿ, ಎಲ್ಲೋರುಮ್ ನಲ್ಲವರೆ, ನಿಲ್ ಗವನಿ ಕಾದಲೈ, ಎದಿರ್ ನೀಚಲ್, ನೀರ್ ಕುಮಿಳಿ, ಕಾದಲ್ ಪಾಡುತುಮ್ ಪಾಡು, ಪೆಣ್ಣೈ ನಂಬುಂಗಳ್, ದೇವತೈ ಸೇರಿ ಹಲವು ಚಿತ್ರಗಳಲ್ಲಿ ಕಾಣಸಿಕೊಂಡಿದ್ದರು.

ಮಲೆಯಾಳಂನ ಕಲಿಯೋದಂ, ಕಾರುತ ಪೌರ್ಣಮಿ, ಕಾಟ್ಟು ಪೂಕ್ಕಳ್, ಲಕ್ಷಪ್ರಭು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿಯ ದಾದಾ, ತೀನ್ ಬಹುರಾಣಿಯಾ, ಆಜ್ ಕೆ ಶೋಲಿ, ಮೆಹರ್ಬಾನ್, ಲಾಲ್ ಬಂಗ್ಲಾ, ತುಮ್ ಸೆ ಅಚ್ಚಾ ಕೌನ್ ಹೈ, ಗುಂಡಾ, ಏಕ್ ಫೂಲ್ ಏಕ್ ಭೂಲ್ ಚಿತ್ರಗಳಲ್ಲಿಯೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು ನಟಿ ಜಯಂತಿಯವರು.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...