Homeಕರ್ನಾಟಕಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

ಹಿಂದಿನ ತಲೆಮಾರು ಮತ್ತು ಹೀಗಿನ ತಲೆಮಾರು ಜಾತಿ ದಬ್ಬಾಳಿಕೆಯ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದು ಚಿತ್ರದ ತಿರುಳು ಎನ್ನುತ್ತಾರೆ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂ..

- Advertisement -
- Advertisement -

ಸಣ್ಣ ರೂಪದಲ್ಲಾದರೂ ನಮ್ಮ ಕತೆಗಳನ್ನು ಜನರಿಗೆ ಮುಟ್ಟಿಸಬೇಕು. ನೆಲದ ವಾಸ್ತವವನ್ನು ಚಿತ್ರಗಳ ಮೂಲಕ ಹೊರ ಜಗತ್ತಿಗೆ ತಲುಪಿಸಬೇಕು ಎಂಬ ಉದ್ದೇಶದೊಂದಿಗೆ ಉತ್ಸಾಹಿ ತಂಡವೊಂದು ಸಂವಿಧಾನದ ಆಶಯಗಳನ್ನಿಟ್ಟುಕೊಂಡು ’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರವನ್ನು ತೆರೆಗೆ ತರಲು ಸಿದ್ಧವಾಗಿದೆ.

ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ ’ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಡಿಮೆ ಬಂಡವಾಳದಲ್ಲಿ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರಕ್ಕೆ ಬಿ.ಸುರೇಶ್ ಅವರು ಅತಿಥಿ ಪಾತ್ರದಲ್ಲಿ ನಟಿಸಿ ಬೆಂಬಲ ನೀಡಿದ್ದಾರೆ.

’ಭಾರತದ ಪ್ರಜೆಗಳಾದ ನಾವು’ ಎಂಬ ಚಿತ್ರದ ಶೀರ್ಷಿಕೆ ಆಕರ್ಷಕವಾಗಿದ್ದು, ಇದನ್ನು ಭಾರತ ಸಂವಿಧಾನದ ಪೀಠಿಕೆಯ ಮೊದಲ ಸಾಲಿನಿಂದ ಆಯ್ದುಕೊಳ್ಳಲಾಗಿದೆ. ಚಿತ್ರದಲ್ಲಿರುವ ಕಲಾವಿದರು ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ಅನೇಕರಿಗೆ ಸಿನಿಮಾ ರಂಗ ಹೊಸದು ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

’ಭಾರತದ ಪ್ರಜೆಗಳಾದ ನಾವು’ ಚಿತ್ರದ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ ಚಮರಂರವರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಇದು ದಲಿತ ದೃಷ್ಟಿಕೋನ ಹೊಂದಿರುವ ಕಥೆ. ಹಿಂದಿನ ತಲೆಮಾರುಗಳು ಜಾತಿ ವ್ಯವಸ್ಥೆ, ದಬ್ಬಾಳಿಕೆಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದರು ಮತ್ತು ಇಂದಿನ ಅಂಬೇಡ್ಕರ್‌ ವಾದವನ್ನು ತಿಳಿದುಕೊಂಡ, ಅರ್ಥ ಮಾಡಿಕೊಂಡ ತಲೆಮಾರು ಜಾತಿ ದೌರ್ಜನ್ಯ, ಅಸಮಾನತೆಗೆ ಹೇಗೆ ಮುಖಾಮುಖಿಯಾಗುತೇ ಎಂಬುದೇ ಚಿತ್ರದ ತಿರುಳು” ಎಂದು ಹೇಳಿದ್ದಾರೆ.

“ಚಿತ್ರಕ್ಕೆ ಈ ಮೊದಲು ಸಂವಿಧಾನ ಎಂಬ ಟೈಟಲ್ ಇಟ್ಟಿದ್ದೆ. ಆದರೆ ಅದು ಸಿಗಲಿಲ್ಲ. ಅದಕ್ಕಿಂತ ಮೊದಲು ಜೈ ಭೀಮ್ ಎಂದು ಹೆಸರಿಟ್ಟಿದ್ದೆ. ಆದರೆ ಎಲ್ಲರೂ ಟೈಟಲ್‌ ಒಂದೇ ಜಾತಿಯನ್ನ ಸೂಚಿಸುತ್ತೆ ಎಂದರು. ಅದಕ್ಕೆ ನಾನು ಸಂವಿಧಾನದ ಮೊದಲ ಸಾಲಿನಿಂದ ಶೀರ್ಷಿಕೆ ಆರಿಸಿಕೊಂಡೆ” ಎಂದು ತಾವು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡ ಬಗೆ ತಿಳಿಸಿದ್ದಾರೆ.

