Homeಅಂಕಣಗಳುಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ಓದಿರಿ ಗೌರಿ ಕಣ್ಣೋಟ

- Advertisement -
- Advertisement -

|ಗೌರಿ ಲಂಕೇಶ್ |

18 ಫೆಬ್ರವರಿ, 2009 (‘ಕಂಡಹಾಗೆ’ ಸಂಪಾದಕೀಯದಿಂದ)

1990ರಲ್ಲಿ ಅಪ್ಪ ಬರೆದಿದ್ದ ‘ಸಾಹಿತ್ಯ ಪರಿಷತ್ತು ಮತ್ತು ಸಾಹಿತಿಗಳು’ ಎಂಬ ಲೇಖನದಲ್ಲಿ ಸಾಹಿತ್ಯ ಪರಿಷತ್ತಿನ ಆರಂಭಿಕ ಆಶಯಗಳನ್ನು ಮೆಚ್ಚಿದ್ದರೂ ಆನಂತರ ಅದರಲ್ಲಿ ನಡೆದ ಸೆಣಸಾಟ, ಹೊಡೆದಾಟ, ಜಾತಿ ರಾಜಕೀಯ ಇತ್ಯಾದಿಗಳ ಬಗ್ಗೆ ಬೇಸರಗೊಂಡಿದ್ದರ ಬಗ್ಗೆ ಹೇಳುತ್ತಾರೆ.

“ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನಗಳಲ್ಲಿ ಆದ ಜಗಳಗಳು, ವಿವಾದ, ಹಗರಣಗಳು ಇವೆಲ್ಲವನ್ನು ನೋಡುತ್ತಿದ್ದ ಸೂಕ್ಷ್ಮ ಮನಸ್ಸಿನ ಸಾಹಿತಿಗಳಲ್ಲಿ ಅಸಹ್ಯ ಹುಟ್ಟಿಸಿದವು. ಸಾಹಿತಿಗಳೆಂದರೆ ಲಜ್ಜೆಯ, ಘನತೆಯ ವ್ಯಕ್ತಿಗಳು ಎಂದು ತಿಳಿದಿದ್ದವರಿಗೆ ದಿಗ್ಭ್ರಮೆಯಾಯಿತು. ಸಾಹಿತ್ಯ ಮೂಲಭೂತವಾಗಿ ನಿಷ್ಪಕ್ಷಪಾತವಾದುದು ಎಂದು ತಿಳಿದವರಿಗೆ ಸಾಹಿತ್ಯದ ಇತರೆ ಮುಖಗಳು ಕಾಣತೊಡಗಿದವು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜಕೀಯ ಮುಖಂಡನಂತೆ ಮೆರೆಯತೊಡಗಿದರೆ, ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಉತ್ಸವ ಮೂರ್ತಿಯಾಗಿ ವಿಜೃಂಭಿಸತೊಡಗಿದ… ರಾಜಕೀಯ ಚುನಾವಣೆಯ ಕೊಳಕುತನವನ್ನೆಲ್ಲ ಮೀರಿಸತೊಡಗಿದ ಪರಿಷತ್ತು ಎಲ್ಲರ ತಾತ್ಸಾರಕ್ಕೆ ಗುರಿಯಾಗತೊಡಗಿತು”. ಎಂದು ಅಪ್ಪ ಅದೇ ಲೇಖನದಲ್ಲಿ ಬರೆದಿದ್ದಾರೆ.

ಕನ್ನಡಿಗರಲ್ಲಿ ಯಾವುದೇ ಸ್ಫೂರ್ತಿ, ಭರವಸೆ ಮೂಡಿಸಲಾಗದಂತಹ ಅವಸ್ಥೆಯ ಮಟ್ಟಕ್ಕೆ ಪರಿಷತ್ ಇಳಿದಾಗ ಅಪ್ಪ ಮತ್ತು ಇತರ ಸಾಹಿತಿಗಳಿಗೆ ಉಳಿದಿದ್ದ ಮಾರ್ಗ ‘ಜಾಗೃತ ಸಾಹಿತ್ಯ ಸಮಾವೇಶ’ವನ್ನು ಪ್ರತ್ಯೇಕವಾಗಿ ಏರ್ಪಡಿಸುವುದು. ಫೆಬ್ರವರಿ 16, 1990ರಲ್ಲಿ ನಡೆದ ಈ ‘ಜಾಗೃತ ಸಾಹಿತ್ಯ ಸಮಾವೇಶ’ವನ್ನು ಅಪ್ಪ ಉದ್ಘಾಟಿಸಿ ಮಾಡಿದ ಭಾಷಣದ ತುಣುಕು ಹೀಗಿದೆ…

