Homeಕರ್ನಾಟಕ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

- Advertisement -
- Advertisement -

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿಯ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿದ್ದ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್‌ ಅಧೀಕೃತವಾಗಿ ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಘೋಷಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ ಮಾಜಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂಪಿ ರೇಣುಕಾಚಾರ್ಯ ಅವರು ಟ್ವಿಟರ್‌ನಲ್ಲಿ “ಕಿಂಗ್ ಮೇಕರ್‌ ಬಿಎಸ್‌ ಯಡಿಯೂರಪ್ಪ” ಎಂದು ಬರೆದಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ.

ಯಡಿಯೂರಪ್ಪ ಅವರು ಅಧಿಕಾರಕ್ಕೆ ಏರಿದ ದಿನದಿಂದಲೂ ಪಕ್ಷದೊಳಗೆ ಅವರ ಬಗ್ಗೆ ಅಸಮಾಧಾನಗಳು ಸ್ಪೋಟಗೊಳ್ಳುತ್ತಲೆ ಬಂದಿದೆ. ಹಲವಾರು ಬಿಜೆಪಿ ಶಾಸಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಹಲವು ಬಾರಿ ಯಡಿಯೂರಪ್ಪ ರಾಜೀನಾಮೆ ಕೊಟ್ಟೇ ಬಿಟ್ಟರು ಎನ್ನುವಷ್ಟು ಮಟ್ಟಕ್ಕೆ ಕಚ್ಛಾಟಗಳು ನಡೆಯುತ್ತಿದ್ದವು.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಅದಲ್ಲದೆ ಸೋಮವಾರ ರಾಜೀನಾಮೆ ಘೋಷಿಸಿದ ಭಾಷಣದಲ್ಲೂ ಯಡಿಯೂರಪ್ಪ ಅವರು ಕೇಂದ್ರದ ಬಿಜೆಪಿ ನಾಯಕತ್ವ ತನಗೆ ಮಂತ್ರಿ ಮಂಡಲ ರಚನೆ ಮಾಡದಂತೆ ಎರಡು ತಿಂಗಳು ಸತಾಯಿಸಿದ್ದರ ಬಗ್ಗೆ ಹೇಳಿದ್ದರು. ಸೋಮವಾರದಂದು ರಾಜ್ಯದ ಪ್ರಬಲ ಸಮುದಾಯ ಲಿಂಗಾಯತದ ನಾಯರಾದ ಯಡಿಯೂರಪ್ಪ ಅವರ ರಾಜಕೀಯ ಪರ್ವ ಮುಗೀತು ಎಂದು ಲೆಕ್ಕಾಚಾರಗಳನ್ನು ಮಾಡಲಾಗಿತ್ತು.

ಯಡಿಯೂರಪ್ಪ ಅವರ ರಾಜೀನಾಮೆಗೆ ಮುಂಚೆಯೆ ಬಿಜೆಪಿಯ ಯಡಿಯೂರಪ್ಪ ಅವರ ವಿರೋಧಿ ಬಣದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಗಳು ಹರಡಿತ್ತು. ಪ್ರಮುಖವಾಗಿ ಬಿಎಲ್ ಸಂತೋಷ್ ಅವರ ಹೆಸರು ಮುನ್ನಲೆಗೆ ಬಂದಿತ್ತು. ಅಲ್ಲದೆ ನಳಿನ್ ಕುಮಾರ್‌ ಕಟೀಲ್ ಅವರದ್ದು ಎನ್ನಲಾದ ಆಡಿಯೋದಲ್ಲೂ ದೆಹಲಿಯ ಕಡೆಯವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು. ನಳಿನ್ ಕುಮಾರ್‌ ಕಟೀಲ್ ಬಿಎಸ್‌ವೈ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಈ ಹೇಳಿಕೆಗೆ ಬಲ ಬಂದಿತ್ತು.

ಅದಾಗ್ಯೂ, ಎಲ್ಲಾ ಲೆಕ್ಕಾಚಾಗಳನ್ನು ತಲೆಕೆಳಗಾಗಿಸಿ ಮಂಗಳವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಿದ್ದಾರೆ. ಅಲ್ಲದೆ ಬೊಮ್ಮಾಯಿ ಯಡಿಯೂರಪ್ಪ ಅವರ ಆಪ್ತನೇ ಆಗಿದ್ದು, ಜೊತೆಗೆ ಲಿಂಗಾಯತ ಸಮುದಾಯಕ್ಕೂ ಸೇರಿದವರಾಗಿದ್ದಾರೆ.

ಇದನ್ನೂ ಓದಿ: ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು?

ಇಷ್ಟೇ ಅಲ್ಲದೆ ಹೊಸದಾಗಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿರುವ ಆರ್‌. ಅಶೋಕ್ ಮತ್ತು ಗೋವಿಂದ ಕಾರಜೋಳ ಕೂಡಾ ಯಡಿಯೂರಪ್ಪ ಬಣದವರೇ ಆಗಿದ್ದಾರೆ. ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿರುವ ಮತ್ತೊಬ್ಬ ಬಿಜೆಪಿ ನಾಯಕ ಶ್ರೀರಾಮುಲು ಅವರು ಯಡಿಯೂರಪ್ಪ ಅವರ ಬಣದವರು ಅಲ್ಲವಾಗಿದ್ದರೂ, ಯಡಿಯೂರಪ್ಪ ಅವರ ವಿರೋದಿ ಕೂಡಾ ಅಲ್ಲ. ಹೀಗಾಗಿ ಹೊಸ ಮುಖ್ಯಮಂತ್ರಿಯ ರಾಜಕೀಯದಾಟದಲ್ಲಿ ಯಡಿಯೂರಪ್ಪ ಅವರೇ ಮುಖ್ಯಪಾತ್ರ ವಹಿಸಿದ್ದಾರೆ ಎನ್ನಬಹುದು. ಈ ಹೇಳಿಕೆಗೆ ರೇಣುಕಾಚಾರ್ಯ ಅವರ ಟ್ವೀಟ್‌ ಬಲ ನೀಡುತ್ತದೆ.

ಇದನ್ನೂ ಓದಿ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿ; ಗಣ್ಯರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...