Homeಮುಖಪುಟನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ನೆಟ್ಟಿಗರಿಂದ ಮೋದಿ ಮೇಲೆ ಟ್ರೋಲ್, ರಾಹುಲ್ ಪ್ರಿಯಾಂಕ ಮೇಲೆ ಲವ್

ಬಿಜೆಪಿ ಕಾರ್ಯಕರ್ತರಿಗೆ “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊನೆಯ ಹಂತದ ಚುನಾವಣೆಗಳು ಮುಗಿಯುವ ವೇಳೆಗೆ ರಾಜಕೀಯ ಪಲ್ಲಟಗಳು ನಡೆಯುತ್ತಿವೆ. ಒಂದು ಕಡೆ ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ಅಂತ ಮೋದಿ ತೀವ್ರ ಟೀಕೆಗೆ, ಟ್ರೋಲ್‍ಗೆ ಒಳಗಾಗುತ್ತಿದ್ದರೆ ಇತ್ತ ರಾಹುಲ್, ಪ್ರಿಯಾಂಕ ಅಣ್ಣ-ತಂಗಿ ಇಬ್ಬರೂ ತಮ್ಮ ಧೈರ್ಯ ಮತ್ತು ಮಾನವೀಯ ನಡವಳಿಕೆಗಳಿಂದ ಪ್ರಶಂಸೆಯ ಸುರಿಮಳೆ ಪಡೆಯುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರಿಯಾಂಕ ಗಾಂಧಿ ಕಾರಿನಲ್ಲಿ ತೆರಳುತ್ತಿದ್ದ ಮಾರ್ಗದಲ್ಲಿ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ ಕಾರು ಬಂದಕೂಡಲೇ ಮೋದಿ-ಮೋದಿ, ಮತ್ತೊಮ್ಮೆ ಎಂದು ಜೋರಾಗಿ ಕೂಗಿದ್ದಾರೆ. ತಕ್ಷಣವೇ ಕಾರು ನಿಲ್ಲಿಸಲು ಹೇಳಿ, ಕಾರಿನಿಂದಿಳಿದ ಪ್ರಿಯಾಂಕ ಗಾಂಧಿ ಅವರತ್ತ ಹಸ್ತಲಾಘವ ಚಾಚುತ್ತಾರೆ. “ನಿಮ್ಮ ನಿಲುವು ನಿಮ್ಮದು, ನನ್ನ ನಿಲುವು ನನ್ನದು, ಆಲ್ ದಿ ಬೆಸ್ಟ್” ಎಂದು ಪ್ರಿಯಾಂಕ ಗಾಂಧಿ ಹೇಳಿದೊಡನೆಯೇ ಅವರೆಲ್ಲರೂ ಖುಷಿಯಿಂದ ಹಸ್ತಲಾಘವ ಮಾಡಿದ್ದಲ್ಲದೇ ಆಲ್ ದಿ ಬೆಸ್ಟ ಮೇಡಂ, ಬೆಸ್ಟ್ ಆಫ್ ಲಕ್ ಎಂದು ಶುಭ ಹಾರೈಸಿದ್ದಾರೆ. ಅಷ್ಟೆ ಅಲ್ಲದೇ ಆ ಕಾರ್ಯಕರ್ತುರು ಪ್ರಿಯಾಂಕರ ಫೋಟೊ ಜೊತೆಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಿಯಾಂಕಾ ಗಾಂಧಿಯವರ ಧೈರ್ಯ ಮತ್ತು ಹೃದಯವೈಶಾಲ್ಯತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಇದು ಪ್ರಿಯಾಂಕರವರ ‘ಗಾಂಧಿಗಿರಿ’ ಎಂದು ಬಿರುದ್ದು ನೀಡಿದ್ದಾರೆ.

ವಿಡಿಯೋ ನೋಡಿ

ಇನ್ನೊಂದು ಕಡೆ ಮೋದಿಯ ಸ್ಕ್ರಿಪ್ಟೆಡ್ ಪ್ರಶ್ನೆಗಳ ಸಂದರ್ಶನದ ಕಾರಣಕ್ಕಾಗಿ, ಮೋಡ-ರಾಡಾರ್, ಡಿಜಿಟಲ್ ಕ್ಯಾಮೆರ – ಮೇಲ್ ವಿಷಯದ ಕಾರಣಕ್ಕಾಗಿ ಭಾರೀ ಸದ್ದು ಮಾಡಿದ್ದ ನ್ಯೂಸ್ ನೇಷನ್ ಚಾನಲ್ ಇಂದು ಪಂಜಾಬ್‍ನ ಬಹಿರಂಗ ಮೈದಾನದಲ್ಲಿ ಸ್ಕ್ರಿಪ್ಟೆಡ್ ಪ್ರಶ್ನೆಗಳಿಲ್ಲದೆ ರಾಹುಲ್ ಗಾಂಧಿಯವರ ಸಂದರ್ಶನ ಮಾಡಿದೆ.

