Homeಅಂತರಾಷ್ಟ್ರೀಯಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

ಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

- Advertisement -
- Advertisement -

ಹಮಾಸ್ ಬಂಡುಕೋರರ ವಿರುದ್ದ ನಡೆಸಿದ್ದೇವೆ ಎಂದು ಹೇಳಿ, ಇಸ್ರೇಲ್ ಸೇನೆ ಮೇ ತಿಂಗಳಲ್ಲಿ ಗಾಝಾ ಮೇಲೆ ನಡೆಸಿದ 11 ದಿನಗಳ ದಾಳಿಯು ಸ್ಪಷ್ಟವಾಗಿ ಯುದ್ದಾಪರಾಧ ಕೃತ್ಯಗಳಿಗೆ ಹೋಲುತ್ತದೆ ಎಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ‘ಹ್ಯೂಮನ್ ರೈಟ್ಸ್ ವಾಚ್’(ಎಚ್‌ಆರ್‌ಡಬ್ಲ್ಯೂ) ಮಂಗಳವಾರ ಆರೋಪಿಸಿದೆ.

ಮೂರು ಇಸ್ರೇಲಿ ವೈಮಾನಿಕ ದಾಳಿಯ ತನಿಖೆ ನಡೆಸಿದ ಎಚ್‌ಆರ್‌ಡಬ್ಲ್ಯೂ ತನ್ನ ತೀರ್ಮಾನಗಳನ್ನು ಹೊರಡಿಸಿದ್ದು, ಈ ದಾಳಿಯಿಂದಾಗಿ 62 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅದು ಹೇಳಿದೆ. ಈ ದಾಳಿಯು ಯಾವುದೇ ಸ್ಪಷ್ಟ ಮಿಲಿಟರಿ ಗುರಿಗಳಿಲ್ಲದೆ ನಡೆಸಲಾಗಿದೆ ಎಂದು ಅದು ಹೇಳಿದೆ.

ಇಸ್ರೇಲಿ ಜನ ವಸತಿ ಕೇಂದ್ರಗಳ ಮೇಲೆ 4,000 ಕ್ಕೂ ಹೆಚ್ಚು ಗೊತ್ತುಗುರಿಯಿಲ್ಲದ ರಾಕೆಟ್‌ಗಳು ಮತ್ತು ಮೋರ್ಟರ್‌‌ಗಳನ್ನು ಉಡಾಯಿಸುವ ಮೂಲಕ ಪ್ಯಾಲೆಸ್ತೀನಿ ಬಂಡುಕೋರರು ಕೂಡಾ ಯುದ್ಧಾಪರಾಧಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಈ ದಾಳಿಗಳು ನಾಗರಿಕರ ವಿರುದ್ಧ ಉದ್ದೇಶಪೂರ್ವಕ ಅಥವಾ ವಿವೇಚನೆಯಿಲ್ಲದ ದಾಳಿಯ ನಿಷೇಧವನ್ನು ಉಲ್ಲಂಘಿಸಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಅದಾಗ್ಯೂ ಈ ವರದಿಯು ಇಸ್ರೇಲ್ ಮಾಡಿದ ಕ್ರಮಗಳನ್ನು ಕೇಂದ್ರವಾಗಿಟ್ಟು ಮಾಡಲಾಗಿದ್ದು, ಆಗಸ್ಟ್‌‌ನಲ್ಲಿ ಹಮಾಸ್ ಮತ್ತು ಇತರ ಪ್ಯಾಲೆಸ್ತೀನಿಯನ್‌ ಬಂಡುಕೋರರ ಗುಂಪುಗಳ ಕ್ರಮಗಳ ಬಗ್ಗೆ ಪ್ರತ್ಯೇಕ ವರದಿಯನ್ನು ನೀಡುವುದಾಗಿ ಎಚ್ಆರ್‌‌ಡಬ್ಲ್ಯೂ ಹೇಳಿದೆ.

“ಇಸ್ರೇಲಿ ಪಡೆಗಳು ಮೇ ತಿಂಗಳಲ್ಲಿ ಗಾಝಾದಲ್ಲಿ ದಾಳಿ ನಡೆಸಿದವು, ಅದು ಯಾವುದೇ ಮಿಲಿಟರಿ ಗುರಿಯಿಲ್ಲದೆ ಇಡೀ ಕುಟುಂಬಗಳನ್ನು ಧ್ವಂಸಮಾಡಿತು” ಎಂದು ಎಚ್‌ಆರ್‌ಡಬ್ಲ್ಯೂನ ನಿರ್ದೇಶಕ ಗೆರ್‍ರಿ ಸಿಂಪ್ಸನ್ ಹೇಳಿದ್ದಾರೆ. ಇಸ್ರೇಲ್‌ಗೆ ಆಪಾದಿತ ಯುದ್ಧಾಪರಾಧಗಳನ್ನು ಗಂಭೀರವಾಗಿ ತನಿಖೆ ಮಾಡಲು ಮನಸ್ಸಿಲ್ಲ ಎಂದು ಅವರು ಹೇಳಿದ್ದಾರೆ.

ದಾಳಿಯು ಮಿಲಿಟರಿ ಗುರಿಗಳನ್ನು ಗುರಿಯಾಗಿರಿಸಿಕೊಂಡು ಮಾಡಿದ್ದು, ನಾಗರಿಕರಿಗೆ ಹಾನಿಯಾಗದಂತೆ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಇಸ್ರೇಲಿ ಸೈನ್ಯವು ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ನಾಗರಿಕರ ಸಾವುನೋವುಗಳಿಗೆ ಹಮಾಸ್ ಕಾರಣ ಎಂದು ಅದು ಆರೋಪಿಸಿದೆ.

ಮೇ 10 ರಂದು ಇಸ್ರೇಲ್ ತನ್ನ ಸೈನ್ಯವನ್ನು ಅಲ್-ಅಕ್ಸಾ ಮಸೀದಿ ಕಾಂಪೌಂಡ್ ಒಳಗೆ ಜಮಾಯಿಸಿದ ನಂತರ ಸಂಘರ್ಷವು ಭುಗಿಲೆದ್ದಿತ್ತು. ಜೊತೆಗೆ ಹತ್ತಾರು ಪ್ಯಾಲೆಸ್ತೀನ್‌‌ ಕುಟುಂಬಗಳನ್ನು ಅಕ್ರಮವಾಗಿ ಅವರ ಮನೆಯಿಂದ ಹೊರಹಾಕುವ ಬೆದರಿಕೆ ಹಾಕಲಾಯಿತು. ಇಸ್ರೇಲ್‌ನ ಹೊರಹಾಕುವಿಕೆಯ ವಿರುದ್ಧ ಪ್ಯಾಲೆಸ್ತೀನಿಯನ್‌ ಪ್ರತಿಭಟನೆಗಳ ಬೆಂಬಲವಾಗಿ ಹಮಾಸ್ ಜೆರುಸಲೆಮ್ ಕಡೆಗೆ ರಾಕೆಟ್ ಹಾರಿಸಿತ್ತು.

ಇದನ್ನೂ ಓದಿ: ಇಸ್ರೇಲ್‌ ಪರವಾದ ಭಾರತದ ನಿಲುವು; ಪ್ಯಾಲಿಸ್ತೇನ್‌ ವಿಷಾದದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...