Homeಅಂಕಣಗಳುಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ಓದಿರಿ ಗೌರಿ ಕಣ್ಣೋಟ

- Advertisement -
- Advertisement -

|ಗೌರಿ ಲಂಕೇಶ್ |

18 ಫೆಬ್ರವರಿ, 2009 (‘ಕಂಡಹಾಗೆ’ ಸಂಪಾದಕೀಯದಿಂದ)

1990ರಲ್ಲಿ ಅಪ್ಪ ಬರೆದಿದ್ದ ‘ಸಾಹಿತ್ಯ ಪರಿಷತ್ತು ಮತ್ತು ಸಾಹಿತಿಗಳು’ ಎಂಬ ಲೇಖನದಲ್ಲಿ ಸಾಹಿತ್ಯ ಪರಿಷತ್ತಿನ ಆರಂಭಿಕ ಆಶಯಗಳನ್ನು ಮೆಚ್ಚಿದ್ದರೂ ಆನಂತರ ಅದರಲ್ಲಿ ನಡೆದ ಸೆಣಸಾಟ, ಹೊಡೆದಾಟ, ಜಾತಿ ರಾಜಕೀಯ ಇತ್ಯಾದಿಗಳ ಬಗ್ಗೆ ಬೇಸರಗೊಂಡಿದ್ದರ ಬಗ್ಗೆ ಹೇಳುತ್ತಾರೆ.

“ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನಗಳಲ್ಲಿ ಆದ ಜಗಳಗಳು, ವಿವಾದ, ಹಗರಣಗಳು ಇವೆಲ್ಲವನ್ನು ನೋಡುತ್ತಿದ್ದ ಸೂಕ್ಷ್ಮ ಮನಸ್ಸಿನ ಸಾಹಿತಿಗಳಲ್ಲಿ ಅಸಹ್ಯ ಹುಟ್ಟಿಸಿದವು. ಸಾಹಿತಿಗಳೆಂದರೆ ಲಜ್ಜೆಯ, ಘನತೆಯ ವ್ಯಕ್ತಿಗಳು ಎಂದು ತಿಳಿದಿದ್ದವರಿಗೆ ದಿಗ್ಭ್ರಮೆಯಾಯಿತು. ಸಾಹಿತ್ಯ ಮೂಲಭೂತವಾಗಿ ನಿಷ್ಪಕ್ಷಪಾತವಾದುದು ಎಂದು ತಿಳಿದವರಿಗೆ ಸಾಹಿತ್ಯದ ಇತರೆ ಮುಖಗಳು ಕಾಣತೊಡಗಿದವು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜಕೀಯ ಮುಖಂಡನಂತೆ ಮೆರೆಯತೊಡಗಿದರೆ, ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಉತ್ಸವ ಮೂರ್ತಿಯಾಗಿ ವಿಜೃಂಭಿಸತೊಡಗಿದ… ರಾಜಕೀಯ ಚುನಾವಣೆಯ ಕೊಳಕುತನವನ್ನೆಲ್ಲ ಮೀರಿಸತೊಡಗಿದ ಪರಿಷತ್ತು ಎಲ್ಲರ ತಾತ್ಸಾರಕ್ಕೆ ಗುರಿಯಾಗತೊಡಗಿತು”. ಎಂದು ಅಪ್ಪ ಅದೇ ಲೇಖನದಲ್ಲಿ ಬರೆದಿದ್ದಾರೆ.

ಕನ್ನಡಿಗರಲ್ಲಿ ಯಾವುದೇ ಸ್ಫೂರ್ತಿ, ಭರವಸೆ ಮೂಡಿಸಲಾಗದಂತಹ ಅವಸ್ಥೆಯ ಮಟ್ಟಕ್ಕೆ ಪರಿಷತ್ ಇಳಿದಾಗ ಅಪ್ಪ ಮತ್ತು ಇತರ ಸಾಹಿತಿಗಳಿಗೆ ಉಳಿದಿದ್ದ ಮಾರ್ಗ ‘ಜಾಗೃತ ಸಾಹಿತ್ಯ ಸಮಾವೇಶ’ವನ್ನು ಪ್ರತ್ಯೇಕವಾಗಿ ಏರ್ಪಡಿಸುವುದು. ಫೆಬ್ರವರಿ 16, 1990ರಲ್ಲಿ ನಡೆದ ಈ ‘ಜಾಗೃತ ಸಾಹಿತ್ಯ ಸಮಾವೇಶ’ವನ್ನು ಅಪ್ಪ ಉದ್ಘಾಟಿಸಿ ಮಾಡಿದ ಭಾಷಣದ ತುಣುಕು ಹೀಗಿದೆ…

