Homeಮುಖಪುಟಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

ಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

- Advertisement -
- Advertisement -

ಜಾರ್ಖಂಡ್‌ ಸಮ್ಮಿಶ್ರ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಮೂರು ಜನರನ್ನು ಶನಿವಾರ ಬಂಧಿಸಲಾಗಿತ್ತು. ಇದಾಗಿ ಒಂದು ದಿನದ ನಂತರ ಭಾನುವಾರದಂದು, ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕೆಲವು ಅಪರಿಚಿತ ವ್ಯಕ್ತಿಗಳು ಅನೇಕ ಬಾರಿ ತಮ್ಮನ್ನು ಸಂಪರ್ಕಿಸಿದ್ದು 1 ಕೋಟಿ ರೂ. ಮತ್ತು ಮಂತ್ರಿ ಪದವಿಯನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಆರೋಪಿಸಿದ್ದಾರೆ.

ದೇಶದ ಹಲವು ರಾಜ್ಯದಗಳಲ್ಲಿ ಆಪರೇಷನ್ ಕಮಲ ಮಾಡಿ ಅಧಿಕಾರ ಹಿಡಿದಿರುವ ಬಿಜೆಪಿಯ ಮುಂದಿನ ಗುರಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವಿರುವ ಜಾರ್ಖಂಡ್‌ ಆಗಿದೆಯೆ ಎಂದು ಸಂಶಯ ಮೂಡತೊಡಗಿದೆ. 81 ಸದಸ್ಯ ಬಲವಿರುವ ರಾಜ್ಯದಲ್ಲಿ ಆಡಳಿತರೂಢ ಜೆಎಂಎಂಗೆ 30 ಸ್ಥಾನಗಳಿದ್ದರೆ, ಕಾಂಗ್ರೆಸ್‌ಗೆ 18 ಮತ್ತು ಆಜೆಡಿಗೆ 1 ಸ್ಥಾನವಿದೆ. ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದು, ಇತರೆ ಪಕ್ಷಗಳು ಏಳು ಸ್ಥಾನಗಳನ್ನು ಹೊಂದಿದೆ.

“ಮೂವರು ವ್ಯಕ್ತಿಗಳು ಕನಿಷ್ಠ ಆರು ಬಾರಿ ನನ್ನನ್ನು ಸಂಪರ್ಕಿಸಿದ್ದಾರೆ” ಎಂದು ಜಾರ್ಖಂಡ್‌ ನ ಕೋಲೆಬೀರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಮನ್ ಬಿಕ್ಸಲ್ ಕೊಂಗಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

“ನನ್ನ ಪಕ್ಷದ ಕಾರ್ಯಕರ್ತರ ಮೂಲಕ ಮೂರು ಜನರು ನನ್ನನ್ನು ಸಂಪರ್ಕಿಸಿದ್ದರು, ಅವರು ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಅವರನ್ನು ನನ್ನನ್ನು ಸಂಪರ್ಕಿಸಬೇಡಿ ಎಂದು ಕೇಳಿದರೂ, ಅವರು ಮತ್ತೇ ಸಂಪರ್ಕಿಸಿದ್ದರು. ಒಮ್ಮೆ, ಅವರು ನನಗೆ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ನೀಡುವುದಾಗಿ ಹೇಳಿದ್ದಾರೆ. ನಾನು ತಕ್ಷಣ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ನಾಯಕ ಆಲಮ್‌ಗೀರ್ ಆಲಂ ಮತ್ತು ಕಾಂಗ್ರೆಸ್ ಜಾರ್ಖಂಡ್ ಉಸ್ತುವಾರಿ ಆರ್.ಪಿ.ಎನ್. ಸಿಂಗ್ ಅವರಿಗೆ ಮಾಹಿತಿ ನೀಡಿದ್ದೇನೆ. ನಾನು ಈ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಶಾಸಕ ಹೇಳಿದ್ದಾರೆ.

ಆದರೆ ಈ ಬಗ್ಗೆ ಪತ್ರಿಕೆಗಳೊಂದಿಗೆ ಚರ್ಚಿಸಲು ಸಾಧ್ಯವಿಲ್ಲ ಎಂದು, ಆರ್.ಪಿ.ಎನ್. ಸಿಂಗ್ ಅವರು ಹೇಳಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಈ ವಿಷಯದ ಬಗ್ಗೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂ‌ತ್‌ ಸೊರೆನ್ ಕೂಡಾ ಮೌನ ತಾಳಿದ್ದಾರೆ.

