Homeಮುಖಪುಟಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ ಎಂದು ಹಲವರು ಆರೋಪಿಸಿದ್ದಾರೆ.

- Advertisement -
- Advertisement -

ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಘೋಷಿಸಲಾಗುತ್ತದೆ ಎನ್ನಲಾಗಿದೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿಯವರು ವೀಕ್ಷಕರಾಗಿ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದು ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ಸುಮ್ಮನೆ ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದು ಎಲ್ಲಾ ಶಾಸಕರ ಅಭಿಪ್ರಾಯ ಪಡೆಯುವ ಕಸರತ್ತು ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.

ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ಒಂದು ದಿನವಾಯಿತು. ತಮ್ಮ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಶಾಸಕರು blank ಆಗಿದ್ದಾರೆ. ಸ್ವತಃ ಶಾಸಕರಿಗೇ ಮುಂದಿನ ಮುಖ್ಯಮಂತ್ರಿ ಯಾರೆಂಬುದು ಗೊತ್ತಿಲ್ಲ, ಅಭ್ಯರ್ಥಿಗಳು ಮೊದಲೇ ಗೊತ್ತಿಲ್ಲ. ಒಂದು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವನೂ ಸೇರಿದಂತೆ ಕನಿಷ್ಠ ಐವತ್ತು ಮಂದಿಯ ಹೆಸರು ಓಡುತ್ತಿವೆ. ಕೊನೆಯಲ್ಲಿ ಶಾಸಕಾಂಗ ಸಭೆಯಲ್ಲಿ ಶಾಸಕರೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದರೂ ಚೀಟಿಯಲ್ಲಿ ಬರೋ ಹೆಸರಿಗೇ ಅವರು ಮುದ್ರೆ ಒತ್ತಬೇಕು. ನಮ್ಮ ಸಂಸದೀಯ ಪ್ರಜಾಸತ್ತೆಯ ದೊಡ್ಡ ತಮಾಶೆ ಇದು. ಕರ್ನಾಟಕದ ಮುಖ್ಯಮಂತ್ರಿ ಸ್ಥಾನವೆಂಬುದು ವಾಟ್ಸಾಪ್ ಫಾರ್ವಾರ್ಡ್ ಜೋಕ್ ಆಗಿ ಹೋಗಿದ್ದು ನಮ್ಮ ಕಾಲದ ದುರಂತ. ಪ್ರಜಾಪ್ರಭುತ್ವವನ್ನು ಹೇಗೆಲ್ಲ ಚುಚ್ಚಿ ಕೊಲ್ಲಲಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ದಿನೂ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ಬಹುಶಃ ಎರಡ್ಮೂರು ವಾರಗಳ ಹಿಂದೆ ಕೇಂದ್ರ ಸಂಪುಟ ಪುನರ್ ರಚನೆಯ ಸಂಧರ್ಭದಲ್ಲೇ ಆಗಿದೆ. ಹಾಗಾಗಿಯೇ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿಯಾಗಿದ್ದಾರೆ. ಇನ್ನು ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗೋದು ಏನೂ ಇಲ್ಲ. ಹೆಚ್ಚೆಂದರೆ ಈಗಾಗಲೇ ಮಾರಗುಡಿ ಬ್ರದರ್ಸ್ ಆಯ್ಕೆ ಮಾಡಿರುವ ಯೆಸ್ ಮ್ಯಾನ್ ಹೆಸರನ್ನು ಶಾಸಕಾಂಗ ಸಭೆಯಲ್ಲಿ ತೇಲಿಬಿಟ್ಟು, ಬಹುಮತದಿಂದ ಅದನ್ನು ಅಂಗೀಕಾರವಾಗುವಂತೆ ನೋಡಿ, ರಾಜ್ಯದ ಮುಖ್ಯಮಂತ್ರಿಯನ್ನು ಶಾಸಕರು ಆರಿಸಿದ್ದು ಎಂದು ತೋರಿಸುವ ನಾಟಕ ನಡೆಯಬಹುದು. ಅದಕ್ಕೆ ನಮ್ಮ ಶಾಸಕರು ‘ಸಂತೋಷ’ದಿಂದ ಅಸ್ತು ಎನ್ನುವುದೂ ಗ್ಯಾರಂಟಿ ಎಂದು ಪತ್ರಕರ್ತರಾದ ಅಲ್ಮೇಡ ಗ್ಲಾಡ್‌ಸನ್‌ ವ್ಯಂಗ್ಯವಾಡಿದ್ದಾರೆ.

ಬಹುಶಃ ಕಾಂಗ್ರೆಸ್ಸಿನ ಹೈಕಮಾಂಡ್‌ ಸಂಸ್ಕೃತಿಯನ್ನು ಬಿಜೆಪಿ (ಜನಸಂಘ) ಹಾಸ್ಯ ಮಾಡಿದಷ್ಟು ಬೇರಾರೂ ಮಾಡಿರಲಾರರು. ಡಾ. ಮನಮೋಹನ್‌ ಸಿಂಗರು ಪ್ರಧಾನಿಗಳಾಗಿದ್ದಾಗ, ಅವರು ಕಾಂಗ್ರೆಸ್ಸಿನ ಅಧ್ಯಕ್ಷೆ ಶ್ರೀಮತಿ ಸೋನಿಯಾ ಅವರನ್ನು ಭೇಟಿ ಮಾಡಿ ಸಲಹೆ ಕೇಳುತ್ತಿದ್ದುದೂ ಬಿಜೆಪಿಯ ನಿರಂತರ ಅಪಹಾಸ್ಯಕ್ಕೆ ಒಳಗಾಗಿದ್ದುದು ದೂರದ ಮಾತೇನಲ್ಲ. ಅಂತ ಬಿಜೆಪಿಯು ಕ್ಷಿಪ್ರ ವೇಗದಲ್ಲಿ ಈಗ ತಲುಪಿದ ಅವಸ್ಥೆ ನೋಡಿ! ಹೈಕಮಾಂಡ್‌ ನ ಅನುಮತಿ ಇಲ್ಲದೆ ಹುಲ್ಲುಕಡ್ಡಿಯೂ ಅಲುಗಾಡಲಾಗದ ಸ್ಥಿತಿಯನ್ನು ಅದು ನಿರ್ಮಾಣಮಾಡಿಕೊಂಡಿದೆ. ಅದರ ಬಗ್ಗೆ ಗುಟ್ಟಿನಲ್ಲಿಯೂ ಮಾತಾಡಿಕೊಳ್ಳಲಾಗದ ಭಯ ಅದರ ಚುನಾಯಿತ ಪ್ರತಿನಿಧಿಗಳನ್ನೂ ಆವರಿಸಿದೆ. ಏನಿಲ್ಲವೆಂದರೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜನರಿಂದ ಚುನಾಯಿತರಾಗಿದ್ದರು ಮತ್ತು ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಿಜೆಪಿಯವರಿಗೆ ಮಾರ್ಗದರ್ಶನ ಮಾಡುವ ಆರ್‌ ಎಸ್‌ ಎಸ್‌ ಚುನಾವಣೆಯಲ್ಲಿ ಗೆದ್ದಿದೆಯಾ? ಅಥವಾ ಜನರು ಅದಕ್ಕೆ ಓಟ್‌ ಹಾಕಿದ್ದಾರಾ? ಪ್ರಜಾಪ್ರಭುತ್ವ ನಾಶವಾಗುವುದೆಂದರೆ ಹೀಗೆ.. ಎಂದು ಖ್ಯಾತ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆಯವರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...