“ರಾಜ್ಯಭಾಷೆ ಬಹುಸಂಖ್ಯಾತ ಜನರ ಮಾತೃಭಾಷೆ. ಆಡಳಿತ ಭಾಷೆ, ವ್ಯವಹಾರ ಭಾಷೆ-ಅದು ನಮ್ಮಲ್ಲಿ ಕನ್ನಡ: ಹಾಗೆಯೇ ಬಳ್ಳಾರಿಯ ಒಂದು ಹಳ್ಳಿಯೊಂದರಲ್ಲಿ ವಾಸಿಸುವ ತೆಲುಗರ ಆಡಳಿತ ಭಾಷೆ, ವ್ಯವಹಾರ ಭಾಷೆ ಕನ್ನಡ: ಅಂತೆಯೇ ಅವರೆಲ್ಲರ ಮಾತೃಭಾಷೆಯನ್ನು ನಾಶಮಾಡುವುದು ಕರ್ನಾಟಕ ಆಡಳಿತದ ಉದ್ದೇಶವಾಗಕೂಡದು.

ಒಂದು ರಾಜ್ಯ ಪೂರ್ಣ ಸಾಕ್ಷರತೆಯತ್ತ ಸಾಗಿದೆ ಎಂದರೆ ಅರ್ಥ, ಇಲ್ಲಿಯ ಎಲ್ಲ, ವರ್ಗ, ಜಾತಿಯ ಜನರಿಗೆ ಹೊಸತೊಂದು ಶಕ್ತಿ, ಹೊಸತೊಂದು ಚೈತನ್ಯ ಬಂದಿದೆ ಎಂಬುದು: ಹಾಗೆಯೇ ಮುಂದುವರಿದ ಜಾತಿಗಳ ಸ್ವತ್ತಾಗಿದ್ದ ನೆನಪನ್ನು ದಾಖಲಿಸುವ, ಅನುಭವವನ್ನು ನಮೂದಿಸುವ, ಗ್ರಂಥಗಳನ್ನು ರಚಿಸುವ ಬರವಣಿಗೆಯ ಸವಲತ್ತು ದಲಿತರಿಗೆ, ಹಿಂದುಳಿದವರಿಗೆ ಕೂಡ ದೊರೆತಿದೆ ಎಂಬುದು; ಹಾಗೆಯೆ ಲಕ್ಷಾಂತರ ವರ್ಷಗಳಿಂದ ನೋವು, ಅವಮಾನ ಅನುಭವಿಸಿದ ಜನತೆಗೆ ಆತ್ಮವಿಶ್ವಾಸ, ಆತ್ಮಗೌರವ ದೊರೆತು ಹಲವಾರು ಅರ್ಥಪೂರ್ಣ ಅನುಭವಸ್ಥರುಗಳೊಂದಿಗೆ ಸಾಂಸ್ಕೃತಿಕ ರಾಜಕೀಯ ಕ್ರಿಯೆಯಲ್ಲಿ ಭಾಗವಹಿಸುವುದು ಸಾಧ್ಯವಾಗಿದೆ ಎಂಬುದು.

ಒಂದು ಅನಕ್ಷರಸ್ಥ ದಲಿತ ಕುಟುಂಬ, ಹಿಂದುಳಿದವರ ಕುಟುಂಬ ಈ ವಲಯಗಳಲ್ಲಿ ಅನುಭವಿಸುವ ದಿಗ್ಭ್ರಮೆ ಅವರಿಗೆ ಮಾತ್ರ ಗೊತ್ತಾಗುವಂಥದು. ಮೀಸಲಾತಿ ವಿರೋಧಿಸುವ, ಇವರ ಕಷ್ಟಗಳನ್ನು ಅರ್ಥಮಾಡಿಕೊಳ್ಳದ ಜನರಿಂದಲೇ ಈ ಬಗೆಯ ದಿಗ್ಭ್ರಮೆ ಹುಟ್ಟಿದೆ ಮತ್ತು ಈ ಜನರಿಂದಲೇ ಇವತ್ತು ಏನನ್ನೂ ಮಾಡಲಾರದ ಸ್ಥಿತಿಯನ್ನು ಸರ್ಕಾರಗಳು ತಲುಪಿವೆ. ಸರ್ಕಾರ, ಸಾಂಸ್ಕøತಿಕ ವ್ಯವಸ್ಥೆ ನೇರಗೊಳ್ಳದೆ ಇಲ್ಲಿ ಅಸಹಾಯಕರಿಗೆ ನೆಮ್ಮದಿ, ಕನ್ನಡದ ಸಂಪೂರ್ಣ ವಿಕಾಸ ಕಷ್ಟಸಾಧ್ಯ.