“ರಾಜ್ಯಭಾಷೆ ಬಹುಸಂಖ್ಯಾತ ಜನರ ಮಾತೃಭಾಷೆ. ಆಡಳಿತ ಭಾಷೆ, ವ್ಯವಹಾರ ಭಾಷೆ-ಅದು ನಮ್ಮಲ್ಲಿ ಕನ್ನಡ: ಹಾಗೆಯೇ ಬಳ್ಳಾರಿಯ ಒಂದು ಹಳ್ಳಿಯೊಂದರಲ್ಲಿ ವಾಸಿಸುವ ತೆಲುಗರ ಆಡಳಿತ ಭಾಷೆ, ವ್ಯವಹಾರ ಭಾಷೆ ಕನ್ನಡ: ಅಂತೆಯೇ ಅವರೆಲ್ಲರ ಮಾತೃಭಾಷೆಯನ್ನು ನಾಶಮಾಡುವುದು ಕರ್ನಾಟಕ ಆಡಳಿತದ ಉದ್ದೇಶವಾಗಕೂಡದು.

ಒಂದು ರಾಜ್ಯ ಪೂರ್ಣ ಸಾಕ್ಷರತೆಯತ್ತ ಸಾಗಿದೆ ಎಂದರೆ ಅರ್ಥ, ಇಲ್ಲಿಯ ಎಲ್ಲ, ವರ್ಗ, ಜಾತಿಯ ಜನರಿಗೆ ಹೊಸತೊಂದು ಶಕ್ತಿ, ಹೊಸತೊಂದು ಚೈತನ್ಯ ಬಂದಿದೆ ಎಂಬುದು: ಹಾಗೆಯೇ ಮುಂದುವರಿದ ಜಾತಿಗಳ ಸ್ವತ್ತಾಗಿದ್ದ ನೆನಪನ್ನು ದಾಖಲಿಸುವ, ಅನುಭವವನ್ನು ನಮೂದಿಸುವ, ಗ್ರಂಥಗಳನ್ನು ರಚಿಸುವ ಬರವಣಿಗೆಯ ಸವಲತ್ತು ದಲಿತರಿಗೆ, ಹಿಂದುಳಿದವರಿಗೆ ಕೂಡ ದೊರೆತಿದೆ ಎಂಬುದು; ಹಾಗೆಯೆ ಲಕ್ಷಾಂತರ ವರ್ಷಗಳಿಂದ ನೋವು, ಅವಮಾನ ಅನುಭವಿಸಿದ ಜನತೆಗೆ ಆತ್ಮವಿಶ್ವಾಸ, ಆತ್ಮಗೌರವ ದೊರೆತು ಹಲವಾರು ಅರ್ಥಪೂರ್ಣ ಅನುಭವಸ್ಥರುಗಳೊಂದಿಗೆ ಸಾಂಸ್ಕೃತಿಕ ರಾಜಕೀಯ ಕ್ರಿಯೆಯಲ್ಲಿ ಭಾಗವಹಿಸುವುದು ಸಾಧ್ಯವಾಗಿದೆ ಎಂಬುದು.

ಒಂದು ಅನಕ್ಷರಸ್ಥ ದಲಿತ ಕುಟುಂಬ, ಹಿಂದುಳಿದವರ ಕುಟುಂಬ ಈ ವಲಯಗಳಲ್ಲಿ ಅನುಭವಿಸುವ ದಿಗ್ಭ್ರಮೆ ಅವರಿಗೆ ಮಾತ್ರ ಗೊತ್ತಾಗುವಂಥದು. ಮೀಸಲಾತಿ ವಿರೋಧಿಸುವ, ಇವರ ಕಷ್ಟಗಳನ್ನು ಅರ್ಥಮಾಡಿಕೊಳ್ಳದ ಜನರಿಂದಲೇ ಈ ಬಗೆಯ ದಿಗ್ಭ್ರಮೆ ಹುಟ್ಟಿದೆ ಮತ್ತು ಈ ಜನರಿಂದಲೇ ಇವತ್ತು ಏನನ್ನೂ ಮಾಡಲಾರದ ಸ್ಥಿತಿಯನ್ನು ಸರ್ಕಾರಗಳು ತಲುಪಿವೆ. ಸರ್ಕಾರ, ಸಾಂಸ್ಕøತಿಕ ವ್ಯವಸ್ಥೆ ನೇರಗೊಳ್ಳದೆ ಇಲ್ಲಿ ಅಸಹಾಯಕರಿಗೆ ನೆಮ್ಮದಿ, ಕನ್ನಡದ ಸಂಪೂರ್ಣ ವಿಕಾಸ ಕಷ್ಟಸಾಧ್ಯ.