ನಮನ್ ಬಿಕ್ಸಲ್ ಕೊಂಗಾರಿ, “ಹಣದ ಹೊರತಾಗಿ, ಮಂತ್ರಿ ಸ್ಥಾನವನ್ನು ನೀಡುವುದಾಗಿ ಅವರು ನನ್ನನ್ನು ಸಂಪರ್ಕಿಸಿದ್ದರು. ಅವರು ಬಿಜೆಪಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಅವರು ನನಗೆ ಹೇಳಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರು ಯಾರೂ ನನ್ನನ್ನು ಸಂಪರ್ಕಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಶನಿವಾರ ಬಂಧನಕ್ಕೊಳಗಾದ ಮೂವರು ವ್ಯಕ್ತಿಗಳು ಅವರೆನಾ ಎಂದು ಖಚಿತಪಡಿಸಲು ಸಾಧ್ಯವಿಲ್ಲ, ಯಾಕೆಂದರೆ ಅವರ ಮುಖಗಳು ನನಗೆ ನೆನಪಿಲ್ಲ ಎಂದು ಶಾಸಕ ಹೇಳಿದ್ದಾರೆ.

ಬರ್ಮೋ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕುಮಾರ್ ಜೈಮಂಗಲ್‌ ನೀಡಿದ ದೂರಿನ ಮೇರೆಗೆ ರಾಂಚಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದಾಗಿ ಎರಡು ದಿನಗಳ ನಂತರ ಅಭಿಷೇಕ್ ದುಬೆ, ಅಮಿತ್ ಸಿಂಗ್ ಮತ್ತು ನಿವಾರನ್ ಪ್ರಸಾದ್ ಮಹತೋ ಅವರನ್ನು ಶನಿವಾರ ಬಂಧಿಸಲಾಯಿತು.

ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 419 (ಕ್ರಿಮಿನಲ್ ಪಿತೂರಿ), 420 (ಮೋಸ), 124 ಎ (ದೇಶದ್ರೋಹ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಆರೋಪಿ ನಿವಾರನ್ ಪ್ರಸಾದ್ ಮಹತೋ ಅವರ ಫೇಸ್‌ಬುಕ್ ಪೇಜ್‌‌ನಲ್ಲಿ ಅವರು ಬಿಜೆಪಿಯ ಧನ್ಬಾದ್ ಸಂಸದ ಪಶುಪತಿ ನಾಥ್ ಮತ್ತು ಕೆಲವು ಸ್ಥಳೀಯ ನಾಯಕರೊಂದಿಗೆ ಇರುವ ಚಿತ್ರಗಳು ಬಹಿರಂಗವಾಗಿದೆ. ನಿವಾರನ್‌ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಹದೇವ್, “ನನಗೆ ತಿಳಿದ ಮಟ್ಟಿಗೆ ಅವರು ಬಿಜೆಪಿ ಸದಸ್ಯರಲ್ಲ” ಎಂದು ಹೇಳಿದ್ದಾರೆ.

ಪ್ರತುಲ್‌ ಶಹದೇವ್ ಪ್ರಕರಣವನ್ನು ಸಿಬಿಐ ನೀಡುವಂತೆ ಒತ್ತಾಯಿಸಿದರೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಾಬುಲಾಲ್ ಮರಂಡಿ ಅವರು ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ ಪೊಲೀಸರು ಈ ಪ್ರಕರಣದ ಕಾರ್ಯವಿಧಾನವನ್ನು ಇಲ್ಲಿಯವರೆಗೆ ವಿವರಿಸಿಲ್ಲ. ಕೇವಲ ಮೂವರು ಆರೋಪಿಗಳು ತಾವು ಸರ್ಕಾರದ ವಿರುದ್ಧದ ಪಿತೂರಿಯಲ್ಲಿ ಭಾಗಿಯಾಗಿದ್ದೇವೆ ಮತ್ತು ಅದನ್ನು ಅಸ್ಥಿರಗೊಳಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ ಎಂಬ ಪತ್ರಿಕಾ ಪ್ರಕಟಣೆಯನ್ನು ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...