“ಸಂವಿಧಾನದ ಪೀಠಿಕೆಯಂತೆ ಭಾರತ ಪ್ರಜೆಗಳಾದ ನಾವು, ಸ್ವಾತಂತ್ರ, ಭ್ರಾತೃತ್ವ, ಸಮಾನತೆಯಿಂದ ಇರುತ್ತೇವೆ ಎಂದು ಶಪಥ ಮಾಡುತ್ತೇವೆ. ಆದರೆ, ವಾಸ್ತವದ ಬದುಕು ಬೇರೆ ಇದೆ. ಇದೆ ಎಳೆಯನ್ನು ಚಿತ್ರದಲ್ಲೂ ಇಟ್ಟುಕೊಂಡಿದ್ದೇವೆ. ಇಂದಿಗೂ ದಲಿತರನ್ನು ಭಾರತದ ಪ್ರಜೆಗಳು ಎಂದು, ನಾವೆಲ್ಲಾ ಒಂದೇ ಎಂದು ಒಪ್ಪಿಕೊಂಡಿಲ್ಲ. ದಲಿತರನ್ನು ಊರಿನಿಂದ ಹೊರಗೆ ಇಟ್ಟಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

“ಒಂದು ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಚಿತ್ರವನ್ನು ಹೆಣೆಯಲಾಗಿದೆ. ಎಲ್ಲೂ ಹಿಂಸೆಗೆ ಪ್ರಚೋದನೆ ಮಾಡದೇ, ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಹೋರಾಡುವುದು ಹೇಗೆ? ಕಾನೂನು ಅರಿವು ಇರುವ ದಲಿತ ಯುವಕರು ಹೇಗೆ ತಮ್ಮ ಹಳ್ಳಿಯಲ್ಲಿ ಸಂವಿಧಾನದ ಆಶಯಗಳನ್ನು ತರುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೇಲ್ವರ್ಗದ ಒಂದು ಆದರ್ಶದ ಪಾತ್ರವನ್ನು ಚಿತ್ರದಲ್ಲಿ ತರಲಾಗಿದೆ. ಅಂತರ್ ಜಾತಿ ಪ್ರೇಮ ಕಥೆಯು ಸಿನಿಮಾದಲ್ಲಿ ಇದೆ” ಎಂದು ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.

ಇನ್ನು ಬೇರೆ ಭಾಷೆಗಳಲ್ಲಿ ಬರುತ್ತಿರುವ ಹೊಸ ಪ್ರಯೋಗದ ಚಿತ್ರಗಳ ಬಗ್ಗೆಯೂ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದ್ದಾರೆ.

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ತಮಿಳು, ತೆಲುಗು, ಮರಾಠಿ, ಮಲಯಾಳಂ ಸಿನಿಮಾಗಳಲ್ಲಿ ಈಗ ದಲಿತ ಕೇಂದ್ರಿತ ಚಿತ್ರಗಳು ಬರುತ್ತಿವೆ. ಅಲ್ಲಿ ದೊಡ್ಡ ನಟರು, ನಿರ್ದೇಶಕರು ಸಿನಿಮಾ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಅಂಬೇಡ್ಕರ್ ಫೋಟೋ ಕೂಡ ತೋರಿಸುವ ಧೈರ್ಯ ತೊರಿಸುವುದಿಲ್ಲ. ಹಾಗಂತ ಸುಮ್ಮನಿರಲು ಆಗುವುದಿಲ್ಲ. ನಮ್ಮ ಕೈಯಲ್ಲಿ ಆಗುವುದನ್ನು ಮಾಡಬೇಕಿದೆ. ನಮ್ಮ ಅನುಭವಕ್ಕೆ ದಕ್ಕಿದ್ದು ನಾವು ಮಾಡುತ್ತೇವೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಗಳಿಸದೆ ಇರಬಹುದು. ದೊಡ್ಡ ಮಟ್ಟದಲ್ಲಿ ಜನರಿಗೆ ತಲುಪದೆ ಇರಬಹುದು. ಆದರೆ, ಕನ್ನಡದಲ್ಲೂ ಚಿತ್ರ ಬಂದಿದೆ ಎಂಬ  ಹೆಸರು ಇರುತ್ತದೆ. ದೊಡ್ಡ ದೊಡ್ಡ ನಟರನ್ನು ಹಾಕಿಕೊಂಡು ಸಿನಿಮಾ ಮಾಡಲು ನಮಗೆ ಆಗುವುದಿಲ್ಲ. ಕಡಿಮೆ ಬಂಡವಾಳದಲ್ಲಿ ನಾವು ಸ್ನೇಹಿತರೇ ಸೇರಿ ಸಿನಿಮಾ ಮಾಡುತ್ತಿದ್ದೇವೆ. ರಂಗಾಯಣದ ಕಲಾವಿದರನ್ನು ಬಳಸಿಕೊಂಡಿದ್ದೇವೆ, ಬಲ ರಾಜವಾಡಿ, ಬಿ.ಸುರೇಶ್ ನಮ್ಮ ಚಿತ್ರದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕರಾದ ಡಾ. ಕೃಷ್ಣಮೂರ್ತಿ ಚಮರಂರವರು

