Homeಕರ್ನಾಟಕ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

- Advertisement -
- Advertisement -

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿಯ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿದ್ದ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್‌ ಅಧೀಕೃತವಾಗಿ ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಘೋಷಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ ಮಾಜಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂಪಿ ರೇಣುಕಾಚಾರ್ಯ ಅವರು ಟ್ವಿಟರ್‌ನಲ್ಲಿ “ಕಿಂಗ್ ಮೇಕರ್‌ ಬಿಎಸ್‌ ಯಡಿಯೂರಪ್ಪ” ಎಂದು ಬರೆದಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ.

ಯಡಿಯೂರಪ್ಪ ಅವರು ಅಧಿಕಾರಕ್ಕೆ ಏರಿದ ದಿನದಿಂದಲೂ ಪಕ್ಷದೊಳಗೆ ಅವರ ಬಗ್ಗೆ ಅಸಮಾಧಾನಗಳು ಸ್ಪೋಟಗೊಳ್ಳುತ್ತಲೆ ಬಂದಿದೆ. ಹಲವಾರು ಬಿಜೆಪಿ ಶಾಸಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಹಲವು ಬಾರಿ ಯಡಿಯೂರಪ್ಪ ರಾಜೀನಾಮೆ ಕೊಟ್ಟೇ ಬಿಟ್ಟರು ಎನ್ನುವಷ್ಟು ಮಟ್ಟಕ್ಕೆ ಕಚ್ಛಾಟಗಳು ನಡೆಯುತ್ತಿದ್ದವು.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಅದಲ್ಲದೆ ಸೋಮವಾರ ರಾಜೀನಾಮೆ ಘೋಷಿಸಿದ ಭಾಷಣದಲ್ಲೂ ಯಡಿಯೂರಪ್ಪ ಅವರು ಕೇಂದ್ರದ ಬಿಜೆಪಿ ನಾಯಕತ್ವ ತನಗೆ ಮಂತ್ರಿ ಮಂಡಲ ರಚನೆ ಮಾಡದಂತೆ ಎರಡು ತಿಂಗಳು ಸತಾಯಿಸಿದ್ದರ ಬಗ್ಗೆ ಹೇಳಿದ್ದರು. ಸೋಮವಾರದಂದು ರಾಜ್ಯದ ಪ್ರಬಲ ಸಮುದಾಯ ಲಿಂಗಾಯತದ ನಾಯರಾದ ಯಡಿಯೂರಪ್ಪ ಅವರ ರಾಜಕೀಯ ಪರ್ವ ಮುಗೀತು ಎಂದು ಲೆಕ್ಕಾಚಾರಗಳನ್ನು ಮಾಡಲಾಗಿತ್ತು.

ಯಡಿಯೂರಪ್ಪ ಅವರ ರಾಜೀನಾಮೆಗೆ ಮುಂಚೆಯೆ ಬಿಜೆಪಿಯ ಯಡಿಯೂರಪ್ಪ ಅವರ ವಿರೋಧಿ ಬಣದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಗಳು ಹರಡಿತ್ತು. ಪ್ರಮುಖವಾಗಿ ಬಿಎಲ್ ಸಂತೋಷ್ ಅವರ ಹೆಸರು ಮುನ್ನಲೆಗೆ ಬಂದಿತ್ತು. ಅಲ್ಲದೆ ನಳಿನ್ ಕುಮಾರ್‌ ಕಟೀಲ್ ಅವರದ್ದು ಎನ್ನಲಾದ ಆಡಿಯೋದಲ್ಲೂ ದೆಹಲಿಯ ಕಡೆಯವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು. ನಳಿನ್ ಕುಮಾರ್‌ ಕಟೀಲ್ ಬಿಎಸ್‌ವೈ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಈ ಹೇಳಿಕೆಗೆ ಬಲ ಬಂದಿತ್ತು.

ಅದಾಗ್ಯೂ, ಎಲ್ಲಾ ಲೆಕ್ಕಾಚಾಗಳನ್ನು ತಲೆಕೆಳಗಾಗಿಸಿ ಮಂಗಳವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಿದ್ದಾರೆ. ಅಲ್ಲದೆ ಬೊಮ್ಮಾಯಿ ಯಡಿಯೂರಪ್ಪ ಅವರ ಆಪ್ತನೇ ಆಗಿದ್ದು, ಜೊತೆಗೆ ಲಿಂಗಾಯತ ಸಮುದಾಯಕ್ಕೂ ಸೇರಿದವರಾಗಿದ್ದಾರೆ.

ಇದನ್ನೂ ಓದಿ: ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು?

ಇಷ್ಟೇ ಅಲ್ಲದೆ ಹೊಸದಾಗಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿರುವ ಆರ್‌. ಅಶೋಕ್ ಮತ್ತು ಗೋವಿಂದ ಕಾರಜೋಳ ಕೂಡಾ ಯಡಿಯೂರಪ್ಪ ಬಣದವರೇ ಆಗಿದ್ದಾರೆ. ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿರುವ ಮತ್ತೊಬ್ಬ ಬಿಜೆಪಿ ನಾಯಕ ಶ್ರೀರಾಮುಲು ಅವರು ಯಡಿಯೂರಪ್ಪ ಅವರ ಬಣದವರು ಅಲ್ಲವಾಗಿದ್ದರೂ, ಯಡಿಯೂರಪ್ಪ ಅವರ ವಿರೋದಿ ಕೂಡಾ ಅಲ್ಲ. ಹೀಗಾಗಿ ಹೊಸ ಮುಖ್ಯಮಂತ್ರಿಯ ರಾಜಕೀಯದಾಟದಲ್ಲಿ ಯಡಿಯೂರಪ್ಪ ಅವರೇ ಮುಖ್ಯಪಾತ್ರ ವಹಿಸಿದ್ದಾರೆ ಎನ್ನಬಹುದು. ಈ ಹೇಳಿಕೆಗೆ ರೇಣುಕಾಚಾರ್ಯ ಅವರ ಟ್ವೀಟ್‌ ಬಲ ನೀಡುತ್ತದೆ.

ಇದನ್ನೂ ಓದಿ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿ; ಗಣ್ಯರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...