ಈ ಸಮಾವೇಶ ಐತಿಹಾಸಿಕ ಎಂದು ನಾನಂತೂ ತಿಳಿದಿದ್ದೇನೆ. ನಿಜಕ್ಕೂ ಕ್ರಿಯಾಶೀಲ ಸಾಹಿತಿಗಳಾಗಿರುವ, ಸಂಶೋಧಕರಾಗಿರುವ ಎಲ್ಲ ಜಾತಿ ಹಿನ್ನೆಲೆಯ ಜನ ಒಂದೆಡೆ ಸೇರಿ ಚರ್ಚಿಸುವುದು, ಕೃತಿಗಳ, ಸಂಶೋಧನೆಯ ಬೆಲೆ ಕಟ್ಟುವುದು ಅಗತ್ಯವಾಗಿದೆ. ಹಿಂದುಳಿದವರು, ದಲಿತರು ತಮ್ಮ ತಮ್ಮ ಕೃತಿಗಳನ್ನು ತಮ್ಮ ತಮ್ಮ ಮಾನದಂಡಕ್ಕೆ ತಕ್ಕಂತೆ ನಿರ್ಧರಿಸುವುದಕ್ಕೆ ಬದಲು ತಮ್ಮಿಂದ ಹೊರತಾದ ಮಾಪನದ ಸವಾಲು ಎತ್ತಿಕೊಳ್ಳಬೇಕಾಗಿದೆ. ಅಂತೆಯೇ ಈ ಸಮಾಜಕ್ಕೆ ಪರಂಪರಾಗತವಾಗಿ ಬಂದಿರುವ ಅಂಧತ್ವವನ್ನು ಎಲ್ಲರೂ ಗಮನಿಸಬೇಕಾಗಿದೆ. ಪರಕೀಯರ ಆಕ್ರಮಣ, ದಬ್ಬಾಳಿಕೆಯಿಂದ ತತ್ತಿರಿಸಿಹೋದ ಜನರು ಜಾತೀಯತೆಯ ಸಣ್ಣಪುಟ್ಟ ಗುಂಪಿನ ರಕ್ಷಣೆಯಲ್ಲಿ, ಇದ್ದುದ್ದನ್ನು ಹೇಗಾದರೂ ಮಾಡಿ ಕಾಪಾಡಿಕೊಳ್ಳಲು ಯತ್ನಿಸಿದರು. ಹೊಸಬರ ಅಕ್ಷರಾಭ್ಯಾಸ, ಸಂವೇದನೆಯ ವಿಚಾರವೇ ಅವರನ್ನು ಬೆಚ್ಚಿಸಿತು. ಇದರಿಂದ ಸಾಹಿತ್ಯ, ಛಂದಸ್ಸು, ವ್ಯಾಕರಣಗಳೆಲ್ಲ ಜೀವಂತ ಅನುಭವದೊಂದಿಗಿನ ಪ್ರಯೋಗಗಳಾಗದೆ ಜಡ ಶಾಸ್ತ್ರಗಳಾದವು. ಸಾಹಿತ್ಯವನ್ನು ನೋಡುವ ಕಣ್ಣು ಕುರುಡಾದವು. ಜಾತಿಯ ವಲಯವನ್ನು ಮೀರಿದ ಸತ್ಯ ಇರಬಹುದೆಂಬುದು ಅವರಿಗೆ ತಿಳಿಯಲೇ ಇಲ್ಲ. ಈ ಕಾರಣಕ್ಕಾಗಿಯೇ ದಲಿತರಿಗೆ, ಹಿಂದುಳಿದವರಿಗೆ ಅವರ ಸದ್ಯದ ಅನ್ನಿಸಿಕೆಯನ್ನು ಮೀರಿದ ಮಾಪನ, ಮೌಲ್ಯ ಇರುವುದು ಗೊತ್ತಾಗಬೇಕಾಗಿರುವಂತೆಯೇ ಪರಂಪರಾಗತ ಅನುಭವಗಳ ಕುರುಡರೂ ತಮ್ಮ ಕಣ್ಣು ತೆರೆದು ತಮ್ಮಿಂದ ಹೊರಗಿರುವ ಮಾಪನವನ್ನು ಗಮನಿಸಬೇಕಾಗಿದೆ. ಅರ್ಜುನ, ಏಕಲವ್ಯರ ಪ್ರತಿಭೆ ಈ ಸತ್ಯದೆದುರು ಅರಳಬೇಕಾಗಿದೆ.

