Homeಕರ್ನಾಟಕಶಿಕಾರಿಪುರ ಬಂದ್; ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ ಬಿಎಸ್‌ವೈ ಬೆಂಬಲಿಗರು!

ಶಿಕಾರಿಪುರ ಬಂದ್; ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ ಬಿಎಸ್‌ವೈ ಬೆಂಬಲಿಗರು!

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಘೋಷಿಸಿದ್ದಾರೆ. ಕಳೆದ ಬುಧವಾರವಷ್ಟೇ ತನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಬಿಎಸ್‌ವೈ ಹೇಳಿದ್ದರೂ, ಅವರ ಸ್ವಕ್ಷೇತ್ರವಾದ ಶಿವಮೊಗ್ಗದ ಶಿಕಾರಿಪುರದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶಿಕಾರಿಪುರ ಬಾಗಶಃ ಬಂದ್ ಮಾಡಲಾಗಿದ್ದು, ಬೀದಿಗಿಳಿದಿರುವ ಬಿಎಸ್‌ವೈ ಬೆಂಬಲಿಗರು ಹೈಕಮಾಂಡ್ ಸೇರಿದಂತೆ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ.

ಸೋಮವಾರ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದರು.

ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ಕಣ್ಣೀರಿಡುತ್ತಾ ಮಾತನಾಡಿದ ಅವರು, “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ, ಅವರಿಗೆ ನಾನು ಋಣಿಯಾಗಿದ್ದೇನೆ. ಮುಂದೆಯೇ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಅವರ ನಿರೀಕ್ಷೆಯಂತೆ ಕೆಲಸ ಮಾಡೋಣ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದರು.

ನಂತರ ಟ್ವೀಟ್ ಮಾಡಿದ್ದ ಅವರು, “ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ರಾಜ್ಯದ ಜನರ ಬೆಂಬಲದಿಂದ, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರ ಸಹಕಾರದಿಂದ, ಎಲ್ಲಾ ಶಾಸಕರು, ಪಕ್ಷದ ನೆರವಿನಿಂದ 2 ವರ್ಷ ಅಭಿವೃದ್ಧಿ ಪರ ಆಡಳಿತ ನೀಡಲು ಶಕ್ತಿಮೀರಿ ಪ್ರಯತ್ನ ನಡೆಸಿದ ತೃಪ್ತಿ ನನಗಿದೆ” ಎಂದು ಹೇಳಿದ್ದರು.

ಅದರಂತೆ ಅವರು ರಾಜೀನಾಮೆಯನ್ನೂ ಕೂಡಾ ನೀಡಿದ್ದರು. ಕಳೆದೊಂದು ವಾರದಿಂದ ರಾಜೀನಾಮೆ ಚರ್ಚೆ ಗರಿಗೆದರುತ್ತಿದ್ದಾಗಲೇ ಅವರು, “ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಒಬ್ಬ ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ: ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ಆದರೆ ಅವರ ಹೇಳಿಕೆಯ ಹೊರತಾಗಿಯೂ ಅವರ ಸ್ವಕ್ಷೇತ್ರವಾದ ಶಿಕಾರಿಪುರ ಇಂದು ಭಾಗಶಃ ಬಂದ್ ಆಗಿದೆ. ಅವರ ಬೆಂಗಲಿಗರು ರಸ್ತೆಯಲ್ಲಿ ನೆರೆದು ಬಿಜೆಪಿ ಹೈಕಮಾಂಡ್, ಪ್ರಧಾನಿ ಮೋದಿ ಹಾಗೂ ‘ಬಿಎಸ್‌ವೈಯ ಬೆನ್ನಿಗೆ ಚೂರಿ ಹಾಕಿದವರಿಗೆ’ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ರಾಜೀನಾಮೆ ಶಿಕಾರಿಪುರಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅನ್ಯಾಯ ಎಂದು ಬೆಂಬಲಿಗರು ಪ್ರತಿಪಾದಿಸಿದ್ದಾರೆ.

ಇಷ್ಟೇ ಅಲ್ಲದೆ ರಾಜ್ಯದಾದ್ಯಂತ ಬಿಎಸ್‌ವೈ ಅವರ ಬೆಂಬಲಿಗರು ರಾಜೀನಾಮೆಗೆ ಆಕ್ರೋಶಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ದ ಕಿಡಿಕಾರುತ್ತಿದ್ದಾರೆ. ಅಲ್ಲದೆ ನಿನ್ನೆಯಷ್ಟೇ ಲಿಂಗಾಯತ ಸಮುದಾಯದ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಬೆಂಬಲಿಸಿ ಸಭೆಯನ್ನು ನಡೆಸಿ, ಅವರ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿದ್ದರು. ಅದಾಗ್ಯೂ ಯಡಿಯೂಪಪ್ಪ ಅವರ ರಾಜೀನಾಮೆ ಪಡೆಯಲಾಗಿದೆ.

ರಾಜೀನಾಮೆ ನಂತರ ಬಿಎಸ್‌ವೈ ಅವರಿಗೆ ಯಾವುದಾದರೂ ರಾಜ್ಯದ ರಾಜ್ಯಪಾಲ ಹುದ್ದೆಯನ್ನು ನೀಡುವುದಾಗಿ ಹೇಳಲಾಗಿತ್ತು. ಆದರೆ ಅವರು ತಾನೂ ರಾಜ್ಯದಲ್ಲೇ ಇರುತ್ತೇನೆ, ತನಗೆ ರಾಜ್ಯಪಾಲ ಹುದ್ದೆ ಬೇಡ ಎಂದು ಹೇಳಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾಪ್ರಭುತ್ವದಲ್ಲಿ ಕೂಡಾ,
    1. ಪಕ್ಷದ ನಾಯಕನನ್ನು ಆಯ್ಕೆಯಾದ ವಿಧಾನಸಭಾ ಸದಸ್ಯರ ಬದಲು, ಡಿಕ್ ಮತ್ತು ಹ್ಯಾರಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ.
    2. ವಿಧಾನಸಭಾ ಸದಸ್ಯ ತನ್ನನ್ನು ಆಯ್ಕೆ ಮಾಡಿದ ಜನರಿಗಲ್ಲದೆ, ಡಿಕ್ ಮತ್ತು ಹ್ಯಾರಿಗೆ ಋಣಿಯಾಗಿರಬೇಕು ಎಂದು ಗೊತ್ತಿರಲಿಲ್ಲ.
    3. ಒಂದು ಪಕ್ಷದ ನಾಯಕನನ್ನು ಜೋಕರ್ ತರಹ ಬಳಸಬಹುದೆಂದು.

    ಭಾರತದ ಹಿಂದೂ ಧರ್ಮದಂತೆ, ಭಾರತದ ಪ್ರಜಾಪ್ರಭುತ್ವ, ಭೂಮಿಕೆಯಲ್ಲಿ ವಿಶಾಲ ಆದರೆ, ವಾಸ್ತವವಾಗಿ ನಪುಂಸಕ!

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...