Homeಅಂತರಾಷ್ಟ್ರೀಯತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ: ಪಾಕ್ ಪಿಎಂ ಇಮ್ರಾನ್ ಖಾನ್

ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ: ಪಾಕ್ ಪಿಎಂ ಇಮ್ರಾನ್ ಖಾನ್

- Advertisement -
- Advertisement -

30 ಲಕ್ಷ ಜನ ಆಫ್ಘನ್ ನಿರಾಶ್ರಿತರು ಪಾಕ್ ಗಡಿಯಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರನ್ನು ಬಗ್ಗು ಬಡಿಯಲು ಸಾಧ್ಯವೇ? ಅಷ್ಟಕ್ಕೂ ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ ಎಂದು ಪಾಕ್ ಪಿಎಂ ಇಮ್ರಾನ್ ಖಾನ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಪಿಬಿಎಸ್ ನ್ಯೂಸ್‌ಹವರ್ ಎಂಬ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, “ಪಾಕಿಸ್ತಾನವು 30 ಜನ ಆಫ್ಘನ್ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಅವರಲ್ಲಿ ಬಹುತೇಕರು ತಾಲಿಬಾನ್ ಜನಾಂಗೀಯ ಗುಂಪಿಗೆ ಸೇರಿದ ಪಶ್ತೂನ್‌ ಜನಾಂಗವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ.

ತಾಲಿಬಾನಿಗಳಿಗೆ ಪಾಕಿಸ್ತಾನ ಸುರಕ್ಷಿತ ಸ್ವರ್ಗವಾಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಖಾನ್ “ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ. ಅಂತವರು ಈ ನಿರಾಶ್ರಿತರ ಕ್ಯಾಂಪ್‌ನಲ್ಲಿದ್ದರೆ ಅವರನ್ನು ಬಗ್ಗು ಬಡಿಯಬೇಕೆಂದು ಹೇಗೆ ಹೇಳುತ್ತೀರಿ” ಎಂದು ಖಾನ್ ಪ್ರಶ್ನಿಸಿದ್ದಾರೆ.

ಪಾಕಿಸ್ತಾನವು ತಾಲಿಬಾನಿಗಳಿಗೆ ಆಫ್ಘಾನಿಸ್ತಾನದ ವಿರುದ್ಧ ಹೋರಾಡಲು ಸೈನಿಕವಾಗಿ ಮತ್ತು ಆರ್ಥಿಕವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಬಹಳ ಹಿಂದಿನಿಂದಲೂ ಇದೆ ಎಂಬುದಕ್ಕೆ ಉತ್ತರಿಸಿದ ಅವರು, “ಇದೆಲ್ಲವು ಸುಳ್ಳು, ಅತ್ಯಂತ ಅಸಮಂಜಸ” ಎಂದಿದ್ದಾರೆ.

ಅಮೆರಿಕವು ಆಫ್ಘನ್‌ನಲ್ಲಿ ನಡೆಸಿದ ಯುದ್ದದಲ್ಲಿ ಸಾವಿರಾರು ಪಾಕಿಸ್ತಾನಿಯವರು ಪ್ರಾಣ ತೆತ್ತಿದ್ದಾರೆ. ಅಮೆರಿಕದ ಮೇಲಿನ ದಾಳಿಗೂ ಪಾಕಿಸ್ತಾನಕ್ಕೂ ಏನು ಸಂಬಂಧವಿಲ್ಲದಿದ್ದರೂ ನಮ್ಮವರು ಪ್ರಾಣ ತೆತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಜುಲೈ ಒಂದರಂದು ಇನ್ನು ಮುಂದೆ ಪಾಕ್ ಅಮೆರಿಕ ಪರ ಯಾವುದೇ ಯುದ್ದಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಘೋಷಿಸಿದ್ದರು.

ವಿಶ್ವಸಂಸ್ಥೆಯ ಭದ್ರತಾ ಕೌನ್ಸಿಲ್ ಸಿದ್ದಪಡಿಸಿದ ವರದಿಯ ಪ್ರಕಾರ ತೇಹ್ರಿಕ್ ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಎಂಬ 6000 ಜನರುಳ್ಳ ಭಯೋತ್ಪಾದನಾ ಗುಂಪು ಪಾಕ್ ಗಡಿಯಲ್ಲಿದೆ ಎನ್ನಲಾಗಿದೆ. ಇದು ಆಫ್ಘನ್ ತಾಲಿಬಾನ್ ಗುಂಪನ್ನು ಬೆಂಬಲಿಸುತ್ತಾ ಪಾಕಿಸ್ತಾನಿ ವಿರೋಧಿ ಉದ್ದೇಶವನ್ನು ಹೊಂದಿದೆ ಮತ್ತು ಆಫ್ಘನ್ ಸೈನ್ಯದ ವಿರುದ್ಧ ಹೋರಾಡಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಅಮೆರಿಕ ಪರ ಯುದ್ಧದಲ್ಲಿ ಪಾಕ್ ಭಾಗವಹಿಸುವುದಿಲ್ಲ: ಇಮ್ರಾನ್ ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...