Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ; ವ್ಯಾಕ್ಸಿನೇಷನ್ ಪ್ರಕ್ರಿಯೆ ನಿಲ್ಲಿಸುವತ್ತ ಕೇರಳ

ಕೊರೊನಾ ಲಸಿಕೆ ಕೊರತೆ; ವ್ಯಾಕ್ಸಿನೇಷನ್ ಪ್ರಕ್ರಿಯೆ ನಿಲ್ಲಿಸುವತ್ತ ಕೇರಳ

- Advertisement -
- Advertisement -

ಕೇರಳದ ಅನೇಕ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ಕೊರತೆಯಾಗಿದ್ದು, ವ್ಯಾಕ್ಸಿನೇಷನ್‌‌ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. “ಪ್ರಸ್ತುತ ರಾಜ್ಯದಲ್ಲಿ ಶೂನ್ಯ ಲಸಿಕೆ ದಾಸ್ತಾನುಗಳಿದ್ದು, ಮುಂದಿನ ಕೆಲವು ದಿನಗಳವರೆಗೆ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಇರುವುದಿಲ್ಲ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಅಲಪ್ಪುಝ ಜಿಲ್ಲೆಗಳಲ್ಲಿ ಯಾವುದೇ ಕೋವಿಶೀಲ್ಡ್ ಲಸಿಕೆ ಇಲ್ಲ. ಜುಲೈ 29 ರ ಮೊದಲು ಹೊಸದಾಗಿ ಲಸಿಕೆಗಳು ರಾಜ್ಯವನ್ನು ತಲುಪುವ ನಿರೀಕ್ಷೆಯಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1.09 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 11,586 ಜನರು ಕೊರೊನಾ ಪಾಸಿಟಿವ್ ಆಗಿದ್ದಾರೆ. ಪರೀಕ್ಷಾ ಪಾಸಿಟಿವ್‌‌ ಪ್ರಮಾಣವು 10.59% ರಷ್ಟಿದೆ ಎಂದು ವೀಣಾ ಜಾರ್ಜ್‌ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

“ಪ್ರಸ್ತುತ ನಾವೀಗ 1.66 ಕೋಟಿ ಲಸಿಕೆಗಳನ್ನು ಪಡೆದುಕೊಂಡಿದ್ದೇವೆ, ಅವುಗಳಲ್ಲಿ ಯಾವುದನ್ನೂ ವ್ಯರ್ಥ ಮಾಡದೆ ಉಪಯೋಗಿಸಿದ್ದೇವೆ. ನಾವು 1.87 ಕೋಟಿ ಲಸಿಕೆಗಳನ್ನು ನೀಡಲು ಸಮರ್ಥರಾಗಿದ್ದೇವೆ. ಈಗಿನ ಅಂಕಿ ಅಂಶ ಕೇರಳದಲ್ಲಿ ಲಸಿಕಗಳು ಮುಗಿದಿದೆ ಎಂದು ತೋರಿಸುತ್ತಿದೆ. ಮುಂದಿನ ತಿಂಗಳು ನಮಗೆ 10 ಬೇಕು ಲಕ್ಷ ಲಸಿಕೆಗಳು ಬೇಕಾಗುತ್ತದೆ” ಎಂದು ವೀಣಾ ಜಾರ್ಜ್‌ ಹೇಳಿದ್ದಾರೆ.

“45 ವರ್ಷಕ್ಕೂ ಮೇಲ್ಪಟ್ಟವರ ವಿಭಾಗದಲ್ಲಿ, ಜನಸಂಖ್ಯೆಯ 76% ರಷ್ಟು ಜನರು ಮೊದಲ ಡೋಸ್‌ ಅನ್ನು ಪಡೆದಿದ್ದಾರೆ. ಇದರಲ್ಲಿ ಎರಡೂ ಡೋಸ್‌ ಅನ್ನು ಪಡೆದವರು 35% ಮಾತ್ರ. ಕೇರಳ ಜನಸಂಖ್ಯೆಯ 42% ದಷ್ಟು ಜನರು ಮಾತ್ರ ಕೊರೊನಾ ಪ್ರತಿಕಾಯಗಳನ್ನು ಹೊಂದಿದ್ದಾರೆಂದು ಅಧ್ಯಯನಗಳು ಹೇಳಿದೆ, ಅಂದರೆ ನಮ್ಮ ಜನಸಂಖ್ಯೆಯ ಬಹುಪಾಲು ಜನರು ಕೊರೊನಾಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗನೇ ವ್ಯಾಕ್ಸಿನೇಷನ್‌ ನಡೆಯುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಕೇರಳವು ದೇಶದ ಉಳಿದ ರಾಜ್ಯಗಳಿಗಿಂತ ಹೆಚ್ಚು ಕೊರೊನಾ ಪೀಡಿತ ರಾಜ್ಯವಾಗಿದೆ ಎಂದು ಕೊರೊನಾ ಅಂಕಿ ಅಂಶವು ಹೇಳುತ್ತಿದೆ. ರಾಷ್ಟ್ರೀಯ ಪಾಸಿಟಿವಿಟಿ ದರ 4% ಕ್ಕಿಂತ ಕಡಿಮೆಯಿದ್ದರೆ, ಕೇರಳದ ದರ 10.59% ರಷ್ಟಿದೆ. ರಾಜ್ಯದಲ್ಲಿ 4.12 ಲಕ್ಷ ಸಕ್ರಿಯ ಕೊರೊನಾ ಸೋಂಕಿನ ಪ್ರಕರಣಗಳಿವೆ.

ಇನ್ನೂ ಹೆಚ್ಚಿನ ಕೊರೊನಾ ಲಸಿಕೆಗಳನ್ನು ಪೂರೈಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಇದನ್ನೂ ಓದಿ: ಬಕ್ರೀದ್ ಹಬ್ಬಕ್ಕೆ ಅಂಗಡಿ ತೆರೆಯಲು ಕೇರಳ ಸರ್ಕಾರದ ಅನುಮತಿ: ಸುಪ್ರೀಂಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...