ಸಾಹಿತಿ ವಿಚಿತ್ರ ಸಾತಂತ್ರ್ಯ ಪ್ರೇಮಿ. ರಾಜಕೀಯ ಹಂಗುತೊರೆದ ನಿಷ್ಠುರ. ಇಲ್ಲಿ ಕೂಡ ಸಾಹಿತಿಯ ದಿಟ್ಟತನ, ನಿಷ್ಠುರತೆಯನ್ನು ಗಮನಿಸುತ್ತಾ ನಾವು ಆತನ ಅಸಹಾಯಕತೆಯನ್ನು ಮರೆಯದಿರೋಣ. ಸಾಹಿತಿ ಮತ್ತು ಸಹೃದಯನ, ಸಾಹಿತಿ ಮತ್ತು ಸಂಶೋಧಕನ, ಸಾಹಿತಿ ಮತ್ತು ಓದುಗನ ಸಂಬಂಧ ಮುಖ್ಯವಾದುದ್ದು. ಸಾಹಿತಿಗೆ ನಿಜವಾದ ಕೃತಕೃತ್ಮತೆ ದೊರೆಯುವುದು ಆತ ಈ ಸೇತುವೆಗಳನ್ನು ಕಂಡುಕೊಂಡಾಗ. ತನ್ನ ಅಂತರಾಳದಲ್ಲಿ ಸಲ್ಲುವ ಆತ ಸಹೃದಯನ ಆಂತರ್ಯದಲ್ಲಿ ಸಲ್ಲುವಂತಾದಾಗ. ಆದ್ದರಿಂದಲೇ ಈ ಸಾಹಿತ್ಯ ಸಮಾವೇಶ ರಾಜಕೀಯ, ಸಾಂಸ್ಕೃತಿಕ, ಆರ್ಥಿಕ ವಿಷಯಗಳನ್ನೆಲ್ಲ ಒಳಗೊಂಡು ಸಾಹಿತ್ಯದಲ್ಲಿನ ವರ್ಣ, ವರ್ಗವನ್ನೆಲ್ಲ ಧ್ಯಾನಿಸುವಂತಾಗಬೇಕು. ಇಲ್ಲಿಯ ಚರ್ಚೆ ಮತ್ತು ವಾದ ಮೈಲುಗಟ್ಟಲೆ ಬಾಹ್ಯವನ್ನು ಕ್ರಮಿಸುವಾಗಲೇ ಸಾಹಿತಿಯ ಪುಟ್ಟ, ಮನೋಹರ, ವ್ಯಸನಗಳ, ನೋವುಗಳ ಜಗತ್ತನ್ನೂ ನೋಡಬೇಕು. ಆಗಲೇ ಕನ್ನಡ ಸಾಹಿತ್ಯ ಕನ್ನಡ ಭಾಷೆಗೆ ಅಮೂಲ್ಯ ಕೊಡುಗೆ ನೀಡುವ ಶಕ್ತಿ ಪಡೆಯುತ್ತದೆ: ವ್ಯಾಕರಣದ ಬದ್ಧತೆ ಮತ್ತು ಅನುಭವದ ಉಜ್ವಲತೆ ನಮ್ಮದಾಗುತ್ತದೆ. ಎಲ್ಲ ನಿರ್ಜೀವ ಸಂಸ್ಥೆಗಳ ವಿರುದ್ಧ ಸಾಹಿತಿ ಮತ್ತು ಸಾಹಿತ್ಯ ಕೃತಿಗಳ ಸೂಕ್ಷ್ಮಜ್ಞ ಪ್ರತಿಭಟನೆಯಾಗುತ್ತದೆ”.

ಅಪ್ಪ ಈ ಆಶಯಗಳನ್ನು ವ್ಯಕ್ತಪಡಿಸಿ ಹತ್ತಿರತ್ತಿರ ಎರಡು ದಶಕಗಳಾಗಿದ್ದರೂ ಪರಿಸ್ಥಿತಿ ಉದ್ಧಾರವಾಗುವ ಬದಲು ಇನ್ನಷ್ಟು ಕೆಟ್ಟಿದೆ, ಅದು ನಿರುತ್ಸಾಹ ತರುವ ಸಂಗತಿ.

ಇದನ್ನು ಓದಿರಿ ಗೌರಿ ಕಣ್ಣೋಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...