ಈ ಸಮಾವೇಶ ಐತಿಹಾಸಿಕ ಎಂದು ನಾನಂತೂ ತಿಳಿದಿದ್ದೇನೆ. ನಿಜಕ್ಕೂ ಕ್ರಿಯಾಶೀಲ ಸಾಹಿತಿಗಳಾಗಿರುವ, ಸಂಶೋಧಕರಾಗಿರುವ ಎಲ್ಲ ಜಾತಿ ಹಿನ್ನೆಲೆಯ ಜನ ಒಂದೆಡೆ ಸೇರಿ ಚರ್ಚಿಸುವುದು, ಕೃತಿಗಳ, ಸಂಶೋಧನೆಯ ಬೆಲೆ ಕಟ್ಟುವುದು ಅಗತ್ಯವಾಗಿದೆ. ಹಿಂದುಳಿದವರು, ದಲಿತರು ತಮ್ಮ ತಮ್ಮ ಕೃತಿಗಳನ್ನು ತಮ್ಮ ತಮ್ಮ ಮಾನದಂಡಕ್ಕೆ ತಕ್ಕಂತೆ ನಿರ್ಧರಿಸುವುದಕ್ಕೆ ಬದಲು ತಮ್ಮಿಂದ ಹೊರತಾದ ಮಾಪನದ ಸವಾಲು ಎತ್ತಿಕೊಳ್ಳಬೇಕಾಗಿದೆ. ಅಂತೆಯೇ ಈ ಸಮಾಜಕ್ಕೆ ಪರಂಪರಾಗತವಾಗಿ ಬಂದಿರುವ ಅಂಧತ್ವವನ್ನು ಎಲ್ಲರೂ ಗಮನಿಸಬೇಕಾಗಿದೆ. ಪರಕೀಯರ ಆಕ್ರಮಣ, ದಬ್ಬಾಳಿಕೆಯಿಂದ ತತ್ತಿರಿಸಿಹೋದ ಜನರು ಜಾತೀಯತೆಯ ಸಣ್ಣಪುಟ್ಟ ಗುಂಪಿನ ರಕ್ಷಣೆಯಲ್ಲಿ, ಇದ್ದುದ್ದನ್ನು ಹೇಗಾದರೂ ಮಾಡಿ ಕಾಪಾಡಿಕೊಳ್ಳಲು ಯತ್ನಿಸಿದರು. ಹೊಸಬರ ಅಕ್ಷರಾಭ್ಯಾಸ, ಸಂವೇದನೆಯ ವಿಚಾರವೇ ಅವರನ್ನು ಬೆಚ್ಚಿಸಿತು. ಇದರಿಂದ ಸಾಹಿತ್ಯ, ಛಂದಸ್ಸು, ವ್ಯಾಕರಣಗಳೆಲ್ಲ ಜೀವಂತ ಅನುಭವದೊಂದಿಗಿನ ಪ್ರಯೋಗಗಳಾಗದೆ ಜಡ ಶಾಸ್ತ್ರಗಳಾದವು. ಸಾಹಿತ್ಯವನ್ನು ನೋಡುವ ಕಣ್ಣು ಕುರುಡಾದವು. ಜಾತಿಯ ವಲಯವನ್ನು ಮೀರಿದ ಸತ್ಯ ಇರಬಹುದೆಂಬುದು ಅವರಿಗೆ ತಿಳಿಯಲೇ ಇಲ್ಲ. ಈ ಕಾರಣಕ್ಕಾಗಿಯೇ ದಲಿತರಿಗೆ, ಹಿಂದುಳಿದವರಿಗೆ ಅವರ ಸದ್ಯದ ಅನ್ನಿಸಿಕೆಯನ್ನು ಮೀರಿದ ಮಾಪನ, ಮೌಲ್ಯ ಇರುವುದು ಗೊತ್ತಾಗಬೇಕಾಗಿರುವಂತೆಯೇ ಪರಂಪರಾಗತ ಅನುಭವಗಳ ಕುರುಡರೂ ತಮ್ಮ ಕಣ್ಣು ತೆರೆದು ತಮ್ಮಿಂದ ಹೊರಗಿರುವ ಮಾಪನವನ್ನು ಗಮನಿಸಬೇಕಾಗಿದೆ. ಅರ್ಜುನ, ಏಕಲವ್ಯರ ಪ್ರತಿಭೆ ಈ ಸತ್ಯದೆದುರು ಅರಳಬೇಕಾಗಿದೆ.