ಈ ಐದು ವರ್ಷದ ಮೋದಿಜಿ ಆಡಳಿತದಲ್ಲಿ ಒಬ್ಬ ವ್ಯಕ್ತಿಯ ಸರ್ಕಾರವಾಗಿದೆ. ಅವರು ಯಾರ ಮಾತನ್ನು ಕೇಳಿಲ್ಲ. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿ ಮಾಡುವಾಗ ಮೋದಿ ಯಾರ ಸಲಹೆಯನ್ನು ಪಡೆಯದೇ ಏಕಾಏಕಿ ನಿರ್ಧಾರ ಮಾಡಿದರು. ಭಾರತದಲ್ಲಿ ಆರ್ಥಿಕ ಇಲಾಖೆ ಇದೆ, ಅರ್ಥ ಸಚಿವರಿದ್ದಾರೆ, ಸಮರ್ಥ ಅಧಿಕಾರಿಗಳಿದ್ದಾರೆ, ಆರ್‍ಬಿಐ ಗವರ್ನರ್ ಇದ್ದಾರೆ, ಯಾರನ್ನು ಕೇಳದೆ ಹೇಳದೆ ಜಾರಿ ಮಾಡಿದುದು ಸರಿ ಅಲ್ಲ, ಭಾರತದ ಜನರ ದನಿಗೆ ಅನುಗುಣವಾಗಿ ಸರ್ಕಾರ ನಡೆಸಬೇಕೆ ಹೊರತು ಒಬ್ಬ ವ್ಯಕ್ತಿಯ ಮನಸ್ಸಿಗೆ ಬಂದ ಹಾಗೆ ಅಲ್ಲ ಎಂದು ರಾಹುಲ್ ಹೇಳಿದರು.

ಅದಕ್ಕೆ ಸಂದರ್ಶಕ, ನೀವು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವಿರುದ್ಧ ಮಾತಾಡುತ್ತೀರಿ ಅವನ್ನು ಜಾರಿಗೆ ತಂದ ನಂತರವೂ ಉತ್ತರ ಪ್ರದೇಶ ಮತ್ತು ಗುಜರಾತ್‍ನಲ್ಲಿ ಬಿಜೆಪಿ ಗೆದ್ದಿದೆ ಎಂದು ಮೋದಿ ನಮ್ಮ ಸಂದರ್ಶನದಲ್ಲಿ ಉತ್ತರಿಸಿದ್ದರಲ್ಲ ಎಂದು ಕೇಳಿದರು. ಆಗ “ಮೋದಿಜಿಯವರು ಸ್ಕ್ರಿಪ್ಟೆಡ್ ಫೈಲ್‍ನಲ್ಲಿ ಈ ಉತ್ತರವನ್ನು ಬರೆದುಕೊಂಡು ಬಂದಿದ್ದರ?” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಅದಕ್ಕೆ ಸಂದರ್ಶಕ ಇಲ್ಲ ಮೋದಿಯವರು ಕೇವಲ ಕವನ ಮಾತ್ರ ಫೈಲ್‍ನಲ್ಲಿ ಬರೆದುಕೊಂಡು ಬಂದಿದ್ದರು ಎಂದಾಗ, ಮೋದಿಯವರ ಫೈಲ್‍ನಲ್ಲಿ ಪ್ರಶ್ನೆ, ಉತ್ತರ ಎರಡು ಇರುವುದನ್ನು ಇಂಟರ್‍ನೆಟ್‍ನಲ್ಲಿ ಎಲ್ಲರೂ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದೇ ಸಂದರ್ಶನದಲ್ಲಿ ನಾವು ಭಾರತವನ್ನು ಪ್ರೀತಿ, ಸಹೋದರತೆ, ನ್ಯಾಯ, ನಾವೆಲ್ಲ ಒಂದು ಎನ್ನುವ ಮನೋಭಾವದ ಆಧಾರದಲ್ಲಿ ಕಟ್ಟಲು ಬಯಸಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಸಂದರ್ಶನ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...