Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...