ಸಾಹಿತಿ ವಿಚಿತ್ರ ಸಾತಂತ್ರ್ಯ ಪ್ರೇಮಿ. ರಾಜಕೀಯ ಹಂಗುತೊರೆದ ನಿಷ್ಠುರ. ಇಲ್ಲಿ ಕೂಡ ಸಾಹಿತಿಯ ದಿಟ್ಟತನ, ನಿಷ್ಠುರತೆಯನ್ನು ಗಮನಿಸುತ್ತಾ ನಾವು ಆತನ ಅಸಹಾಯಕತೆಯನ್ನು ಮರೆಯದಿರೋಣ. ಸಾಹಿತಿ ಮತ್ತು ಸಹೃದಯನ, ಸಾಹಿತಿ ಮತ್ತು ಸಂಶೋಧಕನ, ಸಾಹಿತಿ ಮತ್ತು ಓದುಗನ ಸಂಬಂಧ ಮುಖ್ಯವಾದುದ್ದು. ಸಾಹಿತಿಗೆ ನಿಜವಾದ ಕೃತಕೃತ್ಮತೆ ದೊರೆಯುವುದು ಆತ ಈ ಸೇತುವೆಗಳನ್ನು ಕಂಡುಕೊಂಡಾಗ. ತನ್ನ ಅಂತರಾಳದಲ್ಲಿ ಸಲ್ಲುವ ಆತ ಸಹೃದಯನ ಆಂತರ್ಯದಲ್ಲಿ ಸಲ್ಲುವಂತಾದಾಗ. ಆದ್ದರಿಂದಲೇ ಈ ಸಾಹಿತ್ಯ ಸಮಾವೇಶ ರಾಜಕೀಯ, ಸಾಂಸ್ಕೃತಿಕ, ಆರ್ಥಿಕ ವಿಷಯಗಳನ್ನೆಲ್ಲ ಒಳಗೊಂಡು ಸಾಹಿತ್ಯದಲ್ಲಿನ ವರ್ಣ, ವರ್ಗವನ್ನೆಲ್ಲ ಧ್ಯಾನಿಸುವಂತಾಗಬೇಕು. ಇಲ್ಲಿಯ ಚರ್ಚೆ ಮತ್ತು ವಾದ ಮೈಲುಗಟ್ಟಲೆ ಬಾಹ್ಯವನ್ನು ಕ್ರಮಿಸುವಾಗಲೇ ಸಾಹಿತಿಯ ಪುಟ್ಟ, ಮನೋಹರ, ವ್ಯಸನಗಳ, ನೋವುಗಳ ಜಗತ್ತನ್ನೂ ನೋಡಬೇಕು. ಆಗಲೇ ಕನ್ನಡ ಸಾಹಿತ್ಯ ಕನ್ನಡ ಭಾಷೆಗೆ ಅಮೂಲ್ಯ ಕೊಡುಗೆ ನೀಡುವ ಶಕ್ತಿ ಪಡೆಯುತ್ತದೆ: ವ್ಯಾಕರಣದ ಬದ್ಧತೆ ಮತ್ತು ಅನುಭವದ ಉಜ್ವಲತೆ ನಮ್ಮದಾಗುತ್ತದೆ. ಎಲ್ಲ ನಿರ್ಜೀವ ಸಂಸ್ಥೆಗಳ ವಿರುದ್ಧ ಸಾಹಿತಿ ಮತ್ತು ಸಾಹಿತ್ಯ ಕೃತಿಗಳ ಸೂಕ್ಷ್ಮಜ್ಞ ಪ್ರತಿಭಟನೆಯಾಗುತ್ತದೆ”.

ಅಪ್ಪ ಈ ಆಶಯಗಳನ್ನು ವ್ಯಕ್ತಪಡಿಸಿ ಹತ್ತಿರತ್ತಿರ ಎರಡು ದಶಕಗಳಾಗಿದ್ದರೂ ಪರಿಸ್ಥಿತಿ ಉದ್ಧಾರವಾಗುವ ಬದಲು ಇನ್ನಷ್ಟು ಕೆಟ್ಟಿದೆ, ಅದು ನಿರುತ್ಸಾಹ ತರುವ ಸಂಗತಿ.

ಇದನ್ನು ಓದಿರಿ ಗೌರಿ ಕಣ್ಣೋಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...