“ಕನ್ನಡದಲ್ಲಿ ಸ್ಟಾರ್ ನಟ, ನಿರ್ದೇಶಕರು ಇಂತಹ ಪ್ರಯೋಗ ಮಾಡುವುದಿಲ್ಲ. ಏಕೆಂದರೆ ಅವರಿಗೆ ಅಂತಹ ಅನುಭವವಗಳಿಲ್ಲ. ಸಾಮಾಜಿಕ ಕೆಲಸ ಮಾಡುತ್ತಿರುವ ಒಬ್ಬ ನಟರನ್ನು ಸಿನಿಮಾ ಮಾಡಲು ಕೇಳಿದೆ. ಆದರೆ ಕಡಿಮೆ ಬಜೆಟ್ ಸಿನಿಮಾ ಎಂದು ಒಪ್ಪಿಕೊಳ್ಳಲಿಲ್ಲ. ಅವರೆ ನಿರಾಕರಿಸಿದರು. ಇನ್ನೂ ಇಮೇಜ್‌ಗೆ ಅಂಟಿಕೊಂಡಿರುವ ನಟರು ಇಂತಹ ಸಿನಿಮಾಗಳಿಗೆ ಬರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

’ಈಗ ತಮಿಳಿನಲ್ಲಿ ಧನುಷ್, ಸೂರ್ಯರಂತಹ ನಟರು ಮುಂದೆ ಬಂದಿದ್ದಾರೆ. ಮುಂದೊಂದು ದಿನ ತಮಿಳಿನಂತೆಯೇ ಕನ್ನಡದಲ್ಲೂ ಸ್ಟಾರ್‌ ನಟರು ಇಂತಹ ಸಿನಿಮಾಗಳಿಗೆ ಬರಬಹುದು ಎಂಬ ಆಶಾಭಾವವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ವಿಚಾರಗಳನ್ನು ಇಟ್ಟುಕೊಂಡು, ದಲಿತ ದೃಷ್ಠಿಕೋನದ ಸಿನಿಮಾಗಳು ಇತರ ಚಿತ್ರರಂಗದಲ್ಲಿ ಬರುತ್ತಿವೆ. ಕನ್ನಡದಲ್ಲೂ ಇಂತಹ ಪ್ರಯತ್ನಗಳು ಹೆಚ್ಚಾಗಲಿ. ’ಭಾರತದ ಪ್ರಜೆಗಳಾದ ನಾವು’ ಈ ವರ್ಷದ ಕೊನೆಯಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಯಶಸ್ವಿಯಾಗಿ ಹೆಚ್ಚಿನ ಜನರನ್ನು ತಲುಪಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ‘ಭಾರತದ ಪ್ರಜೆಗಳಾದ ನಾವು’ ಸಿನಿಮಾ ಮಾಡಿರುವ ತಮಗೆಲ್ಲರಿಗೂ ಧನ್ಯವಾದಗಳು. ಸಾಮಾಜಿಕ ಕಳಕಳಿ ಇರಬೇಕು. ಸಮಸಮಾಜ ಸೃಷ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...